AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೆಸರು ಪ್ರಸ್ತಾಪಿಸಿದ ಚಿತ್ತರಗಿ ಶ್ರೀ, ಪೇಚಿಗೆ ಸಿಲುಕಿದ ಸಂಘಟಕರು

ಬಾಗಲಕೋಟೆಯ ಕೂಡಲಸಂಗಮದ ಬಸವ ವೇದಿಕೆಯಲ್ಲಿ ಇಂದು ಬಸವ ಜಯಂತಿ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ ಈ ಕಾರ್ಯಕ್ರಮದಲ್ಲಿ ಚಿತ್ತರಗಿ ಶ್ರೀಗಳು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನೂ ಪ್ರಸ್ತಾಪಿಸಿದರು.

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೆಸರು ಪ್ರಸ್ತಾಪಿಸಿದ ಚಿತ್ತರಗಿ ಶ್ರೀ, ಪೇಚಿಗೆ ಸಿಲುಕಿದ ಸಂಘಟಕರು
ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ
Rakesh Nayak Manchi
|

Updated on:Apr 23, 2023 | 3:03 PM

Share

ಬಾಗಲಕೋಟೆ: ಪ್ರಸ್ತುತ ರಾಷ್ಟ್ರ ನಾಯಕರು ಬಸವೇಶ್ವರರ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ, ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ಬಸವಣ್ಣನವರ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ ಎಂದು ಇಳಕಲ್​​ನ ಚಿತ್ತರಗಿ ಶ್ರೀಗಳು ಹೇಳಿದ್ದಾರೆ. ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವ ವೇದಿಕೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾಗಿಯಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಶ್ರೀಗಳು ಮೋದಿ ಹೆಸರು ಪ್ರಸ್ತಾಪಿಸುತ್ತಿದ್ದಂತೆ ಕಾರ್ಯಕ್ರಮದ ಸಂಘಟಕರು ಪೇಚಿಗೆ ಸಿಲುಕಿದರು. ಇನ್ನೊಂದೆಡೆ, ಪ್ರಾಸ್ತಾವಿಕ ಭಾಷಣ ಮಾಡಿದ ಡಾ. ಸಿದ್ದರಾಮ ಸ್ವಾಮೀಜಿ ಅವರು ರಾಹುಲ್ ಗಾಂಧಿಯವರ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದರು. ರಾಹುಲ್ ಗಾಂಧಿಯನ್ನ ಯುವಕರ ಕಣ್ಮಣಿ ಎಂದು ಬಣ್ಣಿಸಿದರು.

ನೀವು ನಮ್ಮ ಜನ ನಾಯಕ, ಒಬ್ಬ ಜನ ನಾಯಕರ ಜಯಂತಿಗೆ ದೂರದಿಂದ ಬಂದಿದ್ದಕ್ಕೆ ಧನ್ಯವಾದ ತಿಳಿಸಿದ ಸಿದ್ದರಾಮ ಸ್ವಾಮೀಜಿ, ಬಸವಣ್ಣನವರ ಬಗ್ಗೆ ರಾಹುಲ್ ಗಾಂಧಿಗೆ ಮಾಹಿತಿ ತಿಳಿಯಬೇಕು ಎನ್ನುವ ನಿಟ್ಟಿನಲ್ಲಿ ಹಿಂದಿಯಲ್ಲೇ ಮಾತನಾಡಿದರು. ಬಸವಣ್ಣನವರ ಜೀವನ, ಸಾಧನೆ ಬಗ್ಗೆ ಮಾತನಾಡುವುದು ಹೆಮ್ಮೆಯ ಸಂಗತಿ. ಕೂಡಲಸಂಗಮ ನಮ್ಮೇಲ್ಲರ ಶ್ರದ್ಧಾ ಕೇಂದ್ರವಾಗಿದೆ. ಕೂಡಲಸಂಗಮಕ್ಕೆ ಭೇಟಿ ನೀಡಿದರೆ ಎಲ್ಲಾ ಸಂಕಷ್ಟಗಳು ದೂರವಾಗುತ್ತವೆ. ಮೂಢನಂಬಿಕೆ, ಕಂದಾಚಾರ ದೂರ ಮಾಡಲು ಬಹಳ ದೊಡ್ಡ ಹೆಜ್ಜೆ ಬಸವಣ್ಣ ಇಟ್ಟಿದ್ದರು ಎಂದರು.

ಇದನ್ನೂ ಓದಿ: Basava Jayanti: ಬಸವೇಶ್ವರರಿಗೆ ನಮಿಸಿ ಅವರ ಚಿಂತನೆಗಳು ಮನುಕುಲಕ್ಕೆ ಸೇವೆ ಮಾಡಲು ಪ್ರೇರಣೆ ನೀಡುತ್ತವೆ ಎಂದ ಪ್ರಧಾನಿ ಮೋದಿ

ವಚನಗಳು ಲಿಂಗಾಯತ ಧರ್ಮದ ಸಂವಿಧಾನ: ಸಿದ್ದರಾಮ ಶ್ರೀ

ವಚನಗಳು ಲಿಂಗಾಯತ ಧರ್ಮದ ಸಂವಿಧಾನ ಎಂದು ನಂಬಲಾಗುತ್ತದೆ. ಹೆಣ್ಣು ಮಕ್ಕಳಿಗೆ ವಿಶೇಷ ಸ್ಥಾನಮಾನ, ಧಾರ್ಮಿಕ ಸ್ಥಾನಮಾನವನ್ನು ಬಸವಣ್ಣನವರು ಕಲ್ಪಿಸಿಕೊಟ್ಟಿದ್ದರು ಎಂದು ಹೇಳಿದ ಸಿದ್ದರಾಮ ಶ್ರೀ, ಬಸವಣ್ಣನವರು ವಿನಯವಂತಿಕೆಯಿಂದ ಬಹಳ ದೊಡ್ಡ ನಾಯಕರಾಗಿ ಬೆಳೆದರು. ಲಿಂಗಾಯತ ಧರ್ಮ, ಸಮುದಾಯ, ಸಂಪ್ರದಾಯ ಇರುವವರೆಗೂ ಬಸವಣ್ಣನವರ ಆದರ್ಶಗಳಿರುತ್ತದೆ ಎಂದರು.

ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿಗೆ ಸನ್ಮಾನ

ಬಸವ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸನ್ಮಾನಿಸಿ ಗೌರಿವಸಲಾಯಿತು. ವಿಜಯಾನಂದ ಕಾಶಪ್ಪನವರ್ ದಂಪತಿ ರಾಹುಲ್ ಗಾಂಧಿಗೆ ಬೆಳ್ಳಿಯ ಬಸವಣ್ಣ ಪ್ರತಿಮೆ ನೀಡಿ ಗೌರವಿಸಿದರು. ಸಿದ್ದರಾಮಯ್ಯ ಸೇರಿದಂತೆ ಎಲ್ಲ ಗಣ್ಯರಿಗೂ ಸನ್ಮಾನ ಮಾಡಿ ಸತ್ಕಾರ ಮಾಡಲಾಯಿತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sun, 23 April 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?