AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಗೆಲುವು, ಸೋಲಿನ ಬೆಟ್ಟಿಂಗ್‌: ಏಳು ಮಂದಿ ವಿರುದ್ಧ ಎಫ್​ಐಆರ್

ಕರ್ನಾಟಕ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದ್ದು, ನಾಳೆ (ಮೇ 13) ಫಲಿತಾಂಶ ಹೊರಬೀಳಲಿದೆ. ಈ ನಡುವೆ ಅಭ್ಯರ್ಥಿಗಳ ಸೋಲು ಗೆಲುವಿನ ಮೇಲೆ ಬೆಟ್ಟಿಂಗ್ ಕಟ್ಟುವ ಭರಾಟೆ ಜೋರಾಗಿದ್ದು, ಕೆಲವೆಡೆ ಬಹಿರಂಗವಾಗಿ ಬೆಟ್ಟಿಂಗ್ ಕಟ್ಟಲಾಗುತ್ತಿದೆ.

ಚುನಾವಣೆ ಗೆಲುವು, ಸೋಲಿನ ಬೆಟ್ಟಿಂಗ್‌: ಏಳು ಮಂದಿ ವಿರುದ್ಧ ಎಫ್​ಐಆರ್
ಮೈಸೂರಿನಲ್ಲಿ ಚುನಾವಣೆ ಗೆಲುವು, ಸೋಲಿನ ಮೇಲೆ ಬೆಟ್ಟಿಂಗ್‌ (ಸಾಂದರ್ಭಿಕ ಚಿತ್ರ)Image Credit source: Sanjay Rawat
Rakesh Nayak Manchi
Rakesh Nayak Manchi|

Updated on: May 12, 2023 | 9:02 PM

Share

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಮುಕ್ತಾಯಗೊಂಡಿದ್ದು, ನಾಳೆ (ಮೇ 13) ಫಲಿತಾಂಶ ಹೊರಬೀಳಲಿದೆ. ಈ ನಡುವೆ ಅಭ್ಯರ್ಥಿಗಳ ಸೋಲು ಗೆಲುವಿನ ಮೇಲೆ ಬೆಟ್ಟಿಂಗ್ (Betting) ಕಟ್ಟುವ ಭರಾಟೆ ಜೋರಾಗಿದ್ದು, ಕೆಲವೆಡೆ ಕುರಿ ಮೇಕೆಗಳನ್ನು ಬೆಟ್ಟಿಂಗ್ ಆಗಿ ಇಡಲಾಗುತ್ತಿದೆ. ಇನ್ನೂ ಕೆಲವೆಡೆ ಬಹಿರಂಗವಾಗಿ ಬೆಟ್ಟಿಂಗ್ ಕಟ್ಟಲಾಗುತ್ತಿದೆ. ಇದೀಗ ಮೈಸೂರಿನಲ್ಲಿ ಚುನಾವಣೆ ಗೆಲುವು, ಸೋಲಿನ ಬೆಟ್ಟಿಂಗ್‌ ಅಗ್ರಿಮೆಂಟ್ ವಿಚಾರವಾಗಿ ಒಟ್ಟು ಏಳು ಮಂದಿ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಠಾಣಾ ವ್ಯಾಪ್ತಿಯಲ್ಲಿ ದಂಧೆಕೋರರು ಛಾಪಾಕಾಗದದಲ್ಲಿ 5 ಲಕ್ಷದ ಬೆಟ್ಟಿಂಗ್ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಇದರ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನು ನೋಡಿದ ಪೊಲೀಸರು, 7 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಮತದಾನದ ಬೆನ್ನೆಲೆ ರಾಜ್ಯದಲ್ಲಿ ಹೆಚ್ಚಾದ ರಾಜಕೀಯ ಬೆಟ್ಟಿಂಗ್​: ಅಭ್ಯರ್ಥಿಗಳ ಪರ ಬಾಜಿಗಿಳಿದ ಅಭಿಮಾನಿಗಳು

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಅಗ್ರಿಮೆಂಟ್ ಪೇಪರ್​ನಲ್ಲಿ ಇರುವಂತೆ, ಜಯರಾಮ, ಪ್ರಕಾಶ್, ಶಿವರಾಜ್ ಅಗ್ರಿಮೆಂಟ್ ಮಾಡಿಕೊಂಡಿದ್ದಾರೆ. ಜೆಡಿಎಸ್​ ಅಭ್ಯರ್ಥಿ ಜಯಪ್ರಕಾಶ್ ಚಿಕ್ಕಣ್ಣ ಪರ ಪ್ರಕಾಶ್, ಶಿವರಾಜ್‌ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು ಪರ ಜಯರಾಮ್‌ ಬೆಟ್ಟಿಂಗ್‌ ಅಗ್ರಿಮೆಂಟ್ ಮಾಡಿದ್ದಾರೆ. ಅಲ್ಲದೆ, ತಲಾ 5 ಲಕ್ಷದಂತೆ ಒಟ್ಟು 10 ಲಕ್ಷ ನಗದು ನೇಮಿಚಂದ್ ಬಳಿ ನೀಡಲಾಗಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಪೂಜಾ ಎಲೆಕ್ಟ್ರಾನಿಕ್ಸ್‌ ಅಂಗಡಿಯ ಮಾಲೀಕ‌ ನೇಮಿಚಂದ್ ಬಳಿ ಬೆಟ್ಟಿಂಗ್ ಹಣವನ್ನು ನೀಡಲಾಗಿದ್ದು, ಒಂದು ವೇಳೆ ಬಿಜೆಪಿ ಗೆದ್ದರೆ ಹಣ ವಾಪಸ್ ಪಡೆಯುವ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಸದ್ಯ ಅಗ್ರಿಮೆಂಟ್‌ಗೆ ಸಹಾಯ ಮಾಡಿದ್ದ ಮೂವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಮೈಸೂರಿನ ಪಿರಿಯಾಪಟ್ಟಣದಲ್ಲಿ ಕೂಡ ಬೆಟ್ಟಿಂಗ್ ಭರಾಟೆ ಹೆಚ್ಚಾಗಿದೆ. ನಿವೇಶನ, ಹೊಲ, ಗದ್ದೆ, ನಗದು ವಿಡಿಯೋ ಮಾಡಿ ಬೆಟ್ಟಿಂಗ್ ಕಟ್ಟಲು ಸವಾಲು ಹಾಕಲಾಗಿದೆ. ಯುವಕರು, ವೃದ್ದರು ಯಾರೂ ಬೇಕಾದರೂ ತಾಕತ್ತಿದ್ದರೆ ಇದ್ದರೆ ಬೆಟ್ಟಿಂಗ್ ಕಟ್ಟಿ ಬನ್ನಿ ಅಂತಾ​ ಕಾಂಗ್ರೆಸ್ ಅಭ್ಯರ್ಥಿ ಕೆ. ವೆಂಕಟೇಶ್ ಪರ ಚಾಲೆಂಜ್​ ಮಾಡಲಾಗಿದೆ. ಇದೇ ರೀತಿ ಸಿದ್ದರಾಮಯ್ಯ ಮತ್ತು ಸೋಮಣ್ಣ ಅಖಾಡದಲ್ಲಿರುವ ವರುಣಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲೂ ಬೆಟ್ಟಿಂಗ್ ಕಟ್ಟಲಾಗುತ್ತಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?