AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಡಿಪಿಐ ಜೊತೆ ಕಾಂಗ್ರೆಸ್ ಒಳ ಒಪ್ಪಂದ: ವಿಡಿಯೋ ಸಮೇತ ಆರೋಪ ಮಾಡಿದ ಬಿಜೆಪಿ

ನಿಷೇಧಿತ ಪಿಎಫ್​ಐ ಸಂಘಟನೆ ಜೊತೆ ಗುರುತಿಸಿಕೊಂಡಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್​ಡಿಪಿಐ) ಸಂಘಟನೆಯೊಂದಿಗೆ ಕಾಂಗ್ರೆಸ್​ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿದೆ.

ಎಸ್​ಡಿಪಿಐ ಜೊತೆ ಕಾಂಗ್ರೆಸ್ ಒಳ ಒಪ್ಪಂದ: ವಿಡಿಯೋ ಸಮೇತ ಆರೋಪ ಮಾಡಿದ ಬಿಜೆಪಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:May 05, 2023 | 7:52 PM

Share

ಬೆಂಗಳೂರು: ನಿಷೇಧಿತ ಪಿಎಫ್​ಐ (PFI) ಸಂಘಟನೆ ಜೊತೆ ಗುರುತಿಸಿಕೊಂಡಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಂಘಟನೆಯೊಂದಿಗೆ ಕಾಂಗ್ರೆಸ್​ ಒಳ ಒಪ್ಪಂದ​ ಮಾಡಿಕೊಂಡಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಇಂಥದೊಂದು ಆರೋಪ ಮಾಡುವ ಮೂಲಕ ವಿಡಿಯೋ ಒಂದನ್ನು ಬಿಜೆಪಿ ಟ್ವೀಟ್​ ಮಾಡಿಕೊಂಡಿದೆ. ಕೇರಳ ಕಾಂಗ್ರೆಸ್ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರ ವಿಡಿಯೋವನ್ನು ಬಿಜೆಪಿ ರಾಜ್ಯ ಘಟಕ ಹಂಚಿಕೊಂಡಿದ್ದು, ಕಾಂಗ್ರೆಸ್ ಮತ್ತು ಎಸ್​ಡಿಪಿಐ ಎರಡೂ ಕೈ ಜೋಡಿಸಿವೆ ಎಂದು ಹೇಳಿದೆ.

ಮತಗಳನ್ನು ವಿಭಜಿಸದಂತೆ ಎಸ್​ಡಿಪಿಐಗೆ ಒತ್ತಾಯಿಸಿದ ಸಂಸದ ಉಣ್ಣಿತ್ತಾನ್

ಕೇರಳ ಕಾಂಗ್ರೆಸ್ ಸಂಸದ ಉಣ್ಣಿತ್ತಾನ್ (Rajmohan Unnithan) ಅವರು ಕರ್ನಾಟಕದಲ್ಲಿ ಮತಗಳ ವಿಭಜನೆಗೆ ತಂತ್ರ ರೂಪಿಸಿದ್ದು, ಒಂದು ಸಮುದಾಯದ ಮತಗಳಿಗಾಗಿ ಅವರು ಹತಾಶೆಗೊಂಡಿರುವುದು ಬಹಿರಂಗವಾಗಿದೆ. ಮತಗಳನ್ನು ವಿಭಜಿಸದಂತೆ ಎಸ್​ಡಿಪಿಐಗೆ ಒತ್ತಾಯಿಸಿದ್ದು, ಆ ಮೂಲಕ ಬಜರಂಗದಳವನ್ನು ಗುರಿಯಾಗಿಸುವ ಅವರ ಬಲವಾದ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ. ಇದು ಅಪಾಯಕಾರಿಯಾಗಿದ್ದು, ಮತಗಳ ವಿಭಜನೆಯ ಈ  ಕಾರ್ಯಕ್ಕೆ ಕೋಮುವಾದಿ ಕಾಂಗ್ರೆಸ್​ ಎಂದು ಹೇಳುವುದಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಬಿಜೆಪಿ ಟ್ವೀಟ್​ ಮೂಲಕ ಕಿಡಿಕಾರಿದೆ.

ಇದನ್ನೂ ಓದಿ: ಪಿಎಫ್‌ಐ, ಎಸ್‌ಡಿಪಿಐ ಮೆಚ್ಚಿಸಲು ಬಜರಂಗದಳ ನಿಷೇಧಿಸಲು ಹೊರಟ ಕಾಂಗ್ರೆಸ್; ಉಡುಪಿಯಲ್ಲಿ ಅನಿಲ್ ಆ್ಯಂಟನಿ

ನಾವೆಲ್ಲರೂ ಆರ್​ಎಸ್​ಎಸ್​​ ಮತ್ತು ಬಿಜೆಪಿ ವಿರುದ್ಧ ಹೋರಾಡುತ್ತಿದ್ದೇವೆ. ಚುನಾವಣೆ ಸಂದರ್ಭದಲ್ಲಿ  ಮುಸ್ಲಿಮರು ತಮ್ಮೊಳಗೆ ತಾವೆ ಜಗಳವಾಡದೆ ಮತ್ತು ಬಿಜೆಪಿಯನ್ನು ಗೆಲ್ಲಿಸಬಾರದು. ಸರಿಯೇ? ಎಂದು ಉನ್ನಿಥಾನ್​ ವಿಡಿಯೋದಲ್ಲಿ ಹೇಳಿದ್ದಾರೆ.

ಇಸ್ಲಾಮಿಸ್ಟ್​ಗಳನ್ನು ಸೆಳೆಯಲು ಏನು ಬೇಕಾದರೂ ಮಾಡುತ್ತಾರೆ: ಕೆ. ಸುರೇಂದ್ರನ್

ಈ ಕುರಿತಾಗಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್​ ಸಹ ಟ್ವೀಟ್ ಮಾಡಿದ್ದು, ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರ ಮಾತುಗಳು ಕಾಂಗ್ರೆಸ್ ಪಕ್ಷದ ಚುನಾವಣಾ ಕಾರ್ಯತಂತ್ರವನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಇಸ್ಲಾಮಿಸ್ಟ್​ಗಳನ್ನು ಸೆಳೆಯಲು ಅವರು ಏನು ಬೇಕಾದರೂ ಮಾಡುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ಕರ್ನಾಟಕದ ಜನರನ್ನು ಲೂಟಿ ಮಾಡಿವೆ: ತುಮಕೂರಿನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಕಾಂಗ್ರೆಸ್​ನ ಮುಸ್ಲಿಂ ಅಭ್ಯರ್ಥಿಗಳ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಎಸ್​ಡಿಪಿಐಗೆ ಉಣ್ಣಿತ್ತಾನ್​ ಯಾವುದೇ ಮುಜುಗರವಿಲ್ಲದೆ ಹೇಳುತ್ತಿದ್ದಾರೆ. ಹಾಗಾದರೆ ಈ ಸಂದರ್ಭದಲ್ಲಿ ಬಿಜೆಪಿ ಗೆಲ್ಲಬಹುದಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಕಾಂಗ್ರೆಸ್​, ಎಸ್​ಡಿಪಿಐ ಸಂಯೋಜಿತ ಅವಳಿ ಮಕ್ಕಳಿದ್ದಂತೆ: ತೇಜಸ್ವಿ ಸೂರ್ಯ 

ಇದೇ ವಿಡಿಯೋವನ್ನು ಇತರೆ ಬಿಜೆಪಿ ನಾಯಕರು ಸಹ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಮತ್ತು ಎಸ್​ಡಿಪಿಐ ಸಂಯೋಜಿತ ಅವಳಿ (Siamese twins) ಮಕ್ಕಳಿದ್ದಂತೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:52 pm, Fri, 5 May 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ