AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣಾದಲ್ಲಿ ಸ್ಪರ್ಧಿಸುವಂತೆ ಹೇಳಿದ್ಯಾರು? ಸ್ಪರ್ಧೆಗೆ ಒಪ್ಪಿಕೊಳ್ಳಲು ಕಾರಣ ಯಾರು? ಸೀಕ್ರೆಟ್​ ಬಿಚ್ಚಿಟ್ಟ ವಿ ಸೋಮಣ್ಣ

ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ ಬಿಟ್ಟು ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಚಿವ ವಿ ಸೋಮಣ್ಣ ಅವರಿಗೆ ಹೇಳಿದ್ಯಾರು? ಸ್ಪರ್ಧೆಗೆ ಕಾರಣರಾದವರು ಯಾರು? ಎನ್ನುವುದನ್ನು ಸೋಮಣ್ಣ ಬಿಚ್ಚಿಟ್ಟಿದ್ದಾರೆ.

ವರುಣಾದಲ್ಲಿ ಸ್ಪರ್ಧಿಸುವಂತೆ ಹೇಳಿದ್ಯಾರು? ಸ್ಪರ್ಧೆಗೆ ಒಪ್ಪಿಕೊಳ್ಳಲು ಕಾರಣ ಯಾರು? ಸೀಕ್ರೆಟ್​ ಬಿಚ್ಚಿಟ್ಟ ವಿ ಸೋಮಣ್ಣ
ವಿ.ಸೋಮಣ್ಣ
ರಮೇಶ್ ಬಿ. ಜವಳಗೇರಾ
|

Updated on: May 02, 2023 | 1:58 PM

Share

ಮೈಸೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರ ಭಾರೀ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಪ್ರಬಲ ನಾಯಕ ವಿ ಸೋಮಣ್ಣ ಕಣಕ್ಕಿಳಿದಿರುವುದು. ಹೌದು…ಇದೇ ಕೊನೆ ಚುನಾವಣೆ ಎಂದಿರುವ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಗೆಲ್ಲಲೇಬೇಕೆಂದು ಅಳೆದು ತೂಗಿ ಅಂತಿಮವಾಗಿ ವರುಣಾ ಕ್ಷೇತ್ರವನ್ನು ಆಯ್ಕೆ ಮಾಡಿದ್ದಾರೆ. ಆದ್ರೆ, ಸಚಿವ ವಿ ಸೋಮಣ್ಣ ಅವರು ವರುಣಾ ಕ್ಷೇತ್ರಕ್ಕೆ ಬಂದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಹೆಸರು ಪ್ರಕಟವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಸಂಚನ ಸೃಷ್ಟಿಸಿತ್ತು. ಹಾಗಾದ್ರೆ, ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವಂತೆ ಹೇಳಿದ್ಯಾರು? ಸೋಮಣ್ಣ ಯಾರಿಗೆ ಮಾತಿಗೆ ಒಪ್ಪಿಕೊಂಡರು? ಈ ಎಲ್ಲಾ ಅಂಶಗಳನ್ನು ಸ್ವತಃ ಸೋಮಣ್ಣ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ವರುಣಾ ಕ್ಷೇತ್ರದಲ್ಲಿ ಸೋಮಣ್ಣಗೆ ಮುತ್ತಿಗೆ ಹಾಕಿ ಸಿದ್ದರಾಮಯ್ಯ ಪರ ಘೋಷಣೆ, ಕೆಲಕಾಲ ಬಿಗುವಿನ ವಾತಾವರಣ

ಇಂದು (ಮೇ.02) ವರುಣಾ ಕ್ಷೇತ್ರದ ಹೊಸಕೋಟೆಯಲ್ಲಿ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಸೋಮಣ್ಣ, ನಾನು ಇಲ್ಲಿ ಚುನಾವಣೆಗೆ ನಿಲ್ಲಲು ಕಾರಣ ಅಮಿತ್ ಶಾ ಹಾಗೂ ನರೇಂದ್ರ ಮೋದಿ. ನಾನು ಒಪ್ಪಿಕೊಳ್ಳಲು ಕಾರಣ ಬಿ ಎಸ್ ಯಡಿಯೂರಪ್ಪ. ವಿಜಯನಗರದಂತೆ ಅಭಿವೃದ್ಧಿ ಮಾಡಲು ಇಲ್ಲಿಗೆ ಕಳುಹಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಸಿಎಂ ಆಗಿದ್ದೆ ಎನ್ನುವ ಸಿದ್ದರಾಮಯ್ಯಗೆ ಪ್ರಶ್ನೆ ಕೇಳಿರುವ ಸೋಮಣ್ಣ, ಸಿದ್ದರಾಮಯ್ಯ ಅವರೇ ವರುಣಾ ಕ್ಷೇತ್ರವಾಗಿ 15 ವರ್ಷ ಆಗಿದೆ. ನೀವು 10 ವರ್ಷ ನಿಮ್ಮ‌ ಮಗ 05 ವರ್ಷ ಶಾಸಕರಾಗಿದ್ದೀರಾ. ಮೂರು ತಾಲ್ಲೂಕಿನಲ್ಲಿರುವ ಕ್ಷೇತ್ರವನ್ನು ಒಂದು ಮಾಡಲು ಆಗಲಿಲ್ಲ ಏಕೆ? 7 ಜಿಲ್ಲಾ ಪಂಚಾಯತಿ ಜನರ ಬಳಿಗೆ ಹೋಗಿದ್ದೀರಾ ? ಅವರ ಸಮಸ್ಯೆ ಏನು ಎಂದಯ ಕೇಳಿದ್ದೀರಾ ? ನಿಮ್ಮ ಆಡಳಿತ ವ್ಯವಸ್ಥೆ ಹೇಗಿದೆ ಎಂದು ಜನರ ಬಳಿ ಕೇಳಿದ್ದೀರಾ ? ನಿಮ್ಮನ್ನು ಸಿಎಂ ಮಾಡಿದ ಕ್ಷೇತ್ರದ ಜನರ ಋಣ ತೀರಿಸಿದ್ದೀರಾ? ಎಂದು ಪ್ರಶ್ನಿಸಿರುವ ಸೋಮಣ್ಣ, ಸಿದ್ದರಾಮಯ್ಯ ಬಡಾ ಬಡಾ ಕಾಮ್ ಕುಚ್ ಬೀ ನಹೀ ಕಿಯಾ ಎಂದು ಹಿಂದಿಯಲ್ಲಿ ವಾಗ್ದಾಳಿ ನಡೆಸಿದರು.

ವರುಣಾವನ್ನು ಛಿದ್ರ ಛಿದ್ರ ಮಾಡಿ‌ ನೀವು ಮಾತ್ರ ಭದ್ರಕೋಟೆ ಕಟ್ಟಿಕೊಂಡಿದ್ದೀರಾ? 15 ವರ್ಷ ನೀವು ಅವರಿಗೆ ಅವಕಾಶ ಕೊಟ್ಟಿದ್ದೀರಾ. ನನಗೆ 5 ವರ್ಷ ಅವಕಾಶ ಕೊಡಿ. ಅವರು 15 ವರ್ಷದಲ್ಲಿ ಮಾಡದನ್ನು ಮಾಡುತ್ತೇನೆ. ನನಗೆ ನೊಗ ಇಟ್ಟು ಹೋಗದಂತೆ ತಡೆಯುತ್ತೀರಾ? ಇದೆನಾ ಪ್ರಜಾಪ್ರಭುತ್ವ ? ಎಂದು ಸಿದ್ದರಾಮಯ್ಯಗೆ ಪ್ರಶ್ನಿಸಿರುವ ಸೋಮಣ್ಣ, ಡಬಲ್ ಇಂಜಿನ್ ಸರ್ಕಾರ ಇದೆ. 24 ಗಂಟೆ ಕೆಲಸ ಮಾಡುತ್ತಿದ್ದೇನೆ ಎಂದು ಹಿಂದಿಯಲ್ಲಿ ಅಮಿತ್ ಶಾಗೆ ಹೇಳಿದರು.

ನಾನು ಸಿದ್ದರಾಮಯ್ಯ ಭಾಷೆ‌ ಬಳಸಬಹುದು. ಆದರೆ ಬಳಸುವುದಿಲ್ಲ. ತಾಯಿ ಚಾಮುಂಡೇಶ್ವರಿ, ಮಹಾದೇಶ್ವರನ ಕೃಪೆ‌ ನನಗಿದೆ. ಗೆಲ್ಲುತ್ತೇನೆ ಎಂದು ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆಯ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ