AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ದಿಲ್ಲಿಗೆ ಬೊಮ್ಮಾಯಿ, ಯಡಿಯೂರಪ್ಪ: ABC ಫಾರ್ಮೂಲದೊಂದಿಗೆ ಅಭ್ಯರ್ಥಿಗಳ ಹೆಸರು ಶಿಫಾರಸು

ಒಂದೊಂದು ಕ್ಷೇತ್ರ ತಲಾ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, A,B,C ಎಂದು ಮೂರು ಹೆಸರು ಪಟ್ಟಿಯಲ್ಲಿದೆ. ಇಂದು ಆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಜೆಪಿ ವರಿಷ್ಠರ ಕೈ ಸೇರಲಿದೆ.

ಇಂದು ದಿಲ್ಲಿಗೆ ಬೊಮ್ಮಾಯಿ, ಯಡಿಯೂರಪ್ಪ:  ABC ಫಾರ್ಮೂಲದೊಂದಿಗೆ ಅಭ್ಯರ್ಥಿಗಳ ಹೆಸರು ಶಿಫಾರಸು
ರಮೇಶ್ ಬಿ. ಜವಳಗೇರಾ
|

Updated on: Apr 07, 2023 | 7:43 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023)ಕಾಂಗ್ರೆಸ್(Congress) ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಹಾಗೂ ಎರಡನೇ ಪಟ್ಟಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನು 58 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡು ತಂತ್ರಗಾರಿಕೆ ಕಾಯ್ದಿರಿಸಿದೆ. ಆದ್ರೆ, ಇತ್ತ ಸ್ಥಳೀಯ ಮುಖಂಡರ ಅಭಿಪ್ರಾಯ ಆಲಿಸಿ ಅಭ್ಯರ್ಥಿಗಳ ಆಯ್ಕೆಗೆ ಮುಂದಾಗಿರುವ ಬಿಜೆಪಿ(BJP) ಭರ್ಜರಿ ಕಸರತ್ತು ನಡೆಸಿದೆ. ಈಗಾಗಲೇ ಜಿಲ್ಲಾವಾರು ಕೋರ್‌ಕಮಿಟಿ ಸದಸ್ಯರ ಅಭಿಪ್ರಾಯ ಆಧರಿಸಿ ಒಂದೊಂದು ಕ್ಷೇತ್ರ ತಲಾ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, A,B,C ಎಂದು ಮೂರು ಹೆಸರು ಪಟ್ಟಿಯಲ್ಲಿದೆ. ಇಂದು ಆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಜೆಪಿ ವರಿಷ್ಠರ ಕೈ ಸೇರಲಿದೆ. ಹೌದು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ 224 ಕ್ಷೇತ್ರಗಳ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಜತೆ ಇಂದು(ಏಪ್ರಿಲ್ 07) ಮಧ್ಯಾಹ್ನ ದೆಹಲಿಗೆ ದೌಡಾಯಿಸಲಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್​? ಇಲ್ಲಿದೆ ಅಚ್ಚರಿ ಸಂಗತಿಗಳು

ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ. ಮಾಜಿ ಸಿಎಂ ಯಡಿಯೂರಪ್ಪ ಕೂಡ ದೆಹಲಿಗೆ ಭೇಟಿ ನೀಡಲಿದ್ದು, ಎರಡು ದಿನ ಅಲ್ಲೇ ಠಿಕಾಣಿ ಹೂಡಲಿದ್ದಾರೆ. ನಾಳೆ ಮತ್ತು ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ವರಿಷ್ಠರು ಸಮಾಲೋಚನೆ ನಡೆಸಲಿದ್ದಾರೆ. ಎಲ್ಲ ವರದಿ ಆಧರಿಸಿ, ಅಳೆದೂ ತೂಗಿ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಿದ್ದಾರೆ. ಇನ್ನು ಬಿಜೆಪಿ ಎರಡು ಹಂತದಲ್ಲಿ ಪಟ್ಟಿ ಪ್ರಕಟಿಸಲು ಪ್ಲ್ಯಾನ್ ಮಾಡಿದೆ ಎಂದು ತಿಳಿದುಬಂದಿದೆ.

ಹಾಲಿ ಸಚಿವರ ಪೈಕಿ ಎಲ್ಲರಿಗೂ ಟಿಕೆಟ್ ಖಚಿತ..?

ಹಾಲಿ ಸಚಿವರ ಪೈಕಿ ಎಲ್ಲರಿಗೂ ಟಿಕೆಟ್ ಖಚಿತವಾಗಿದ್ದು, ಹೊಸಕೋಟೆ ಕ್ಷೇತ್ರಕ್ಕೆ ಸಚಿವ ಎಂಟಿಬಿ ನಾಗರಾಜ್ ಪುತ್ರನಿಗೆ ಟಿಕೆಟ್ ಕೇಳಿದ್ದಾರೆ. ಸಚಿವ ಸೋಮಣ್ಣ ಕ್ಷೇತ್ರ ಗೋವಿಂದರಾಜನಗರವೋ, ಚಾಮರಾಜನಗರವೋ ಎನ್ನುವುದು ತೂಗುಯ್ಯಾಲೆಯಲ್ಲಿದೆ. ಹೀಗೆ ಕೆಲ ಗೊಂದಲ ಇರುವುದರಿಂದ ಎರಡು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಬಿಜೆಪಿ ಸಜ್ಜಾಗಿದೆ.

ಏ.10ಕ್ಕೆ ಮೊದಲ ಪಟ್ಟಿ, ಏ.13ಕ್ಕೆ 2ನೇ ಪಟ್ಟಿ?

ಪ್ರಧಾನಿ ಮೋದಿ ಏಪ್ರಿಲ್ 9ರಂದು ರಾಜ್ಯ ಭೇಟಿ ಕೈಗೊಂಡ ಬಳಿಕ ಏಪ್ರಿಲ್ 10ರಂದು ಬಿಜೆಪಿಯ ಮೊದಲ ಪಟ್ಟಿ ಮತ್ತು ಏಪ್ರಿಲ್ 13ರಂದು ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ. 224 ಕ್ಷೇತ್ರಕ್ಕೂ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್ ರೆಡಿ ಮಾಡಿರುವ ಬಿಜೆಪಿ, ಪ್ರತಿ ಕ್ಷೇತ್ರಕ್ಕೂ ಮೂವರು ಸಂಭಾವ್ಯರ ಹೆಸರನ್ನ ಶಿಫಾರಸು ಮಾಡಿದೆ. ಸಿಎಂ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿ ಕ್ಷೇತ್ರ, ಬಿ.ವೈ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎನ್ನಲಾದ ಶಿಕಾರಿಪುರ ಕ್ಷೇತ್ರವೂ ಸೇರಿದಂತೆ, 224 ಕ್ಷೇತ್ರಕ್ಕೂ ಕಡ್ಡಾಯವಾಗಿ ಮೂವರ ಹೆಸರು ಶಿಫಾರಸು ಮಾಡಲಾಗಿದೆ.

ಪ್ರತಿ ಕ್ಷೇತ್ರಕ್ಕೂ A,B,C ಎಂದು ಮೂರು ಹೆಸರು ಶಿಫಾರಸು ಮಾಡಿದೆ. ಪ್ರಬಲ ನಾಯಕ ಹಾಗೂ ಹಾಲಿ ಶಾಸಕರ ಹೆಸರು A ಕೆಟಗೆರೆಯಲ್ಲಿದ್ದರೆ, B ಕೆಟಗೆರೆಯಲ್ಲಿ ಎರಡನೇ ಹಂತದ ನಾಯಕರ ಹೆಸರು ಇದೆ. ಇನ್ನು ಇವರಿಬ್ಬರನ್ನು ಬಿಟ್ಟರೆ ಕ್ಷೇತ್ರದ ಸಮರ್ಥ ನಾಯಕರು ಎನ್ನಿಸಿಕೊಂಡಿರುವವರ ಹೆಸರುಗಳು ಸಿ ಕೆಟಗೆರೆಯಲ್ಲಿವೆ. ಹೀಗಿ ಮೂರು ಫಾರ್ಮೂಲ ಮಾಡಲಾಗಿದ್ದು,  A ಹೆಸರುಗಳಿಗೆ ಮೊದಲ ಪ್ರಾಶಸ್ತ್ಯ. ಒಂದು ವೇಳೆ ಹೈಕಮಾಂಡ್​ ಅದನ್ನು ತಿರಸ್ಕರಿಸಿದರೆ B ಕೆಟಗೆರೆ ನಾಯಕರನ್ನು ಆಯ್ಕೆ ಮಾಡಬಹುದು. ಮೂಲಗಳ ಪ್ರಕಾರ  ಬಹುತೇಕ A ಕೆಟಗೆರೆಯಲ್ಲಿರುವ ಅಭ್ಯರ್ಥಿಗೆ ಟಿಕೆಟ್ ಖಚಿತ ಎನ್ನಲಾಗಿದೆ.

ಇನ್ನಷ್ಟು ಕರ್ನಾಟಕ ವಿಧಾನಸಭಾ ಚುನಾಚವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​