AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bantwala Election Results 2023: ಬಂಟ್ವಾಳ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ರಾಜೇಶ್ ನಾಯಕ್​​, ರಮಾನಾಥ್ ರೈ ನಡುವೆ ಭಾರೀ ಜಿದ್ದಾಜಿದ್ದಿ

Bantwala Assembly Election Result 2023 Live Counting Updates: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್​​ ಹಾಗೂ ಕಾಂಗ್ರೆಸ್​​ ಅಭ್ಯರ್ಥಿ ರಮಾನಾಥ್ ರೈ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Bantwala Election Results 2023: ಬಂಟ್ವಾಳ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ರಾಜೇಶ್ ನಾಯಕ್​​, ರಮಾನಾಥ್ ರೈ ನಡುವೆ ಭಾರೀ ಜಿದ್ದಾಜಿದ್ದಿ
ರಾಜೇಶ್ ನಾಯಕ್​​ ಮತ್ತು ರಮಾನಾಥ್ ರೈ
ಅಕ್ಷಯ್​ ಪಲ್ಲಮಜಲು​​
| Updated By: Digi Tech Desk|

Updated on: May 13, 2023 | 3:17 AM

Share

Bantwala Assembly Election Result 2023 Live: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ (Bantwala Assembly Constituency) ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಟ್​ ನಡೆಯಲಿದೆ, ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್​ ಎರಡನೇ ಬಾರಿ ಕಣಕ್ಕಿಳಿದಿದ್ದಾರೆ. ಬಂಟ್ವಾಳ ಸೂಕ್ಷ್ಮ ಪ್ರದೇಶವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜೇಶ್ ನಾಯಕ್​​ ಭಾರೀ ಮತಗಳಿಂದ ವಿಜಯ ಸಾಧಿಸಿದರು. ಇದೀಗ ಮತ್ತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ನಾಯಕ ಹಾಗೂ ಮಾಜಿ ಸಚಿವ ರಮಾನಾಥ್​​ ರೈ ಅವರನ್ನು ಸೋಲಿಸಿ ವಿಜಯ ಸಾಧಿಸಿದರು, ಇದೀಗ ಈ ಬಾರಿಯು ಅವರ ಮುಂದೆ ಮತ್ತೆ ಸ್ಪರ್ಧಿಸಿದ್ದಾರೆ. ಈ ಬಾರಿ ಮತ್ತೆ ಯಾರು ಪಾಲಿಗೆ ವಿಜಯಲಕ್ಷ್ಮೀ ಒಳಿಯಲಿದ್ದಾಳೆ ಎಂದು ಕಾದು ನೋಡಬೇಕಿದೆ. ರಾಜೇಶ್ ನಾಯಕ್​​ 2013ರಲ್ಲಿ ರಮಾನಾಥ್ ರೈ ಮುಂದೆ ಸೋತಿದ್ದರು. ನಂತರ 2018ರಲ್ಲಿ ಬಿಜೆಪಿಯಿಂದ ಗೆದ್ದರು. ರಾಜೇಶ್ ನಾಯಕ್​​ ಒಬ್ಬ ಕೃಷಿಕರಾಗಿ ಕೆಲಸ ಮಾಡಿದರವರು ಹಾಗೂ ತಮ್ಮ ಕೃಷಿಯಿಂದಲ್ಲೇ ದೇಶದ್ಯಾಂತ ಅನೇಕರಿಗೆ ಚಿರಪರಿಚಿತರು. ಇದರ ಜತೆಗೆ ಧಾರ್ಮಿಕ ಕ್ಷೇತ್ರದಲ್ಲೂ ಹೆಚ್ಚು ಪ್ರಚಲಿತದಲ್ಲಿದ್ದವರು, ಇದೀಗ ಮತ್ತೆ ಎರಡನೇ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದು, ರಮಾನಾಥ ರೈ ಮುಂದೆ ತೊಡೆತಟ್ಟಿದ್ದಾರೆ. ಬಂಟ್ವಾಳದಲ್ಲಿ ರಾಜೇಶ್ ನಾಯಕ್ ಮತ್ತು ರಮಾನಾಥ್ ರೈ ನಡುವೆ ಬಹಳ ಜಿದ್ದಾಜಿದ್ದಿ ನಡೆಯುತ್ತಿದೆ. 2018ರ ಚುನಾವಣೆಯಲ್ಲಿ ಹಿಂದುತ್ವ ಮತ್ತು ಅನೇಕ ಹತ್ಯೆ ಪ್ರಕರಣದಿಂದ ಯಾರು ಗೆಲ್ಲುತ್ತಾರೆ ಎಂಬ ಗೊಂದಲ ಇತ್ತು, ಆದರೆ ಈ ಬಾರಿಯು ಆ ರೀತಿಯ ಗೊಂದಲಗಳು ಇಲ್ಲ, ಆದರೆ ರಾಜೇಶ್ ನಾಯಕ್​​ ಪರ-ವಿರೋಧ ಅಲೆ ಎರಡು ಇದೆ. ಆದರೆ ಫಲಿತಾಂಶ ನಂತರವೇ ರಾಜೇಶ್ ನಾಯಕ್​​ ಭವಿಷ್ಯ ನಿರ್ಧಾರವಾಗಲಿದೆ.

ಇನ್ನೂ ರಾಜೇಶ್ ನಾಯಕ್​​ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಿರುವುದು ರಮಾನಾಥ್​ ರೈ, ಇವರು ಕೂಡ ಬಂಟ್ವಾಳ ಕ್ಷೇತ್ರದಿಂದ ಹಲವು ಬಾರಿ ಗೆದ್ದವರು, ಜತೆಗೆ ರಾಜೇಶ್ ನಾಯಕ್​​ ಮುಂದೆ ಕಡಿಮೆ ಅಂತರದಲ್ಲಿ ಸೋತಿದ್ದರು. 2013ರ ಚುನಾವಣೆಯಲ್ಲಿ ರಾಜೇಶ್ ನಾಯಕ್​​ ಮುಂದೆ ಭಾರೀ ಅಂತರದಿಂದ ಗೆಲ್ಲುವು ಸಾಧಿಸಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸಿದರು, ಇದರ ಜತೆಗೆ ಬಂಟ್ವಾಳದ ಅನೇಕ ಧಾರ್ಮಿಕ ಕ್ಷೇತ್ರದಲ್ಲಿ ಕೆಲಸ ಮಾಡಿದವರು. 2018ರಲ್ಲಿ ಶರತ್​​ ಮಡಿವಾಳ ಹತ್ಯೆ, ಆಶ್ರಫ್ ಹತ್ಯೆಗಳಿಂದ ಇವರ ವಿರುದ್ಧ ಅಕ್ರೋಶಗಳು ಕೇಳಿ ಬಂದಿತ್ತು. ಈ ಕಾರಣದಿಂದಲ್ಲೇ ಅಂದಿನ ಚುನಾವಣೆಯಲ್ಲಿ ರಮಾನಾಥ್ ಸೋಲಿಗೆ ಕಾರಣವಾಗಿತ್ತು ಎಂದು ಹೇಳಲಾಗಿತ್ತು. ಇದೀಗ ಮತ್ತೆ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ರಾಜೇಶ್ ನಾಯಕ್​ಗೆ​ ಪ್ರಬಲ ಪೈಪೋಟಿಯಾಗಿ ನಿಂತಿದ್ದಾರೆ.

ಇನ್ನೂ ಬಂಟ್ವಾಳದಲ್ಲಿ ರಾಜೇಶ್ ನಾಯಕ್​ ಮತ್ತು ರಮಾನಾಥ್ ರೈ ವಿರುದ್ಧ ಜೆಡಿಎಸ್​​ನಿಂದ ಪ್ರಕಾಶ್ ರಫಾಯಲ್​​ ಗೊಮ್ಸ್​​ ಸ್ಪರ್ಧಿಸುತ್ತಿದ್ದಾರೆ, ಇದೀಗ ಇದರ ಜತೆಗೆ ಬಿಜೆಪಿ ಮತ್ತು ಕಾಂಗ್ರೆಸ್​​​ಗೆ​​ ಪ್ರಬಲ ಸ್ಪರ್ಧಿಯಾಗಿರುವುದು ಎಸ್ ಡಿ ಪಿ‌ಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್, ಇದೀಗ ಈ ಸೂಕ್ಷ್ಮ ಪ್ರದೇಶ ಬಂಟ್ವಾಳದಲ್ಲಿ ಈ ಎರಡು ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿರುವುದು ಎಸ್ ಡಿ ಪಿ‌ಐ, ಇದರಿಂದ ಮತಗಳು ಹಂಚಿ ಹೋಗುವ ಸಾಧ್ಯತೆಗಳು ಇದೆ. ಏಕೆಂದರೆ ಬಂಟ್ವಾಳದಲ್ಲಿ ಮುಸ್ಲಿಂ ಮತಗಳು ವಿಭಜನೆ ಆಗುವ ಸಾಧ್ಯತೆಗಳು ಹೆಚ್ಚು. ಹೀಗಾಗಿ ಈ ಬಾರಿಯ ಬಂಟ್ವಾಳ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಮತದಾರ ಪ್ರಭು ಯಾರನ್ನು ಆಯ್ಕೆ ಮಾಡಿದ್ದಾನೆ ಎಂದು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ.

ಹೀಗಾಗಿ ಈ ಕ್ಷೇತ್ರದಲ್ಲಿ ತ್ರಿಕೋನ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ, ಪಕ್ಷೇತರ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!