Vote From Home: 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ, ಹೇಗಿದೆ ಬ್ಯಾಲೆಟ್​ ಪೇಪರ್​ ವೋಟಿಂಗ್?

2023ರ ಸಾರ್ವತ್ರಿಕ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ರಾಜ್ಯ ಸೇರಿದಂತೆ ರಾಜ್ಯ ರಾಜಧಾನಿಯಲ್ಲೂ ಚುನಾವಣಾ ರಣಕಹಳೆ ಶುರುವಾಗಿದೆ.

Vote From Home: 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ, ಹೇಗಿದೆ ಬ್ಯಾಲೆಟ್​ ಪೇಪರ್​ ವೋಟಿಂಗ್?
ಸಾಂದರ್ಭಿಕ ಚಿತ್ರ
Follow us
|

Updated on:Apr 30, 2023 | 9:18 AM

ಬೆಂಗಳೂರು: ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಮತದಾನ ನಡೆಯಲಿದ್ದು ಎರಡು ದಿನಗಳ ಬಳಿಕ ಅಂದರೆ ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ. ಸದ್ಯ 2023ರ ಚುನಾವಣೆಗೆ ಕೌಂಟ್​ಡೌನ್​ ಶುರುವಾಗಿದ್ದು ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾವೆ. ಇದರ ನಡುವೆ ಏಪ್ರಿಲ್ 29ರಿಂದ ಬ್ಯಾಲೆಟ್​ ಪೇಪರ್​ ವೋಟಿಂಗ್​ ಶುರುವಾಗಿದೆ(Ballot Paper Voting). ರಾಜ್ಯದಲ್ಲಿ ಬ್ಯಾಲೆಟ್​ ಪೇಪರ್​ ಮೂಲಕ ಗೌಪ್ಯ ಮತದಾನವನ್ನ ಎಲೆಕ್ಷನ್​ ಕಮಿಷನ್​ ಶುರುಮಾಡಿದೆ.

2023ರ ಸಾರ್ವತ್ರಿಕ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ರಾಜ್ಯ ಸೇರಿದಂತೆ ರಾಜ್ಯ ರಾಜಧಾನಿಯಲ್ಲೂ ಚುನಾವಣಾ ರಣಕಹಳೆ ಶುರುವಾಗಿದೆ. ಏಪ್ರಿಲ್ 29ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಬ್ಯಾಲೆಟ್​ ಮತದಾನವನ್ನು ಚುನಾವಣೆ ಅಯೋಗ ಶುರುಮಾಡಿದೆ

ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಹಿರಿಯ ನಾಗರಿಕರು, ಅಂಗವಿಕಲರು ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಅದೂ ಅಧಿಕಾರಿಗಳು ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತಚಲಾಯಿಸುವಂತೆ ಮಾಡುತ್ತಿದ್ದಾರೆ. ಏಪ್ರಿಲ್ 29ರಿಂದ ಈ ಪ್ರಕ್ರಿಯೆ ಆರಂಭವಾಗಿದ್ದು, ಮೇ 6ರವರೆಗೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. 8 ದಿನಗಳಲ್ಲಿ ಅಧಿಕಾರಿಗಳು ಯಾವಾಗಲಾದರೊಮ್ಮೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ನೋಂದಣಿ ಮಾಡಿಕೊಂಡಿರುವ ಹಿರಿಯ ನಾಗರೀಕರು ಮತ್ತು ವಿಕಲ ಚೇತನ ಮತದಾರರ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತ ಚಲಾಯಿಸಿದ ನಂತರ ಅದನ್ನು ವಾಪಾಸು ಪಡೆದುಕೊಂಡು ತೆರಳಲಿದ್ದಾರೆ.

ಇದನ್ನೂ ಓದಿ: ಹನುಮ ಜನ್ಮ ಭೂಮಿಯಲ್ಲಿ ಯೋಗಿ ಆದಿತ್ಯನಾಥ್ ಮತಬೇಟೆ; ಕೋಟೆನಾಡಲ್ಲಿ ಪಂಜಾಬ್ ಸಿಎಂ ಪ್ರಚಾರ

ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್

ಇನ್ನು ಚುನಾವಣಾ ಅಯೋಗದ ಸಿಬ್ಬಂದಿಗಳಿಂದ 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆ ಬಳಿ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ನೀಡಲಾಗ್ತಿದ್ದು, ಗೌಪ್ಯ ಮತ ಚಲಾಯಿಸುವಾಗ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಹಾಜರಿರಲಿದ್ದಾರೆ. ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್ ಕೂಡ ಮಾಡಲು ವ್ಯವಸ್ಥೆ ಮಾಡಿಕೊಂಡಿದ್ದು, ಸದ್ಯ ಬೆಂಗಳೂರಿನ ವಿವಿಧ ವಲಯಗಳಲ್ಲಿ 80 ವರ್ಷ ಮೇಲ್ಪಟ್ಟ ಸುಮಾರು 9152 ಹಿರಿಯ ಮತದಾರರನ್ನ ಗುರ್ತಿಸಿರೋ ಪಾಲಿಕೆ, ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಿ ಎಣಿಕೆ ಮಾಡಲಾಗುತ್ತೆ.

2023ರ ಚುನಾವಣೆಗೆ ರಣಕಹಳೆ ಶುರುವಾಗಿದ್ದು ಈ ಬಾರಿ ಬೆಂಗಳೂರಿನಲ್ಲಿ ಶೇಕಡ 80 ರಷ್ಟು ಮತದಾನ ಸಾಧಿಸೋ ಗುರಿಯಿಂದ ಚುನಾವಣಾಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಸದ್ಯ ಏಪ್ರಿಲ್ 29ರಿಂದ ಆರಂಭವಾಗಿರುವ ಬ್ಯಾಲೆಟ್​ ಮತದಾನಕ್ಕ ಗುಡ್ ರೆಸ್ಪಾನ್ಸ್ ಕೂಡಾ ಸಿಕ್ಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:16 am, Sun, 30 April 23

ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ