AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Badami Election Result: ಬಾದಾಮಿ ವಿಧಾನಸಭಾ ಎಲೆಕ್ಷನ್​ 2023 ರಿಸಲ್ಟ್: ಈ ಬಾರಿ ಯಾರ ಬಾಯಿಗೆ ಬಾದಾಮಿ?

Badami Assembly Election Result 2023 Live Counting Updates: ಈ ಬಾರಿ ಬಾದಾಮಿ ವಿಧಾನಸಭೆ ಚುನಾವಣೆಯಲ್ಲಿ ಯಾರೇ ಗೆದ್ದರೂ ಮೊದಲ ಬಾರಿಗೆ ವಿಧಾನಸಭೆ ಮೆಟ್ಟಿಲು ಏರಲಿದ್ದಾರೆ.

Badami Election Result: ಬಾದಾಮಿ ವಿಧಾನಸಭಾ ಎಲೆಕ್ಷನ್​ 2023 ರಿಸಲ್ಟ್: ಈ ಬಾರಿ ಯಾರ ಬಾಯಿಗೆ ಬಾದಾಮಿ?
ಬಾದಾಮಿ ವಿಧಾನಸಭಾ ಕ್ಷೇತ್ರ
Follow us
ರಮೇಶ್ ಬಿ. ಜವಳಗೇರಾ
| Updated By: ಗಂಗಾಧರ​ ಬ. ಸಾಬೋಜಿ

Updated on: May 13, 2023 | 2:20 AM

Badami Assembly Election Result 2023: ಬಾದಾಮಿ ಎಂದರೆ ಎಲ್ಲರಿಗೂ ನೆನಪಾಗುವುದು ಕರ್ನಾಟಕವನ್ನಾಳಿದ ಹೆಮ್ಮೆಯ ಚಾಲುಕ್ಯ ರಾಜ ಮನೆತನ. ಅವರ ರಾಜಧಾನಿ ಬಾದಾಮಿ. ಅಂದು ಚಾಲುಕ್ಯರ ರಾಜಧಾನಿಯಾಗಿದ್ದ ಬಾದಾಮಿ ಇಂದು ಬಾಗಲಕೋಟೆ ಜಿಲ್ಲೆಯ ಒಂದು ತಾಲೂಕು ಕೇಂದ್ರವಾಗಿದೆ. ಇದು ರಾಜ್ಯದ ಪ್ರಸಿದ್ಧ ಪ್ರವಾಸಿತಾಣಗಳಲ್ಲಿ ಒಂದಾಗಿದೆ. ಬಾದಾಮಿ ಗುಹಾಲಯ, ಅಗಸ್ತ್ಯ ಸರೋವರ, ಬಾದಾಮಿ ಕೋಟೆ, ಭೂತನಾಥ ದೇವಾಲಯ, ಬಾದಾಮಿ ಬನಶಂಕರಿ ದೇವಸ್ಥಾನ, ಬಾದಾಮಿ ವಸ್ತು ಸಂಗ್ರಹಾಲಯವನ್ನು ಹಾಗೂ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳನ್ನು ನೋಡಲು ರಾಜ್ಯ, ದೇಶ ಹಾಗೂ ವಿದೇಶಗಳಿಂದಲೂ ಪ್ರವಾಸಿಗರು ಬಾದಾಮಿಗೆ ಭೇಟಿ ನೀಡುತ್ತಾರೆ.

ವಾಸ್ತುಶಿಲ್ಪದ ವೈಭವ ಸಾರುತ್ತರಿರುವ ಬಾದಾಮಿ ವಿಧಾನಸಭಾ ಕ್ಷೇತ್ರದ ರಾಜಕೀಯ ನೋಡುವುದಾದರೆ ಈ ಬಾರಿ ಜಿದ್ದಾಜಿದ್ದಿಯಿಂದ ಕೂಡಿದೆ. ಕಳೆದ ಅಂದರೆ 2018ರ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ ಕ್ಷೇತ್ರಗಳ ಪೈಕಿ ಬಾದಾಮಿ ಕೂಡ ಒಂದು. ಆಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಂದಿನ ಸಿಎಂ ಆಗಿದ್ದ ಸಿದ್ದರಾಮಯ್ಯ ಮತ್ತು ಅವರ ಎದುರಾಳಿಯಾಗಿ ಬಿಜೆಪಿಯ ಬಿ ಶ್ರೀರಾಮುಲು ಕಣಕ್ಕಿಳಿದಿದ್ದರು. ಹೀಗಾಗಿ ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿತ್ತು. ಆದ್ರೆ, ಈ ಬಾರಿ ಸಿದ್ದರಾಮಯ್ಯ ವರುಣಾಕ್ಕೆ ಹೋಗಿದ್ದರೆ, ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ಹೋಗಿದ್ದಾರೆ.

ಇನ್ನು ಈ ಬಾರಿಯ ಸಾಂಪ್ರದಾಯಿಕ ಎದುರಾಳಿಗಳಾದ ಪಟ್ಟಣಶೆಟ್ಟಿ ಹಾಗೂ ಚಿಮ್ಮನಕಟ್ಟಿ ಕುಟುಂಬಗಳ ನಡುವೆ ನಡೆಯುತ್ತಿದ್ದ ಜಿದ್ದಾಜಿದ್ದಿನ ಹೋರಾಟ ಈ ಬಾರಿಯ ಚುನಾವಣೆಯಲ್ಲಿ ಇಲ್ಲ. ಯಾಕಂದ್ರೆ ಮಾಜಿ ಸಚಿವ ಬಿಬಿ ಚಿಮ್ಮನಕಟ್ಟಿ ಅವರ ಪುತ್ರ ಭೀಮಸೇನ ಚಿಮ್ಮನಕಟ್ಟಿ ಸ್ಪರ್ಧಿಸಿದ್ದಾರೆ. ಆದ್ರೆ, ಎದುರಾಳಿ ಪಟ್ಟಣಶೆಟ್ಟಿ ಕುಟುಂಬದವರಿಲ್ಲ. ಬಿಜೆಪಿಯ ಟಿಕೆಟ್​ ಆಕಾಂಕ್ಷಿಯಾಗಿದ್ದ ಮಾಜಿ ಶಾಸಜ ಎಂಕೆ ಪಟ್ಟಣಶೆಟ್ಟಿ ಅವರನ್ನು ಬಿಟ್ಟು ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಶಾಂತನಗೌಡ ಅವರನ್ನು ಕಣಕ್ಕಿಳಿಸಲಾಗಿದೆ. ಇನ್ನು ಜೆಡಿಎಸ್​ನಿಂದ ಹನುಮಂತ ಮಾವಿನಮರದ ಸ್ಪರ್ಧಿಸಿದ್ದು, ತೀವ್ರ ಹಣಾಹಣಿ ಇದೆ.

ಬಿಜೆಪಿ ಶಾಂತಗೌಡ ಪಾಟೀಲ್ ಮತ್ತು ಹನುಮಂತ ಮಾವಿನಮರದ ಈ ಇಬ್ಬರೂ ಲೀಮಗಾಯತ ಸಮುದಾಯಕ್ಕೆ ಸೇರಿದ್ದವರಾಗಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಭೀಮಸೇನ್ ಚಿಮ್ಮನಕಟ್ಟಿ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು, ಗೆಲುವಿನ ಹಿಂದೆ ಜಾತಿ ಲೆಕ್ಕಾಚಾರ ಇದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್​ ನಡುವೆ ತ್ರೀಕೋನ ಸ್ಥರ್ಧೆ ಏರ್ಪಟ್ಟಿದೆ. ಮೇ 10ರಂದು ಮತದಾನ ನಡೆದಿದ್ದು, ಯಾರೇ ಗೆದ್ದರೂ ಮೊದಲ ಬಾರಿಗೆ ವಿಧಾನಸಭೆ ಮೆಟ್ಟಿಲು ಏರಲಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
ಸುದೀಪ್ ವಿರುದ್ಧ ಏಕವಚನ ಬಳಸಿದರೇ ಡಿಸಿಎಂ ಡಿಕೆಶಿ: ವಿಡಿಯೋ ನೋಡಿ
ಸುದೀಪ್ ವಿರುದ್ಧ ಏಕವಚನ ಬಳಸಿದರೇ ಡಿಸಿಎಂ ಡಿಕೆಶಿ: ವಿಡಿಯೋ ನೋಡಿ