AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ತಿರಸ್ಕರಿಸುವಂತೆ ಚುನಾವಣಾಧಿಕಾರಿಗೆ ದೂರು: ಜಮೀರ್ ಆಹಮದ್​ಗೂ ಶುರುವಾಯ್ತು ಢವಢವ

ಕೆಪಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆನ್ನಲ್ಲೇ ಇದೀಗ ಚಾಮರಾಜಪೇಟೆ ಕಾಂಗ್ರೆಸ್​ ಅಭ್ಯರ್ಥಿ ಜಮೀದ್ ಅಹಮದ್ ಖಾನ್​ಗೂ ನಾಮಪತ್ರ ತಿರಸ್ಕೃತ ಆತಂಕ ಶುರುವಾಗಿದೆ.

ನಾಮಪತ್ರ ತಿರಸ್ಕರಿಸುವಂತೆ ಚುನಾವಣಾಧಿಕಾರಿಗೆ ದೂರು:  ಜಮೀರ್ ಆಹಮದ್​ಗೂ ಶುರುವಾಯ್ತು ಢವಢವ
ಜಮೀರ್ ಅಹಮದ್ ಖಾನ್ ನಾಮಪತ್ರ
ರಮೇಶ್ ಬಿ. ಜವಳಗೇರಾ
|

Updated on:Apr 21, 2023 | 2:19 PM

Share

ಮುಖ್ಯಾಂಶಗಳು

  • ಚಾಮರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್​ ನಾಮಪತ್ರದಲ್ಲಿ ಲೋಪ
  • ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್​ ರಾವ್ ಆರೋಪ
  • ಚಾಮರಾಜಪೇಟೆಯ ನವ ಭಾರತ ಸೇನಾ ಪಾರ್ಟಿಯ ವಿಧಾನಸಭಾ ಅಭ್ಯರ್ಥಿ ರುಕ್ಮಂಗರಿಂದ ದೂರು

ಬೆಂಗಳೂರು: ನಾಮಪತ್ರ ತಿರಸ್ಕೃತವಾಗು ಆತಂದಲ್ಲಿದ್ದ ಕನಕಪುರ ಕ್ಷೇತ್ರದ ಅಭ್ಯರ್ಥಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಗ್ ರಿಲೀಫ್ ಸಿಕ್ಕಿದೆ. ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ನಾಮಪತ್ರವನ್ನು ಕನಕಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಚಾಮರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ (Zameer Ahmed Khan nomination)​ ಅವರ ನಾಮಪತ್ರ ತಿರಸ್ಕೃತ ಮಾಡುವಂತೆ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ. ನಾಮಪತ್ರದಲ್ಲಿ ಸಾಕಷ್ಟು ಲೋಪದೋಷಗಳಿವೆ‌ ಎಂದು ನವ ಭಾರತ ಸೇನಾ ಪಾರ್ಟಿಯ ವಿಧಾನಸಭಾ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿಗಳಿಬ್ಬರು ಸೇರಿಕೊಂಡು ದೂರು ನೀಡಿದ್ದಾರೆ. ಇದರಿಂದ ಜಮೀರ್​ ಅಹಮದ್ ಖಾನ್​ಗೆ ಢವಢವ ಶುರುವಾಗಿದೆ.

ಇದನ್ನೂ ಓದಿ: DK Shivakumar Nomination: ಡಿಕೆ ಶಿವಕುಮಾರ್ ನಾಮಪತ್ರ ಅಂಗೀಕಾರ: ಕೆಪಿಸಿಸಿ ಅಧ್ಯಕ್ಷರಿಗೆ ಬಿಗ್ ರಿಲೀಫ್

ಇನ್ನು ಲೋಕಾಯುಕ್ತಕ್ಕೆ ಮಾಹಿತಿ ಸಲ್ಲಿಸುವ ವೇಳೆ ತನ್ನ ಅವಲಂಬಿತರ ಹೆಸರಿನಲ್ಲಿ ತಾಯಿ ಹೆಸರು ಸೇರಿಸಿದ್ದಾರೆ. ಆದ್ರೆ ನಾಮಪತ್ರದಲ್ಲಿ ಮಾತ್ರ ತಾಯಿ ಹೆಸರನ್ನು ಪ್ರಸ್ತಾಪಿಸಿಲ್ಲ. ಇದರೊಂದಿಗೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕೃತ ಮಾಡುವಂತೆ ಚಾಮರಾಜಪೇಟೆಯ ನವ ಭಾರತ ಸೇನಾ ಪಾರ್ಟಿಯ ವಿಧಾನಸಭಾ ಅಭ್ಯರ್ಥಿ ರುಕ್ಮಂಗ ಅವರು ದೂರು ನೀಡಿದ್ದಾರೆ. ಲೋಕಾಯುಕ್ತಕ್ಕೆ ಸಲ್ಲಿಸಿದ ಅಫೀಡವಿಟ್​ಲ್ಲಿ ತನ್ನ ಅವಲಂಭಿತರು ಹೆಂಡತಿ ತಾಯಿ , ಇಬ್ಬರು ಮಕ್ಕಳು ಎಂದು ಮಾಹಿತಿ ನೀಡಿದ್ದಾರೆ. ಆದರೆ ನಾಮಪತ್ರದಲ್ಲಿ ತಾಯಿ ಹೆಸರು ಉಲ್ಲೇಖ‌ ಮಾಡಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್​ ರಾವ್ ಪ್ರತಿಕ್ರಿಯಿಸಿದ್ದು, ಚಾಮರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್​ ನಾಮಪತ್ರದಲ್ಲಿ ಲೋಪವಿದೆ. ಹಾಗಾಗಿ ಜಮೀರ್​ ನಾಮಪತ್ರ ತಿರಸ್ಕರಿಸಬೇಕೆಂದು ಮನವಿ ಮಾಡಿದ್ದೇನೆ. ಇದಕ್ಕೆ ಜಮೀರ್​ ಅಹಮದ್ ಖಾನ್ ಅವರಿಗೆ ನೋಟಿಸ್ ಕೊಡುತ್ತೇವೆ ಎಂದು ಅಧಿಕಾರಿಗಳಯ ಹೇಳಿದ್ದಾರೆ ಎಂದು ತಿಳಿಸಿದರು.

ಏಪ್ರಿಲ್ 18ರಂದು ಜಮೀರ್ ಅಹಮದ್ ಖಾನ್ ಅವರು ಬೆಂಗಳೂರಿನ ಗೂಡ್‌ಶೆಡ್ ರಸ್ತೆಯಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದರು. ತಮ್ಮ ತಾಯಿ ಹಾಗೂ ಹೈಕೋರ್ಟ್ ನ ಹಿರಿಯ ವಕೀಲರಾದ ಇಸ್ಮಾಯಿಲ್ ಜಬಿವುಲ್ಲಾ ಸೇರಿದಂತೆ ಹಲವರೊಂದಿಗೆ ತೆರಳಿ 16 ನಾಮಪತ್ರದ ಪ್ರತಿ ಸಲ್ಲಿಕೆ ಮಾಡಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Fri, 21 April 23

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್