AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗಾಯತ ಡ್ಯಾಂ ಒಡೆಯುವ ನಿಮ್ಮ ಹಗಲುಗನಸು ನನಸಾಗದು; ಡಿಕೆ ಶಿವಕುಮಾರ್​ಗೆ ಸಚಿವ ಸಿಸಿ ಪಾಟೀಲ ತಿರಗೇಟು

ಲಿಂಗಾಯತರ ಚಿಂತೆ ನಿಮಗೆ ಬೇಡ ಎಂದು ಕೆಪಿಸಿಸ ಅಧ್ಯಕ್ಷ ಡಿಕೆ ಶಿವಕುಮಾರ್​​ಗೆ ಸಚಿವ ಸಿಸಿ ಪಾಟೀಲರ ತಿರುಗೇಟು ನೀಡಿದ್ದಾರೆ. ಲಿಂಗಾಯತರ ವಿಚಾರಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ವಿರೋಧಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ನಮ್ಮ ನಾಡಿನಲ್ಲಿ ಲಿಂಗಾಯತರ ಡ್ಯಾಮ್ ಒಡೆಯುವ ನಿಮ್ಮ ಹಗಲು ಕನಸು ಯಾವತ್ತೂ ನನಸಾಗುವುದಿಲ್ಲ ಎಂದು ಹೇಳಿದ್ದಾರೆ.

ಲಿಂಗಾಯತ ಡ್ಯಾಂ ಒಡೆಯುವ ನಿಮ್ಮ ಹಗಲುಗನಸು ನನಸಾಗದು; ಡಿಕೆ ಶಿವಕುಮಾರ್​ಗೆ ಸಚಿವ ಸಿಸಿ ಪಾಟೀಲ ತಿರಗೇಟು
ಸಿಸಿ ಪಾಟೀಲ
ಗಣಪತಿ ಶರ್ಮಾ
|

Updated on: Apr 21, 2023 | 7:22 PM

Share

ಬೆಂಗಳೂರು: ಲಿಂಗಾಯತರ ಚಿಂತೆ ನಿಮಗೆ ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ಗೆ (DK Shivakumar) ಸಚಿವ ಸಿಸಿ ಪಾಟೀಲರ ತಿರುಗೇಟು ನೀಡಿದ್ದಾರೆ. ಲಿಂಗಾಯತರ ವಿಚಾರಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ವಿರೋಧಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಡಿಕೆ ಶಿವಕುಮಾರ್ ಅವರೇ, ನಮ್ಮ ನಾಡಿನಲ್ಲಿ ಲಿಂಗಾಯತರ ಡ್ಯಾಮ್ ಒಡೆಯುವ ನಿಮ್ಮ ಹಗಲು ಕನಸು ಯಾವತ್ತೂ ನನಸಾಗುವುದಿಲ್ಲ. ಹಿಂದೆ ನಿಮ್ಮ ಸಿದ್ದರಾಮಯ್ಯನವರ ಸರ್ಕಾರವಿದ್ದಾಗಲೂ ಲಿಂಗಾಯತ ಸಮಾಜವನ್ನು ಒಡೆದು ಆಳುವ ಕುತಂತ್ರಕ್ಕೆ ಕೈ ಹಾಕಿ ಚುನಾವಣೆಯಲ್ಲಿ ಕಾಂಗ್ರೆಸ್ ಅಣೆಕಟ್ಟೆಯೇ ಒಡೆದು ಹೋಗಿ ಒಣಗಿತ್ತು ಎಂಬುದನ್ನು ಜನ ಇನ್ನೂ ಮರೆತಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ಸಿನಿಂದ ಮುಂದೆ ಲಿಂಗಾಯತ ಸಮುದಾಯದವರೇ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಹೇಳುವ ತಾಕತ್ತು ನಿಮಗಿದೆಯೇ? ಹಿಂದೆ ಹಿರಿಯ ಮುತ್ಸದ್ದಿ ವೀರೇಂದ್ರ ಪಾಟೀಲರನ್ನು ಕಾಂಗ್ರೆಸ್ ಹೇಗೆ ಹೀನಾಯವಾಗಿ ನಡೆಸಿಕೊಂಡಿತು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ನೀವು ಏನೇ ಮಾಡಿದರೂ ಲಿಂಗಾಯತರ ಅಣೆಕಟ್ಟೆ ಸದಾ ಬಿಜೆಪಿ ಪರ ಸಮೃದ್ಧ ಅಲೆಗಳಿಂದ ತುಂಬಿರುತ್ತದೆ. ಈ ಅಣೆಕಟ್ಟೆಗೆ ಕೈ ಹಾಕುವ ನಿಮ್ಮ ವ್ಯರ್ಥ ಪ್ರಯತ್ನ ಯಾವತ್ತೂ ಯಶಸ್ವಿಯಾಗುವುದಿಲ್ಲ ಎಂಬುದನ್ನು ನೀವು ಮರೆಯಬೇಡಿ ಎಂದು ಸಿಸಿ ಪಾಟೀಲ ಹೇಳಿದ್ದಾರೆ.

ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಡಿಕೆ ಶಿವಕುಮಾರ್, ಡ್ಯಾಂ ಒಡೆದರೆ ಹರಿದು ಹೋಗುವ ನೀರನ್ನು ತಡೆ ಹಿಡಿಯಲಾಗದು. ಮತ್ತೆ ಹೊಸದಾಗಿ ಡ್ಯಾಂ ಕಟ್ಟಬೇಕಷ್ಟೆ. ಡ್ಯಾಂ ಒಡೆದು ಹರಿದುಹೋಗುವ ನೀರು ಸಮುದ್ರ ಸೇರಲೇಬೇಕು ಎಂದು ಹೇಳಿದ್ದರು. ಬಿಜೆಪಿಯ ಪ್ರಮುಖ ಲಿಂಗಾಯತ ನಾಯಕರಾದ ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಇತ್ತೀಚೆಗಷ್ಟೇ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ದೊರೆಯದ ಕಾರಣ ಉಭಯ ನಾಯಕರು ಈ ಕ್ರಮ ಕೈಗೊಂಡಿದ್ದರು. ಇನ್ನೂ ಕೆಲವು ಮಂದಿ ಬಿಜೆಪಿಯ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಸೆಳೆದಿತ್ತು. ಬಿಜೆಪಿಯನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸಲೂ ಕಾಂಗ್ರೆಸ್ ಹಲವಾರು ಟೀಕೆಗಳನ್ನು ಮಾಡಿದೆ.

ಇದನ್ನೂ ಓದಿ: ಲಿಂಗಾಯತ ಡ್ಯಾಂ ಎಷ್ಟು ಗಟ್ಟಿ ಇದೆ ಎಂಬುದು ನಿಮಗೆ ಗೊತ್ತಿಲ್ಲ; ಡಿಕೆ ಶಿವಕುಮಾರ್​ಗೆ ಸಿಎಂ ಬೊಮ್ಮಾಯಿ ತಿರುಗೇಟು

ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಖಂಡಿಸಿದ್ದು, ಡಿಕೆ ಶಿವಕುಮಾರ್ ಅವರೇ, ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂಬ ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ. 2018ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ? ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ, ನಿಮ್ಮ ಹೇಳಿಕೆನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮೇ 13ಕ್ಕೆ ಯಾರಯಾರ ಡ್ಯಾಮ್​ನಲ್ಲಿ ಎಷ್ಟು ನೀರಿದೆ ಅಂತ ಗೊತ್ತಾಗುತ್ತದೆ. ನಿಮ್ಮ ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ