AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ಭರ್ಜರಿ ಗೆಲವು; ಪತ್ರಿಕಾಗೋಷ್ಠಿಯಲ್ಲೇ ಭಾವುಕರಾಗಿ ಕಣ್ಣೀರು ಹಾಕಿದ ಡಿಕೆ ಶಿವಕುಮಾರ್

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಕಾಂಗ್ರೆಸ್​​ಗೆ ಭರ್ಜರಿ ಗೆಲುವು ದೊರೆಯುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಭಾವುಕರಾಗಿ ಕಣ್ಣೀರು ಹಾಕಿ ಅತ್ತರು.

Ganapathi Sharma
|

Updated on:May 13, 2023 | 1:31 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Election Results) ಪ್ರಕಟಗೊಳ್ಳುತ್ತಿದ್ದು, ಕಾಂಗ್ರೆಸ್​​ಗೆ ಭರ್ಜರಿ ಗೆಲುವು ದೊರೆಯುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಭಾವುಕರಾಗಿ ಕಣ್ಣೀರು ಹಾಕಿ ಅತ್ತರು. ಕರ್ನಾಟಕದ ಅತಿದೊಡ್ಡ ಗೆಲುವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ಧನ್ಯವಾದಗಳು ಎಂದು ಅವರು ಹೇಳಿದರು. ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮಧ್ಯಾಹ್ನ 1 ಗಂಟೆ ವೇಳೆಗೆ, ಕಾಂಗ್ರೆಸ್ 120ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಬಹುಮತ ಗಳಿಸಿವುದು ಖಚಿತವಾಗುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿದರು.

ಈ ಮಧ್ಯೆ, ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ, ಸಚಿವ ಆರ್ ಅಶೋಕ್ ವಿರುದ್ಧ ಡಿಕೆ ಶಿವಕುಮಾರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕನಕಪುರದಲ್ಲಿ ಕಾಂಗ್ರೆಸ್​ನ ಡಿ.ಕೆ.ಶಿವಕುಮಾರ್​ಗೆ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಆರ್.ಅಶೋಕ್​ ಹೀನಾಯ ಸೋಲುಂಡಿದ್ದಾರೆ.

ಕಾಂಗ್ರೆಸ್ ಭದ್ರಕೋಟೆಯಾಗಿರುವ ಕನಕಪುರದಲ್ಲಿ ಡಿಕೆ ಶಿವಕುಮಾರ್​ಗೆ ಟಕ್ಕರ್ ಕೊಡಲು ಬಿಜೆಪಿ ಸಚಿವ ಆರ್ ಅಶೋಕ್​ರನ್ನು ನಿಲ್ಲಿಸಿತ್ತು. ಆದ್ರೆ ಕನಕಪುರ ಮತದಾರರು ಹೊಸ ಅಭ್ಯರ್ಥಿ ಪರ ಒಲವು ತೋರಿಸಿಲ್ಲ. ಆರ್​ ಅಶೋಕ್ ಹೀನಾಯವಾಗಿ ಸೋತಿದ್ದಾರೆ. ಬಿಜೆಪಿಯ ಮಾಸ್ಟರ್ ಪ್ಲಾನ್​ಗಳೆಲ್ಲವೂ ತಲೆಗೆಳಗಾಗಿವೆ. ಘಟಾನುಘಟಿಗಳ ರೋಡ್​ ಶೋ, ಪ್ರಚಾರ ಯಾವುದಕ್ಕೂ ಫಲ ಸಿಕ್ಕಿಲ್ಲ. ಸದ್ಯ ಗೆಲುವಿನ ನಗೆ ಬೀರಿದ ಡಿಕೆ ಶಿವಕುಮಾರ್ ಫಲಿತಾಂಶ ಕಂಡು ಭಾವುಕರಾದರು. ಜೈಲಿನಲ್ಲಿದ್ದ ದಿನಗಳನ್ನ ಮೆಲುಕು ಹಾಕಿ ಭಾವುಕರಾಗಿ ಕಣ್ಣೀರಿಟ್ಟರು. ಜೈಲಿನಲ್ಲಿದ್ದಾಗ ಸೋನಿಯಾ ಗಾಂಧಿ ಅವರು ನೋಡೋಕೆ ಬಂದ ಸನ್ನಿವೇಶ ನೆನಪಿಸಿಕೊಂಡ ಭಾವುಕರಾದರು.

ಇದನ್ನೂ ಓದಿ: Kanakapura Election 2023 Winner: ಕನಕಪುರದಲ್ಲಿ ಡಿಕೆ ಶಿವಕುಮಾರ್​ಗೆ ಭರ್ಜರಿ ಗೆಲುವು

ಕನಕಪುರ ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳೇ ನಿರ್ಣಾಯಕ. ಹೀಗಾಗಿ ಬಿಜೆಪಿ ಒಕ್ಕಲಿಗ ಸಮುದಾಯದ ಆರ್​ ಅಶೋಕ್​ರನ್ನು ನಿಲ್ಲಿಸಿತ್ತು. ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ 2,24,956 ಮತದಾರರಲ್ಲಿ 1,90,124 ಮತದಾನ ಮಾಡಿದ್ದರು. ಎರಡು ದಶಕಗಳ ಹಿಂದೆ ಜೆಡಿಎಸ್‌ ಪಾಲಿಗೆ ಭದ್ರಕೋಟೆಯಾಗಿದ್ದ ಕನಕಪುರ, ಈಗ ಡಿಕೆ ಶಿವಕುಮಾರ್ ಅವರ ಮುಷ್ಟಿಯಲ್ಲಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 1:05 pm, Sat, 13 May 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ