AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮನಸ್ಸು ಗೆದ್ದು ಮತ ಕೇಳ್ತಿವಿ, ಬಿಹಾರ್ ರಾಜಕಾರಣ ಮಾಡುವುದಿಲ್ಲ; ಪರೋಕ್ಷವಾಗಿ ಪ್ರೀತಂ ಗೌಡ ವಿರುದ್ಧ ಭವಾನಿ ರೇವಣ್ಣ ವಾಗ್ದಾಳಿ

ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭವಾನಿ ರೇವಣ್ಣ ಪರೋಕ್ಷವಾಗಿ ಪ್ರೀತಂ ಗೌಡ ವಿರುದ್ಧ ವಾಗ್ದಾಳಿ ನಡೆಸಿದರು.

ನಿಮ್ಮ ಮನಸ್ಸು ಗೆದ್ದು ಮತ ಕೇಳ್ತಿವಿ, ಬಿಹಾರ್ ರಾಜಕಾರಣ ಮಾಡುವುದಿಲ್ಲ; ಪರೋಕ್ಷವಾಗಿ ಪ್ರೀತಂ ಗೌಡ ವಿರುದ್ಧ ಭವಾನಿ ರೇವಣ್ಣ ವಾಗ್ದಾಳಿ
ಭವಾನಿ ರೇವಣ್ಣ
ಆಯೇಷಾ ಬಾನು
ಆಯೇಷಾ ಬಾನು|

Updated on:May 02, 2023 | 11:48 AM

Share

ಮುಖ್ಯಾಂಶಗಳು

  • ಪ್ರೀತಂಗೌಡ ವಿರುದ್ಧ ಪರೋಕ್ಷವಾಗಿ ಭವಾನಿ ರೇವಣ್ಣ ವಾಗ್ದಾಳಿ
  • ನಿಮ್ಮ ಮನಸ್ಸು ಗೆದ್ದು ನಿಮ್ಮನ್ನು ಮತ ಕೇಳ್ತಿವಿ ಹೊರತು ಬಿಹಾರ್ ಅಂತಹ ರಾಜಕಾರಣ ನಾವು ಮಾಡುವುದಿಲ್ಲ
  • ನಾವೆಂದೂ ಗೂಂಡಾಗಿರಿ ರಾಜಕಾರಣ ಮಾಡ್ದವ್ರಲ್ಲಾ

ಹಾಸನ: ರಾಜ್ಯ ಚುನಾವಣೆಗೆ ಅಖಾಡ ಸಿದ್ಧವಾಗಿದೆ(Karnataka Assembly Elections 2023). ಕೆಲವೇ ದಿನಗಳಲ್ಲಿ ಮತದಾರ ಪ್ರಭುಗಳು ರಾಜಕೀಯ ಭವಿಷ್ಯ ನಿರ್ಧಾರ ಮಾಡಲಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ರಾಜಕೀಯ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇನ್ನು ಮತ್ತೊಂದೆಡೆ ಆರೋಪ-ಪ್ರತ್ಯಾರೋಪ, ವಾಗ್ದಾಳಿಗಳು ಹೆಚ್ಚಾಗಿವೆ. ಸದ್ಯ ಕರವೇ ವತಿಯಿಂದ ಜೆಡಿಎಸ್ ಅಭ್ಯರ್ಥಿ ಸ್ವರೂಪ್‌ಗೆ(HP Swaroop) ಬೆಂಬಲ ಘೋಷಣೆ ಹಾಗೂ ದೇಣಿಗೆ ನೀಡುವ ಕಾರ್ಯಕ್ರಮದಲ್ಲಿ ಪ್ರೀತಂಗೌಡ(Preetham Gowda) ವಿರುದ್ಧ ಪರೋಕ್ಷವಾಗಿ ಭವಾನಿ ರೇವಣ್ಣ(Bhavani Revanna) ವಾಗ್ದಾಳಿ ನಡೆಸಿದ್ದಾರೆ.

ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭವಾನಿ ರೇವಣ್ಣ, ನೀವೆಲ್ಲಾ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಕೊಡ್ತಿನಿ ಅಂಥ ಹೇಳಿದ್ದೀರಾ. ಒಬ್ಬೊಬ್ಬರು ನೂರು ಓಟು ಹಾಕಿಸುವ ಶಕ್ತಿ ಇದೆ ಅನ್ಕೊತ್ತೀನಿ. ಜೆಡಿಎಸ್‌ಗೆ ಬೆಂಬಲ ನೀಡಿದ್ದಕ್ಕೆ ನಾವೆಲ್ಲರೂ ಚಿರ‌ಋಣಿ ಆಗಿರ್ತಿವಿ. ಜೆಡಿಎಸ್ ಪಕ್ಷದವರೆಲ್ಲಾ ನಿಮಗೆ ಚಿರ‌ಋಣಿ ಆಗಿರ್ತಿವಿ. ಅದರ ಜೊತೆ ನಮ್ಮ ಕುಟುಂಬ, ಪ್ರಕಾಶಣ್ಣನ ಕುಟುಂಬ ನಿಮ್ಮ ಜೊತೆಗೆ ಇರುತ್ತೆ. ರಾಮ ಸೇತುವೆ ಕಟ್ಟುವಾಗ ಅಳಿಲು ಕೂಡ ಸಹಾಯ ಮಾಡಿತ್ತು.

ಇದನ್ನೂ ಓದಿ: Karnataka Assembly Election: ಸ್ವರೂಪ್ ಕೂಡ ನನ್ನ ಮಗ: ಮುನಿಸು ಬದಿಗಿಟ್ಟು ಜೆಡಿಎಸ್ ಅಭ್ಯರ್ಥಿ ಬೆನ್ನಿಗೆ ನಿಂತ ದೊಡ್ಡಗೌಡರ ಸೊಸೆ

ಅದರಿಂದ ಅಳಿಲು ಸೇವೆ ಅಂತ ಹೆಸರು ಬಂತು ಅಂತ ಮಾತನಾಡುತ್ತಾರೆ. ಸ್ವರೂಪ್‌ಗೆ ಸಹಾಯ‌ಮಾಡಿ ಸಹೋದರ, ಸಹೋದರಿಯರಾಗಿ ನಿಂತಿದ್ದೀರಾ. ಮುಂದಿನ ದಿನಗಳಲ್ಲಿ ನೀವು ನಮ್ಮ ಜೊತೆ ಇರ್ತಿರಾ, ನಿಮ್ಮ ಜೊತೆ ನಾವು ಇರ್ತಿವಿ. ಯಾವುದೇ ಧಮ್ಕಿಗೆ ನೀವ್ಯಾರು ಹೆದರಬಾರದು. ನಿಮ್ಮ ಎಲ್ಲಾ ಟೈಂನಲ್ಲೂ ಜೊತೆಗೆ ಇರ್ತಿವಿ. ನಾವೆಂದೂ ಗೂಂಡಾಗಿರಿ ರಾಜಕಾರಣ ಮಾಡ್ದವ್ರಲ್ಲಾ. ವಿಶ್ವಾಸ ಬೆಳೆಸಿ, ವಿಶ್ವಾಸದಿಂದ ನಿಮ್ಮ ಮನಸ್ಸು ಗೆದ್ದು ನಿಮ್ಮನ್ನು ಮತ ಕೇಳ್ತಿವಿ ಹೊರತು ಬಿಹಾರ್ ಅಂತಹ ರಾಜಕಾರಣ ನಾವು ಮಾಡುವುದಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಶಾಸಕ ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ಹರಿಹಾಯ್ದರು.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:48 am, Tue, 2 May 23

Follow Us
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!