AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊಸ್ತಿಲಲ್ಲೇ ಸಿದ್ದರಾಮಯ್ಯ ಆಪ್ತನ ಸೊಸೆಗೆ ಡಿಸಿ ಬಿಗ್​ ಶಾಕ್, ಎಲೆಕ್ಷನ್​ಗೆ ನಿಲ್ಲುವ ಆಸೆ ನುಚ್ಚುನೂರು

ಚುನಾವಣೆಗೆ ನಿಲ್ಲಲು ಮುಂದಾಗಿದ್ದ ಸಿದ್ದರಾಮಯ್ಯನವರ ಆಪ್ತನ ಸೊಸೆಗೆ ಬೀದರ್ ಜಿಲ್ಲಾಧಿಕಾರಿ ಬಿಗ್ ಶಾಕ್ ಕೊಟ್ಟಿದ್ದಾರೆ. ಇದರಿಂದ ಚುನಾವಣೆ ಕನಸು ಭಗ್ನವಾಗಿದೆ.

ಚುನಾವಣೆ ಹೊಸ್ತಿಲಲ್ಲೇ ಸಿದ್ದರಾಮಯ್ಯ ಆಪ್ತನ ಸೊಸೆಗೆ ಡಿಸಿ ಬಿಗ್​ ಶಾಕ್, ಎಲೆಕ್ಷನ್​ಗೆ ನಿಲ್ಲುವ ಆಸೆ ನುಚ್ಚುನೂರು
ಸಿದ್ದರಾಮಯ್ಯ, ಎಂ ಈರಣ್ಣ
ರಮೇಶ್ ಬಿ. ಜವಳಗೇರಾ
|

Updated on: Apr 11, 2023 | 1:18 PM

Share

ರಾಯಚೂರು: ಜಿಲ್ಲೆಯ ಮಾನ್ವಿ ಕ್ಷೇತ್ರದಲ್ಲಿ ಎಲ್ಲ ಪಕ್ಷಗಳು ಪೈಪೋಟಿಗೆ ಬಿದ್ದಂತೆ ಗೆಲುವಿಗಾಗಿ ಇನ್ನಿಲ್ಲದ ತಂತ್ರ ರಣತಂತ್ರಗಳನ್ನು ಹೆಣೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮಾನ್ವಿ ಚುನಾವಣೆ ಕಣ ರಂಗೇರತೊಡಗಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ(Siddaramaiah) ಪರಮಾಪ್ತ ಗುತ್ತಿಗೆದಾರ ಎಂ.ಈರಣ್ಣ ಅವರ ಸೊಸೆಗೆ ಸಂಕಷ್ಟ ಎದುರಾಗಿದೆ. ಎಎಸ್​ಟಿ ಮೀಸಲು ಕ್ಷೇತ್ರವಾದ ಮಾನ್ವಿ(Manvi) ಕ್ಷೇತ್ರದಿಂದ 2018ರ ಚುನಾವಣೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಎಂ ಈರಣ್ಣ ಸೊಸೆ ಡಾ ಡಾ.ತುನುಶ್ರೀ ಸ್ಪರ್ಧಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್​ ಅಭ್ಯರ್ಥಿಗಳಿಗೆ ಪ್ರಬಲ ಪೈಪೋಟಿ ನೀಡಿದ್ದರು. ಈ ಬಾರಿಯೂ ಸಹ ಡಾ.ತನುಶ್ರೀ ಅವರನ್ನು ಕಣಕ್ಕಿಳಿಲು ಎಂ ಈರಣ್ಣ ಪ್ಲಾನ್ ಮಾಡಿದ್ದಾರೆ. ಆದ್ರೆ, ಡಾ.ತನುಶ್ರೀ ಅವರಎಸ್ಟಿ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಬೀದರ್ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದರಿಂದ ಈ ಬಾರಿ ಚುನಾವಣೆ ಸೊಸೆಯನ್ನು ಕಣಕ್ಕಿಳಿಸಲು ತಯಾರಿ ನಡೆಸಿದ್ದ ಸಿದ್ದರಾಮಯ್ಯನವರ ಆಪ್ತ ಈರಣ್ಣಗೆ ವಿಘ್ನ ಎದುರಾಗಿದೆ.

ಮೂಲತಃ ಬೀದರ್ ಜಿಲ್ಲೆಯವರಾಗಿರುವ ತನುಶ್ರೀ, ಕುರುಬ ಸಮುದಾಯದವರು. ಈ ಹಿನ್ನೆಲೆಯಲ್ಲಿ​ತನುಶ್ರೀ ಅವರು ಬೀದರ್​ ಜಿಲ್ಲಾಡಳಿತದಿಂದ ಎಸ್ಟಿ ಪ್ರಮಾಣ ಪಡೆದುಕೊಂಡು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಸ್​ಟಿ ಮೀಸಲು ಕ್ಷೇತ್ರವಾದ ಮಾನ್ವಿಯಿಂದ ಸ್ಪರ್ಧೆ ಮಾಡಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದನ್ನು ವಿರೋಧಿಸಿ ನಕಲಿ ಜಾತಿ ಪ್ರಮಾಣದ ಬಗ್ಗೆ ತನಿಖೆ ನಡೆಸುವಂತೆ ಹೈದ್ರಾಬಾದ್ ಕರ್ನಾಟಕ ವಾಲ್ಮೀಕಿ ಸಂಘ ಪ್ರಕರಣ ದಾಖಲಿಸಿತ್ತು. ಆದರೂ ತನುಶ್ರೀ ಅವರು ಹೈಕೋರ್ಟ್​ನಲ್ಲಿ ದಾವೆ ಹೂಡಿ 2018ರ ಚುನಾವಣೆ ಎದುರಿಸಿ 30 ಸಾವಿರಕ್ಕೂ ಹೆಚ್ಚು ಮತಗಳನ್ನ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಇದೀಗ ಮತ್ತೆ ಮಾನ್ವಿಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧೆ ಕಣಕ್ಕಿಳಿಯಲು ತನುಶ್ರೀ ಮುಂದಾಗಿದ್ದರು. ಆದ್ರೆ, ಬೀದರ್​ ಜಿಲ್ಲಾಧಿಕಾರಿ ತನುಶ್ರೀ ಅವರಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶ ಆದೇಶ ಹೊರಡಿಸಿದ್ದಾರೆ. ಇದರಿಂದ ಈ ಬಾರಿ ತನುಶ್ರೀ ಚುನಾವಣೆಗೆ ನಿಲ್ಲದಂತಾಗಿದೆ.

ಈಗ ಮಾನ್ವಿಯಲ್ಲಿ ಜೆಡಿಎಸ್​ನಿಂದ ಹಾಲಿ ಶಾಸಕ ರಾಜವೆಂಕಟಪ್ಪ ನಾಯಕ ಮತ್ತೊಮ್ಮೆ ಸ್ಪರ್ಧೆ ಮಾಡುತ್ತಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್​ ಅಭ್ಯರ್ಥಿ  ಯಾರು ಎಂದು ಇನ್ನೂ ಅಂತಿಮವಾಗಿಲ್ಲ. ಕಾಂಗ್ರೆಸ್​​ನಿಂದ ರಾಯಚೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿವಿ ನಾಯಕ್​ ಅವರನ್ನು ಕಣಕ್ಕಿಳಿಸಲು ಹೈಕಮಾಂಡ್​ ಚಿಂತನೆ ನಡೆಸಿದೆ. ಆದ್ರೆ, ಕಾರ್ಯಕರ್ತರು ಇದಕ್ಕೆ ವಿರೋದಿಸುತ್ತಿದ್ದು, ಸ್ಥಳೀಯರಿಗೆ ಟಿಕೆಟ್​ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಇನ್ನಷ್ಟು ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!