AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧ, ಎರಡು ಮೂರು ಹಾಲಿ ಶಾಸಕರಿಗಿಲ್ಲ ಟಿಕೆಟ್: ಬಿಎಸ್ ಯಡಿಯೂರಪ್ಪ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಗೆ ಕ್ಷಣಗಣನೆ ಶುರವಾಗಿದೆ. ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಪಟ್ಟಿ ರಿಲೀಸ್ ಆಗಬಹುದು ಎಂದು ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧ, ಎರಡು ಮೂರು ಹಾಲಿ ಶಾಸಕರಿಗಿಲ್ಲ ಟಿಕೆಟ್: ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Rakesh Nayak Manchi
Rakesh Nayak Manchi|

Updated on:Apr 10, 2023 | 9:58 PM

Share

ಮುಖ್ಯಾಂಶಗಳು

  • ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ: ಯಡಿಯೂರಪ್ಪ
  • ಒಳ್ಳೆಯ ಅಭ್ಯರ್ಥಿಗಳ ಆಯ್ಕೆಯನ್ನು ಎಲ್ಲರೂ ಸೇರಿ ಮಾಡಿದ್ದೇವೆ: ಯಡಿಯೂರಪ್ಪ
  • ನಾಳೆ ಬೆಳಗ್ಗೆ ಅಥವಾ ಇವತ್ತು ರಾತ್ರಿ ಪಟ್ಟಿ ಬಿಡುಗಡೆ ಮಾಡಬಹುದು: ಯಡಿಯೂರಪ್ಪ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿಯಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಗೆ (BJP Candidate List) ಕ್ಷಣಗಣನೆ ಶುರವಾಗಿದೆ. ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಪಟ್ಟಿ ರಿಲೀಸ್ ಆಗಬಹುದು ಎಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರು ತಿಳಿಸಿದ್ದಾರೆ. ದೆಹಲಿಯಲ್ಲಿ ಸಭೆ ಮುಗಿಸಿ ಬೆಂಗಳೂರಿಗೆ ವಾಪಸ್ ಆದ ನಂತರ ಕಾವೇರಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಿಮವಾಗಿ ಯಾರ್ಯಾರಿಗೆ ಟಿಕೆಟ್ ಕೊಡಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ಬಹುಶಃ ನಾಳೆ ಬೆಳಗ್ಗೆ ಅಥವಾ ಇವತ್ತು ರಾತ್ರಿ ಪಟ್ಟಿ ಬಿಡುಗಡೆ ಮಾಡಬಹುದು. ಹಾಲಿ ಶಾಸಕರಿಗೆ ಟಿಕೆಟ್ ಸಿಗದಿರುವ ಬಗ್ಗೆ ಚರ್ಚೆ ನಡೆದಿದೆ. 2-3 ಕ್ಷೇತ್ರಗಳಲ್ಲಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲವೆಂಬ ಮಾಹಿತಿಯಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಹೈಕಮಾಂಡ್​ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದರು.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಬಹಳ ಸುಸೂತ್ರವಾಗಿ ನಡೆದಿದೆ. ಎಲ್ಲರೂ ಸೇರಿ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಅಭ್ಯರ್ಥಿಗಳ ಹೆಸರು ಕೇಳಿದರೆ ನೂರಕ್ಕೆ ನೂರು ಸರ್ಕಾರ ರಚನೆ ಮಾಡುವುದು ಗೋಚರ ಆಗುತ್ತದೆ. ಜನ ಆಶೀರ್ವಾದ ಮಾಡುವ ವಿಶ್ವಾಸವಿದೆ. ಈ ಬಾರಿ ಮತ್ತೆ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸುವುದು ನಿಶ್ಚಿತ. ನಾವು ಸಿಎಂ ನಾವು ಸಿಎಂ ಅಂತಾ ಕನಸು ಕಾಣುವವರಿಗೆ ಅವಕಾಶ ಇಲ್ಲ ಎಂದು ಹೇಳುವ ಮೂಲಕ ನಮ್ಮದೇ ಸರ್ಕಾರ ರಚನೆಯಾಗಲಿದೆ ಎಂದು ಹೇಳುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಟಾಂಗ್ ನೀಡಿದರು.

ಇದನ್ನೂ ಓದಿ: ಜೆಪಿ ನಡ್ಡಾ ಸಭೆ ನಂತರ ಬೇಸರದಲ್ಲೇ ಬೆಂಗಳೂರಿನತ್ತ ಮುಖಮಾಡಿದ ಬಿಎಸ್​ ಯಡಿಯೂರಪ್ಪ

ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ, ಜೆಡಿಎಸ್ ಎರಡನೇ ಪಟ್ಟಿ ರಿಲೀಸ್ ಮಾಡಲು ಸಜ್ಜಾಗುತ್ತಿದೆ. ಆದರೆ ಬಿಜೆಪಿ ಇದುವರೆಗೆ ಪಟ್ಟಿ ಬಿಡುಗಡೆ ಮಾಡಿಲ್ಲ. ಇದಕ್ಕೆ ಬಂಡಾಯ ಬಿಸಿಯೇ ಕಾರಣ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಪಟ್ಟಿ ವಿಳಂಬಕ್ಕೆ ಬಂಡಾಯದ ಬಿಸಿ ಅಂತಾ ಪ್ರಶ್ನೆ ಬರಲ್ಲ. ಮೂರು ದಿನದಿಂದ ಸುದೀರ್ಘವಾಗಿ ಎಲ್ಲರ ಅಭಿಪ್ರಾಯ ಪಡೆದು ಅಂತಿಮ ಮಾಡುತ್ತಿದ್ದಾರೆ. ಯಾವುದೇ ರೀತಿಯ ಗೊಂದಲ ಇಲ್ಲ. ಒಬ್ಬಿಬ್ಬರು ಅತೃಪ್ತಿ ಆದಾಗ ಅಥವಾ ಬೇಸರಗೊಳ್ಳಬಹುದು. ಅವರನ್ನು ಕರೆದು ಮಾತಾಡುತ್ತೇವೆ. ನನ್ನ ಪ್ರಕಾರ ಯಾರೂ ಅತೃಪ್ತರು ಇಲ್ಲ ಎಂದರು.

ಬಿಜೆಪಿ ನಿಯಮಗಳ ಪ್ರಕಾರ 75 ವರ್ಷ ಆದವರಿಗೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಅದಾಗ್ಯೂ, ರಾಜ್ಯದಲ್ಲಿ 70 ವರ್ಷ ಮೀರಿದವರಿಗೆ ಟಿಕೆಟ್ ನೀಡುವುದಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, 70 ವರ್ಷ ಮೀರಿದವರಿಗೆ ಟಿಕೆಟ್ ಇಲ್ಲ ಅಂತಾ ಯಾವುದೇ ಚರ್ಚೆಗಳು ಆಗಿಲ್ಲ ಎಂದರು. ಬಿಜೆಪಿ ಅತೃಪ್ತರಿಗೆ ಜೆಡಿಎಸ್ ಗಾಳ ಹಾಕುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಇದಕ್ಕೆ ನಾನು ಏನು ಉತ್ತರ ಕೊಡಲಿ ಎಂದು ಪ್ರಶ್ನಿಸಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:40 pm, Mon, 10 April 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್