AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakshmi Hebbalkar: ಐದೇ ವರ್ಷಗಳಲ್ಲಿ 7.15 ಕೋಟಿ ರೂ. ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್ ಆದಾಯ

ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆದಾಯ ಕೇವಲ ಐದು ವರ್ಷಗಳಲ್ಲಿ ಕೋಟ್ಯಂತರ ರೂ. ಹೆಚ್ಚಳವಾಗಿರುವುದು ತಿಳಿದುಬಂದಿದೆ.

Lakshmi Hebbalkar: ಐದೇ ವರ್ಷಗಳಲ್ಲಿ 7.15 ಕೋಟಿ ರೂ. ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್ ಆದಾಯ
ಲಕ್ಷ್ಮೀ ಹೆಬ್ಬಾಳ್ಕರ್ (ಚಿತ್ರ ಕೃಪೆ; ಹೆಬ್ಬಾಳ್ಕರ್ ಅವರ ಫೇಸ್​ಬುಕ್ ಖಾತೆ)Image Credit source: Facebook
Ganapathi Sharma
|

Updated on:Apr 18, 2023 | 8:37 PM

Share

ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಆದಾಯ ಕೇವಲ ಐದು ವರ್ಷಗಳಲ್ಲಿ ಕೋಟ್ಯಂತರ ರೂ. ಹೆಚ್ಚಳವಾಗಿರುವುದು ತಿಳಿದುಬಂದಿದೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಅವರು, ಆದಾಯ ಹಾಗೂ ಆಸ್ತಿ ವಿವರಗಳನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ್ದು, 7.15 ಕೋಟಿ ರೂ. ಆದಾಯ ಹೊಂದಿರುವುದಾಗಿ ಘೋಷಿಸಿದ್ದಾರೆ. 2018ರಲ್ಲಿ 36.58 ಲಕ್ಷ ರೂ. ಆದಾಯ ಹೊಂದಿದ್ದ ಶಾಸಕಿ ಹೆಬ್ಬಾಳ್ಕರ್, 2022ರ ವೇಳೆಗೆ 7.15 ಕೋಟಿ ರೂ. ಆದಾಯ ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಇದರೊಂದಿಗೆ ಐದು ವರ್ಷಗಳ ಅವಧಿಯಲ್ಲಿ ಅವರ ಆದಾಯ 6.70 ಕೋಟಿ ರೂ. ಹೆಚ್ಚಳವಾದಂತಾಗಿದೆ.

10.86 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, 1.90 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. 5.63 ಕೋಟಿ ರೂ.ಗೂ ಹೆಚ್ಚು ಸಾಲ ಪಡೆದಿದ್ದಾರೆ. ಈ ಪೈಕಿ 72.58 ಲಕ್ಷ ರೂ. ಗೃಹಸಾಲ, 8.19 ಲಕ್ಷ ರೂ. ವಾಹನ ಸಾಲ ಆಗಿದೆ.

ಮೂರು ಅಪರಾಧ ಪ್ರಕರಣ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮೂರು ಅಪರಾಧ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಯಾವ ಪ್ರಕರಣದಲ್ಲಿಯೂ ಈವರೆಗೆ ತೀರ್ಪು ಪ್ರಕಟವಾಗಿಲ್ಲ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಸುಳೇಭಾವಿಯಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ನಂತರ ಮಾತನಾಡಿ, ತಮ್ಮ ಕ್ಷೇತ್ರದಲ್ಲಿ ಜಾತಿ, ಸಮುದಾಯ ಲೆಕ್ಕಕ್ಕೆ ಬರಲ್ಲ, ಕಳೆದ 5 ವರ್ಷಗಳಲ್ಲಿ ತಾವು ಮಾಡಿರುವ ಅಭಿವೃದ್ಧಿ ಕೆಲಸಗಳಷ್ಟೇ ಗಣನೆಗೆ ಬರುತ್ತವೆ ಮತ್ತು ಅದೇ ಆಧಾರದ ಮೇಲೆ ಜನ ತಮಗೆ ವೋಟು ನೀಡುತ್ತಾರೆ ಎಂದು ಹೇಳಿದ್ದರು. ಲಕ್ಷ್ಮಣ ಸವದಿಯವರು ಕಾಂಗ್ರೆಸ್ ಪಕ್ಷವನ್ನು ಸೇರಿರುವುದು ಬೆಳಗಾವಿ ಜಿಲ್ಲೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ಒದಗಿಸಿದೆ ಎಂದ ಅವರು ನಾಳೆಯೇ ತಮ್ಮ ಬದ್ಧ ರಾಜಕೀಯ ವೈರಿ ರಮೇಶ್ ಜಾರಕಿಹೊಳಿ ಕ್ಷೇತ್ರ ಗೋಕಾಕ್​​​ನಲ್ಲಿ ಪ್ರಚಾರ ಮಾಡುವುದಾಗಿ ಹೇಳಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:08 pm, Tue, 18 April 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ