AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಡಿಪಿಐ ಜೊತೆ ಕಾಂಗ್ರೆಸ್ ಒಳ ಒಪ್ಪಂದ: ವಿಡಿಯೋ ಸಮೇತ ಆರೋಪ ಮಾಡಿದ ಬಿಜೆಪಿ

ನಿಷೇಧಿತ ಪಿಎಫ್​ಐ ಸಂಘಟನೆ ಜೊತೆ ಗುರುತಿಸಿಕೊಂಡಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್​ಡಿಪಿಐ) ಸಂಘಟನೆಯೊಂದಿಗೆ ಕಾಂಗ್ರೆಸ್​ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿದೆ.

ಎಸ್​ಡಿಪಿಐ ಜೊತೆ ಕಾಂಗ್ರೆಸ್ ಒಳ ಒಪ್ಪಂದ: ವಿಡಿಯೋ ಸಮೇತ ಆರೋಪ ಮಾಡಿದ ಬಿಜೆಪಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:May 05, 2023 | 7:52 PM

Share

ಬೆಂಗಳೂರು: ನಿಷೇಧಿತ ಪಿಎಫ್​ಐ (PFI) ಸಂಘಟನೆ ಜೊತೆ ಗುರುತಿಸಿಕೊಂಡಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಂಘಟನೆಯೊಂದಿಗೆ ಕಾಂಗ್ರೆಸ್​ ಒಳ ಒಪ್ಪಂದ​ ಮಾಡಿಕೊಂಡಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಇಂಥದೊಂದು ಆರೋಪ ಮಾಡುವ ಮೂಲಕ ವಿಡಿಯೋ ಒಂದನ್ನು ಬಿಜೆಪಿ ಟ್ವೀಟ್​ ಮಾಡಿಕೊಂಡಿದೆ. ಕೇರಳ ಕಾಂಗ್ರೆಸ್ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರ ವಿಡಿಯೋವನ್ನು ಬಿಜೆಪಿ ರಾಜ್ಯ ಘಟಕ ಹಂಚಿಕೊಂಡಿದ್ದು, ಕಾಂಗ್ರೆಸ್ ಮತ್ತು ಎಸ್​ಡಿಪಿಐ ಎರಡೂ ಕೈ ಜೋಡಿಸಿವೆ ಎಂದು ಹೇಳಿದೆ.

ಮತಗಳನ್ನು ವಿಭಜಿಸದಂತೆ ಎಸ್​ಡಿಪಿಐಗೆ ಒತ್ತಾಯಿಸಿದ ಸಂಸದ ಉಣ್ಣಿತ್ತಾನ್

ಕೇರಳ ಕಾಂಗ್ರೆಸ್ ಸಂಸದ ಉಣ್ಣಿತ್ತಾನ್ (Rajmohan Unnithan) ಅವರು ಕರ್ನಾಟಕದಲ್ಲಿ ಮತಗಳ ವಿಭಜನೆಗೆ ತಂತ್ರ ರೂಪಿಸಿದ್ದು, ಒಂದು ಸಮುದಾಯದ ಮತಗಳಿಗಾಗಿ ಅವರು ಹತಾಶೆಗೊಂಡಿರುವುದು ಬಹಿರಂಗವಾಗಿದೆ. ಮತಗಳನ್ನು ವಿಭಜಿಸದಂತೆ ಎಸ್​ಡಿಪಿಐಗೆ ಒತ್ತಾಯಿಸಿದ್ದು, ಆ ಮೂಲಕ ಬಜರಂಗದಳವನ್ನು ಗುರಿಯಾಗಿಸುವ ಅವರ ಬಲವಾದ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ. ಇದು ಅಪಾಯಕಾರಿಯಾಗಿದ್ದು, ಮತಗಳ ವಿಭಜನೆಯ ಈ  ಕಾರ್ಯಕ್ಕೆ ಕೋಮುವಾದಿ ಕಾಂಗ್ರೆಸ್​ ಎಂದು ಹೇಳುವುದಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಬಿಜೆಪಿ ಟ್ವೀಟ್​ ಮೂಲಕ ಕಿಡಿಕಾರಿದೆ.

ಇದನ್ನೂ ಓದಿ: ಪಿಎಫ್‌ಐ, ಎಸ್‌ಡಿಪಿಐ ಮೆಚ್ಚಿಸಲು ಬಜರಂಗದಳ ನಿಷೇಧಿಸಲು ಹೊರಟ ಕಾಂಗ್ರೆಸ್; ಉಡುಪಿಯಲ್ಲಿ ಅನಿಲ್ ಆ್ಯಂಟನಿ

ನಾವೆಲ್ಲರೂ ಆರ್​ಎಸ್​ಎಸ್​​ ಮತ್ತು ಬಿಜೆಪಿ ವಿರುದ್ಧ ಹೋರಾಡುತ್ತಿದ್ದೇವೆ. ಚುನಾವಣೆ ಸಂದರ್ಭದಲ್ಲಿ  ಮುಸ್ಲಿಮರು ತಮ್ಮೊಳಗೆ ತಾವೆ ಜಗಳವಾಡದೆ ಮತ್ತು ಬಿಜೆಪಿಯನ್ನು ಗೆಲ್ಲಿಸಬಾರದು. ಸರಿಯೇ? ಎಂದು ಉನ್ನಿಥಾನ್​ ವಿಡಿಯೋದಲ್ಲಿ ಹೇಳಿದ್ದಾರೆ.

ಇಸ್ಲಾಮಿಸ್ಟ್​ಗಳನ್ನು ಸೆಳೆಯಲು ಏನು ಬೇಕಾದರೂ ಮಾಡುತ್ತಾರೆ: ಕೆ. ಸುರೇಂದ್ರನ್

ಈ ಕುರಿತಾಗಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್​ ಸಹ ಟ್ವೀಟ್ ಮಾಡಿದ್ದು, ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರ ಮಾತುಗಳು ಕಾಂಗ್ರೆಸ್ ಪಕ್ಷದ ಚುನಾವಣಾ ಕಾರ್ಯತಂತ್ರವನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಇಸ್ಲಾಮಿಸ್ಟ್​ಗಳನ್ನು ಸೆಳೆಯಲು ಅವರು ಏನು ಬೇಕಾದರೂ ಮಾಡುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ಕರ್ನಾಟಕದ ಜನರನ್ನು ಲೂಟಿ ಮಾಡಿವೆ: ತುಮಕೂರಿನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಕಾಂಗ್ರೆಸ್​ನ ಮುಸ್ಲಿಂ ಅಭ್ಯರ್ಥಿಗಳ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಎಸ್​ಡಿಪಿಐಗೆ ಉಣ್ಣಿತ್ತಾನ್​ ಯಾವುದೇ ಮುಜುಗರವಿಲ್ಲದೆ ಹೇಳುತ್ತಿದ್ದಾರೆ. ಹಾಗಾದರೆ ಈ ಸಂದರ್ಭದಲ್ಲಿ ಬಿಜೆಪಿ ಗೆಲ್ಲಬಹುದಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಕಾಂಗ್ರೆಸ್​, ಎಸ್​ಡಿಪಿಐ ಸಂಯೋಜಿತ ಅವಳಿ ಮಕ್ಕಳಿದ್ದಂತೆ: ತೇಜಸ್ವಿ ಸೂರ್ಯ 

ಇದೇ ವಿಡಿಯೋವನ್ನು ಇತರೆ ಬಿಜೆಪಿ ನಾಯಕರು ಸಹ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಮತ್ತು ಎಸ್​ಡಿಪಿಐ ಸಂಯೋಜಿತ ಅವಳಿ (Siamese twins) ಮಕ್ಕಳಿದ್ದಂತೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:52 pm, Fri, 5 May 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ