AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

V Somanna: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುವಂತೆ ಸಚಿವ ವಿ ಸೋಮಣ್ಣಗೆ ಬಿಜೆಪಿ ಹೈಕಮಾಂಡ್ ಸೂಚನೆ

ಗುಜರಾತ್ ರಾಜ್ಯ ಸಾರ್ವತ್ರಿಕ ಚುನಾವಣೆಗೆ ಪ್ರಯೋಗಿಸಿದ್ದ ಯುವ ಅಸ್ತ್ರ ಯಶಸ್ವಿಯಾದ ಹಿನ್ನೆಲೆ ಕರ್ನಾಟಕದಲ್ಲೂ ಅದೇ ಅಸ್ತ್ರವನ್ನು ಪ್ರಯೋಗಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದಂತಿದೆ. ಹಿರಿಯರಿಗೆ ಚುನಾವಣೆಗೆ ಸ್ಪರ್ಧಿಸದಂತೆ ಸೂಚಿಸಿ ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿದೆ.

V Somanna: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುವಂತೆ ಸಚಿವ ವಿ ಸೋಮಣ್ಣಗೆ ಬಿಜೆಪಿ ಹೈಕಮಾಂಡ್ ಸೂಚನೆ
ವಿ ಸೋಮಣ್ಣ ಮತ್ತು ಪುತ್ರ ಅರುಣ್ ಸೋಮಣ್ಣ
Rakesh Nayak Manchi
Rakesh Nayak Manchi|

Updated on: Apr 11, 2023 | 4:00 PM

Share

ಮುಖ್ಯಾಂಶಗಳು

  • ಸಚಿವ ವಿ.ಸೋಮಣ್ಣಗೂ ಶಾಕ್​ ಕೊಟ್ಟ ಬಿಜೆಪಿ ಹೈಕಮಾಂಡ್​
  • ಪುತ್ರನಿಗೆ ಟಿಕೆಟ್​ ಬೇಕಾದರೆ ರಾಜಕೀಯ ನಿವೃತ್ತಿ ಅನಿವಾರ್ಯ
  • ದೆಹಲಿ ಭೇಟಿ ವೇಳೆ ಸೋಮಣ್ಣಗೆ ವರಿಷ್ಠರಿಂದ ಖಡಕ್ ಸೂಚನೆ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Elections 2023) ಸಮೀಪಿದಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲಿ ಘಟಾನುಘಟಿ ಹಿರಿಯ ನಾಯಕರು ಚುನಾವಣಾ ರಾಜಕೀಯಕ್ಕೆ ಗುಡ್​ಬೈ ಹೇಳುತ್ತಿದ್ದಾರೆ. ಇತ್ತೀಚೆಗಷ್ಟೇ ಸಚಿವ ಸ್ಥಾನಕ್ಕಾಗಿ ಪಟ್ಟುಹಿಡಿದಿದ್ದ ಕೆಎಸ್ ಈಶ್ವರಪ್ಪ (KS Eshwarappa) ಅವರು ಅಚ್ಚರಿ ಎಂಬಂತೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೊಷಿಸಿದ್ದಾರೆ. ಇದರ ಬೆನ್ನಲ್ಲೇ ಸಚಿವ ವಿ ಸೋಮಣ್ಣ (V Somanna) ಅವರಿಗೆ ಹೈಕಮಾಂಡ್ ಶಾಕ್ ನೀಡಿದೆ. ತನ್ನ ಪುತ್ರ ಅರುಣ್​ಗೆ (Arun Somanna) ಟಿಕೆಟ್ ನೀಡಬೇಕು ಎನ್ನುತ್ತಿರುವ ಸೋಮಣ್ಣ ಅವರಿಗೆ ಹೈಕಮಾಂಡ್ ಚುನಾವಣಾ ನಿವೃತ್ತಿ ಘೊಷಿಸುವಂತೆ ಖಡಕ್ ಸೂಚಿಸಿದೆ ಎಂದು ಹೇಳಲಾಗುತ್ತಿದೆ.

ವಸತಿ ಸಚಿವರಾಗಿರುವ ವಿ.ಸೋಮಣ್ಣ ಅವರು ತನಗೆ ಹಾಗೂ ತನ್ನ ಮಗ ಅರುಣ್​ಗೂ ಟಿಕೆಟ್ ನೀಡುವಂತೆ ಪಟ್ಟುಹಿಡಿದಿದ್ದರು. ಆದರೆ ಇತ್ತೀಚೆಗೆ ಅವರು ದೆಹಲಿಗೆ ಭೇಟಿ ನೀಡಿ ಉನ್ನತ ನಾಯಕರನ್ನು ಭೇಟಿಯಾಗಿದ್ದರು. ಈ ವೇಳೆ ಚುನಾವಣೆಯಲ್ಲಿ ನೀವೇ ಸ್ಪರ್ಧಿಸಿದರೆ ಯಾವುದೇ ತೊಂದರೆ ಇಲ್ಲ. ಪುತ್ರನಿಗೆ ಟಿಕೆಟ್​ ಬೇಕಾದರೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಬೇಕು. ಒಂದೇ ಕುಟುಂಬಕ್ಕೆ ಎರಡು ಟಿಕೆಟ್ ಇಲ್ಲ ಎಂದು ಹೈಕಮಾಂಡ್ ಖಡಕ್ ಆಗಿ ಹೇಳಿದೆ ಎನ್ನಲಾಗುತ್ತಿದೆ. ಆದರೆ ಸೋಮಣ್ಣ ಅವರು ಪುತ್ರನಿಗಾಗಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದಾರಾ ಅಥವಾ ಅವರೇ ಚುನಾವಣಾಗೆ ಕಣಕ್ಕಿಳಿಯುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ಸಚಿವ ಸೋಮಣ್ಣಗೆ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್ ನೀಡದಿದ್ದರೆ ಪಕ್ಷಕ್ಕೆ ನಷ್ಟ; ಬೆಂಬಲಿಗರಿಂದ ನಳಿನ್ ಕುಮಾರ್ ಕಟೀಲ್​ಗೆ ಎಚ್ಚರಿಕೆ

ಗುಜರಾತ್ ರಾಜ್ಯ ಸಾರ್ವತ್ರಿಕ ಚುನಾವಣೆಗೆ ಪ್ರಯೋಗಿಸಿದ್ದ ಯುವ ಅಸ್ತ್ರ ಯಶಸ್ವಿಯಾದ ಹಿನ್ನೆಲೆ ಕರ್ನಾಟಕದಲ್ಲೂ ಅದೇ ಅಸ್ತ್ರವನ್ನು ಪ್ರಯೋಗಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದಂತಿದೆ. ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವಂತೆ ಸೂಚಿಸಿ ಅವರ ಸ್ಥಾನಗಳಿಗೆ ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿದೆ. ಆದರೆ ಹೊಸ ಮುಖಗಳನ್ನು ಕಣಕ್ಕಿಳಿಸುವ ಪ್ರಯತ್ನ ಎಷ್ಟರ ಮಟ್ಟಿಗೆ ಯಶ್ವಿಯಾಗುತ್ತದೆ ಎಂಬುದನ್ನು ಮೇ 13ರ ವರೆಗೆ ಕಾದುನೋಡಬೇಕಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?