AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಗೆ ಟಿಕೆಟ್​ ಸಿಕ್ಕ ಖುಷಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ ಬಿಜೆಪಿ ಅಭ್ಯರ್ಥಿ ಪುತ್ರ: FIR ದಾಖಲು

ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ನಾಯಕರೊಬ್ಬರ ಪುತ್ರ ಬಂದೂಕಿನಿಂದ ಗಾಳಿಯಲ್ಲಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿರುವಂತಹ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:May 04, 2023 | 7:39 PM

Share

ವಿಜಯಪುರ: ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ನಾಯಕರೊಬ್ಬರ ಪುತ್ರ ಬಂದೂಕಿನಿಂದ ಗಾಳಿಯಲ್ಲಿ ಮೂರು ಸುತ್ತು ಗಾಳಿಯಲ್ಲಿ ಗುಂಡು (firing) ಹಾರಿಸಿರುವಂತಹ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಫ್ಐಆರ್ ದಾಖಲಿಸಲಾಗಿದೆ ಎದು ಎಡಿಜಿಪಿ ಅಲೋಕ್ ಕುಮಾರ್​ ಟ್ವೀಟ್​ ಮಾಡಿದ್ದಾರೆ. ಬಬಲೇಶ್ವರ ಬಿಜೆಪಿ ಅಭ್ಯರ್ಥಿ ವಿಜುಗೌಡ ಎಸ್ ಪಾಟೀಲ್ (Vijugouda S Patil) ಅವರ ಪುತ್ರ ಸಮರ್ಥ್ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ತಂದೆಗೆ ಬಿಜೆಪಿ ಟಿಕೆಟ್​​ ಸಿಕ್ಕ ಪರಿಯನ್ನು ಸಂಭ್ರಮಿಸಿದ್ದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಸಮರ್ಥ್ ತನ್ನ ಹ್ಯಾಂಡ್​ ಗನ್​ನಿಂದ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ. ಸಮರ್ಥ್ ತನ್ನ ತಂದೆಗೆ ಬಿಜೆಪಿ ಟಿಕೆಟ್ ಸಿಕ್ಕಿದ್ದನ್ನು ಸಂಭ್ರಮಿಸಲು ಬಂದೂಕಿನಿಂದ ಗುಂಡು ಹಾರಿಸಿದ್ದಾನೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಈ ಘಟನೆ ಏಪ್ರಿಲ್ 12 ರಂದು ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಉಚಿತ ಕೊಡುಗೆಗಳು ಅಂತಿಮವಲ್ಲ ಎಂದ ಬರಗೂರು ರಾಮಚಂದ್ರಪ್ಪ; ಏನಿದರ ಮರ್ಮ?

ಎಫ್ಐಆರ್ ದಾಖಲು

ಈ ಬಗ್ಗೆ ಕರ್ನಾಟಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್​ ಪ್ರತಿಕ್ರಿಯಿಸಿದ್ದು, ಎಫ್ಐಆರ್ ದಾಖಲಿಸಲಾಗಿದೆ. ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಶಸ್ತ್ರಾಸ್ತ್ರ ಪರವಾನಗಿ ರದ್ದುಗೊಳಿಸುವ ಪ್ರಕ್ರಿಯೆ ಸಹ ಪ್ರಾರಂಭಿಸಲಾಗಿದೆ ಎಂದು ಅಲೋಕ್ ಕುಮಾರ್​ ಅವರು ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ವಾಗ್ದಾಳಿ

ಈ ಕುರಿತಾಗಿ ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ವಾಗ್ದಾಳಿ ಮಾಡಿದ್ದು, ಅಭಿವೃದ್ಧಿ ಹಾಗೂ ಕಣ್ಣೀರಿನ ಮದ್ಯ ಚುನಾವಣೆ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಗುಂಡಾಗಿರಿ ಮಾಡುತ್ತಾ ವೇದಿಕೆಯಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಕಣ್ಣೀರು ಹಾಕುವ ವ್ಯಕ್ತಿಯನ್ನು ನಂಬಬಾರದು. ಎದುರಾಳಿ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್ ಮೊಸಳೆ ಕಣ್ಣೀರು ಹಾಕುತ್ತಾ ಹೋಗುತ್ತಿದ್ದಾರೆ. ಅವರ ಮೊಸಳೆ ಕಣ್ಣೀರನ್ನು ಯಾರು ನಂಬಬಾರದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಕಿಚ್ಚು ಹತ್ತಿದ ಬಜರಂಗದಳ ಬ್ಯಾನ್ ವಿಚಾರ; ಕಾಂಗ್ರೆಸ್ ಸಮೀಕ್ಷೆ ಏನು ಹೇಳುತ್ತದೆ? ಇಲ್ಲಿದೆ ಮಾಹಿತಿ

ಬಿಜೆಪಿ‌ ಟಿಕೆಟ್ ಘೋಷಣೆಯಾದ ಕೂಡಲೇ ಇವರು ಸಂಭವಿಸಿದ ಪರ್ಯಾಯ ವಿಚಿತ್ರವಾಗಿತ್ತು. ಟಿವಿ ಪರದೆ ಮುಂದೆ ವಿಜುಗೌಡ ವಿಚಿತ್ರ ಸಂಭ್ರಮ ಮಾಡಿದ್ದರು. ಅವರ ಪುತ್ರ ಸಮರ್ಥ ಪಿಸ್ತೂಲ್​ನಿಂದ ಮೂರು ಸುತ್ತು ಗುಂಡು ಗಾಳಿಯಲ್ಲಿ ಹಾರಿಸಿದ್ದಾರೆ. ಇದು ಮೋದಿ ಅವರಿಗೆ ಅಮೀತ್ ಶಾ, ಬಿಎಲ್​​ ಸಂತೋಷ್ ಅವರಿಗೆ ಕಾಣಿಸುವುದಿಲ್ವಾ ಎಂದಿದ್ದಾರೆ.

ಪ್ರಧಾನಿ ಮೋದಿ ಪ್ರಶ್ನೆ ಮಾಡಿದ ಸಂಗಮೇಶ 

ಇವರಿಗೆ ಟಿಕೆಟ್ ಕೊಟ್ಟಿದ್ದು ಯಾವ ಆಧಾರದ‌ ಮೇಲೆ. ಮೋದಿ ಅವರೇ ಇಂಥ ಗುಂಡಾ ಪ್ರವೃತ್ತಿಯ ವಿಜುಗೌಡ ಪಾಟೀಲಗೆ ಯಾಕೆ ಟಿಕೆಟ್ ಕೊಟ್ಟಿದಿದ್ದಾರೆ ಎಂದು ಪ್ರಶ್ನಿಸಿದರು. ನಮ್ಮ ಕ್ಷೇತ್ರ ಬಿಹಾರ ಆಗಬಾರದು, ಗುಂಡು ಹಾರಿಸೋ ಕ್ಷೇತ್ರವಾಗಬಾರದು. ಆತಂಕಕಾರಿ ಆದ ವಾತಾವರಣ ನಮ್ಮ ಕ್ಷೇತ್ರದಲ್ಲಿ ಉಂಟಾಗಬಾರದು. ಎಂ.ಬಿ ಪಾಟೀಲ್ ಅಭಿವೃದ್ಧಿ ಬಿಟ್ಟು ಬೇರೆ ಏನೂ ಮಾಡಿಲ್ಲ. ಅಭಿವೃದ್ಧಿಗೆ ಮತ್ತೊಂದು‌ ಹೆಸರು ಎಂಬಿ ಪಾಟೀಲ್​ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Thu, 4 May 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ