AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹಮದ್​ಗೆ ಸಚಿವ ಸ್ಥಾನ ಕೊಟ್ಟರೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಬಾರದು ಎಂದು ಪತ್ರ

ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬಾರದು. ಒಂದು ವೇಳೆ ಕೊಟ್ಟರೆ ಅವರಿಗೆ ಪ್ರಮಾಣವಚನ ಬೋಧಿಸಬಾರದು ಎಂದು ರಾಜ್ಯಪಾಲರಿಗೆ ನವಭಾರತ ಸೇನಾ ಪಕ್ಷದ ಸಂಚಾಲಕ ಮನವಿ ಮಾಡಿದ್ದಾರೆ.

ಶಾಸಕ ಜಮೀರ್ ಅಹಮದ್​ಗೆ ಸಚಿವ ಸ್ಥಾನ ಕೊಟ್ಟರೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಬಾರದು ಎಂದು ಪತ್ರ
ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್​ ಖಾನ್
ರಮೇಶ್ ಬಿ. ಜವಳಗೇರಾ
|

Updated on:May 19, 2023 | 2:44 PM

Share

ಬೆಂಗಳೂರು: ಸಿದ್ದರಾಮಯ್ಯ(Siddaramaiah) ಮುಖ್ಯಮಂತ್ರಿಯಾಗಿ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ನಾಳೆ (ಮೇ.19) ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ಕೆಲ ಶಾಸಕರು ಸಹ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan)​ ಕೂಡ ಸಚಿವ ಸ್ಥಾನ ಸಿಗುವ ಎಲ್ಲಾ ಸಾಧ್ಯತೆಗಳಿವೆ. ಆದ್ರೆ, ಇದೀಗ ಜಮೀರ್ ಅಹಮದ್​ ಅವರಿಗೆ ಸಚಿವ ಸ್ಥಾನ ನೀಡಬಾರದು ಎಂದು ನವಭಾರತ ಸೇನಾ ಪಕ್ಷದ ಸಂಚಾಲಕ ರುಕ್ಮಾಂಗದ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ನಾಮಪತ್ರ ತಿರಸ್ಕರಿಸುವಂತೆ ಚುನಾವಣಾಧಿಕಾರಿಗೆ ದೂರು: ಜಮೀರ್ ಆಹಮದ್​ಗೂ ಶುರುವಾಯ್ತು ಢವಢವ

ಈ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆದಿರುವ ನವಭಾರತ ಸೇನಾ ಪಕ್ಷದ ಸಂಚಾಲಕ ರುಕ್ಮಾಂಗದ, ಚುನಾವಣಾ ಸಮಯದಲ್ಲಿ ಜಮೀರ್ ಅಹಮದ್ ನಾಮಪತ್ರದಲ್ಲಿ ದೋಷಗಳು ಕಂಡು ಬಂದಿವೆ. ಈಗಾಗಲೇ ನಾವು ಚುನಾವಣಾ ಆಯೋಗಕ್ಕೆ ಚಾಮರಾಜಪೇಟೆಯ ಆರ್​ಓ ಹಸನ್ ಸಾಬ್​ಗೆ ದೂರು ನೀಡಿದ್ದೇವು. ಆದರೂ ಚುನಾವಣಾ ಅಧಿಕಾರಿಗಳು ಚುನಾವಣೆಗೆ ನಿಲ್ಲಲು ಜಮೀರ್​ಗೆ ಅವಕಾಶ ಕೊಟ್ಟಿದ್ದರು. ಈಗ ನಾವು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಧಾವೆ ಹೂಡಲಿದ್ದೇವೆ. ಹೀಗಾಗಿ ಜಮೀರ್ ಅಹಮದ್​ ಖಾನ್ ಅವರಿಗೆ ಸಚಿವ ಸ್ಥಾನ ನೀಡಬಾರದರು. ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನ ನೀಡಿದರೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಬಾರದು ಎಂದು ಒತ್ತಾಯಿಸಿದರು.

ಈಗ ನಾವು ಸಚಿವ ಸ್ಥಾನ ಕೊಡಬಾದರು ಎಂದು ರಾಜ್ಯಪಾಲರಿಗೆ ಮನವಿ ನೀಡಿದ್ದೇವೆ. ಒಂದು ವೇಳೆ ಅವರಿಗೆ ಸಚಿವ ಸ್ಥಾನ ಕೊಟ್ಟರೆ ತಮ್ಮ ಅಧಿಕಾರದ ಪ್ರಭಾವದಿಂದ ಕೇಸ್ ಮುಚ್ಚಿ ಹಾಕುತ್ತಾರೆ. ಹೀಗಾಗಿ ಜಮೀರ್ ಅಹಮದ್ ಅವರಿಗೆ ಸಚಿವ ಸ್ಥಾನದ ಪ್ರಮಾಣವಚನ ಬೋಧಿಸಬಾರದು. ಚಾಮರಾಜಪೇಟೆಯ ಅರ್​ಓ ಹಸನ್ ಸಾಬ್, ಇವರು ಜಮೀರ್ ಸಾಬ್ ಹಾಗಾಗಿ ಅಂದು ನಾವು ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಎಂದು ರುಕ್ಮಾಂಗದ ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: ನಾಳೆಯೇ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಜಮೀರ್ ವಿರುದ್ಧ ಆರೋಪ ಏನು?

ಲೋಕಾಯುಕ್ತಕ್ಕೆ ಮಾಹಿತಿ ಸಲ್ಲಿಸುವ ವೇಳೆ ತನ್ನ ಅವಲಂಬಿತರ ಹೆಸರಿನಲ್ಲಿ ತಾಯಿ ಹೆಸರು ಸೇರಿಸಿದ್ದಾರೆ. ಆದ್ರೆ ನಾಮಪತ್ರದಲ್ಲಿ ಮಾತ್ರ ತಾಯಿ ಹೆಸರನ್ನು ಪ್ರಸ್ತಾಪಿಸಿಲ್ಲ. ಇದರೊಂದಿಗೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕೃತ ಮಾಡುವಂತೆ ಚಾಮರಾಜಪೇಟೆಯ ನವ ಭಾರತ ಸೇನಾ ಪಾರ್ಟಿಯ ವಿಧಾನಸಭಾ ಅಭ್ಯರ್ಥಿ ರುಕ್ಮಂಗ ಅವರು ದೂರು ನೀಡಿದ್ದರು.

ಲೋಕಾಯುಕ್ತಕ್ಕೆ ಸಲ್ಲಿಸಿದ ಅಫೀಡವಿಟ್​ಲ್ಲಿ ತನ್ನ ಅವಲಂಭಿತರು ಹೆಂಡತಿ ತಾಯಿ , ಇಬ್ಬರು ಮಕ್ಕಳು ಎಂದು ಮಾಹಿತಿ ನೀಡಿದ್ದಾರೆ. ಆದರೆ ನಾಮಪತ್ರದಲ್ಲಿ ತಾಯಿ ಹೆಸರು ಉಲ್ಲೇಖ‌ ಮಾಡಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದರು. ಇನ್ನು ಬಿಜೆಪಿಯಿಂದ ಸ್ಪರ್ಧಿಸಿದ್ದ ಭಾಸ್ಕರ್​ ರಾವ್ ಸಹ ಜಮೀರ್ ಅಹಮದ್ ಖಾನ್​ ನಾಮಪತ್ರದಲ್ಲಿ ಲೋಪವಿದೆ. ಹಾಗಾಗಿ ಜಮೀರ್​ ನಾಮಪತ್ರ ತಿರಸ್ಕರಿಸಬೇಕೆಂದು ಮನವಿ ಮಾಡಿದ್ದರು.

ಆದ್ರೆ, ಚುನಾವಣಾಧಿಕಾರಿಗಳು ನಾಮಪತ್ರ ಪರಿಶೀಲಿಸಿ ಎಲ್ಲವೂ ಕ್ರಮಬದ್ಧವಾಗಿದೆ ಎಂದು ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದರು.

Published On - 2:16 pm, Fri, 19 May 23

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್