AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023 ಕೋಲಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಬಗ್ಗೆ ಶ್ರೀರಾಮುಲು ಮೊದಲ ಪ್ರತಿಕ್ರಿಯೆ

2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿದಿಂದ ಸ್ಪರ್ಧಿಸಿ ಸಿದ್ದರಾಮಯ್ಯ ವಿರುದ್ಧ ಶ್ರಿರಾಮುಲು ಕೇವಲ 1696 ಮತಗಳಿಂದ ಪರಾಭವಗೊಂಡಿದ್ದರು. ಇನ್ನು ಮುಂದಿನ ಚುನಾವಣೆಯಲ್ಲಿ ಸಿದ್ದು ವಿರುದ್ಧ ಕೋಲಾರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಶ್ರೀರಾಮುಲು ಹೇಳಿದ್ದಿಷ್ಟು

Karnataka Assembly Election 2023 ಕೋಲಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಬಗ್ಗೆ  ಶ್ರೀರಾಮುಲು ಮೊದಲ ಪ್ರತಿಕ್ರಿಯೆ
ಶ್ರೀರಾಮುಲು, ಸಿದ್ದರಾಮಯ್ಯ
TV9 Web
| Edited By: |

Updated on:Jan 10, 2023 | 5:26 PM

Share

ಬಳ್ಳಾರಿ: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಇನ್ನು ಕೋಲಾರದಲ್ಲಿ(Kolar) ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆಗೆ ಸಚಿವ ಶ್ರೀರಾಮುಲು (Sriramulu) ಪರೋಕ್ಷವಾಗಿ ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: Siddaramaiah: ನಾನು ಕೋಲಾರದಿಂದ ಸ್ಪರ್ಧಿಸಲು ಸಿದ್ಧ, ಆದರೆ ಹೈಕಮಾಂಡ್ ತೀರ್ಮಾನಿಸಬೇಕು: ಸಿದ್ಧರಾಮಯ್ಯ

ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾರು ವೇಳೆ 2023ರಲ್ಲಿ ನಡೆಯುವ ಚುನಾವಣೆಯಲ್ಲೂ ಸಹ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೋಲಾರದಲ್ಲಿ ಸ್ಪರ್ಧೆ ಮಾಡುತ್ತೀರಾ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು, ಸಿದ್ದರಾಮಯ್ಯರಂತೆ ದೊಡ್ಡ ಲೀಡರ್ ನಾನಲ್ಲ. ನಾನು ನನ್ನ ಇತಿಮಿತಿಯಲ್ಲಿ ನಾನು ಯೋಚನೆ ಮಾಡುತ್ತೇನೆ. ನನ್ನ ಇತಿಮಿತಿಯಲ್ಲಿ ಎಲ್ಲಿ ನಿಲ್ಲಬೇಕೋ ಅಲ್ಲಿ ನಿಲ್ಲುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿದ್ದು ವಿರುದ್ಧ ಸ್ಪರ್ಧಿಸಲು ಹಿಂದೇಟು ಹಾಕಿದರು.

ಸಿದ್ದರಾಮಯ್ಯರಂತೆ ದೊಡ್ಡ ಲೀಡರ್ ನಾನಲ್ಲ. ಅವರು ಮಾಸ್​ ಲೀಡರ್. . ಮೊಳಕಾಲ್ಮೂರಿನ ಜನತೆ ನನ್ನನ್ನು 5 ವರ್ಷಕ್ಕೆ ಆಯ್ಕೆ ಮಾಡಿದ್ದಾರೆ. ಬಳ್ಳಾರಿ ಗ್ರಾಮಾಂತರ, ಸಂಡೂರಿನಲ್ಲೂ ನಿಲ್ಲುವಂತೆ ಒತ್ತಾಯ ಇದೆ. ಈ ಬಗ್ಗೆ ಮುಂದೆ ನೋಡೋಣ ಎಂದು ಸಿದ್ದರಾಮಯ್ಯ ಬಗ್ಗೆ ಸಾಫ್ಟ್ ಆಗಿ ಮಾತನಾಡಿದರು.

ರೆಡ್ಡಿ ಪಕ್ಷಕ್ಕೆ ಬಳ್ಳಾರಿ ಕಾರ್ಯಕರ್ತರು ವಲಸೆ ಹೋಗ್ತಿದ್ದಾರೆ ಎನ್ನುವುದಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಗಟ್ಟಿ ಇದ್ದವರು ನಮ್ಮ ಜೊತೆಗೆ ಇರುತ್ತಾರೆ. ಜೋಳ್ಳು ಇದ್ದವರು ಹೋಗುತ್ತಾರೆ. ರೆಡ್ಡಿ ಪಕ್ಷಕ್ಕೆ ಹೋಗುವವರನ್ನು ತಡೆಯೋಕೆ ಅಗುತ್ತಾ?ನಮ್ಮಿಬ್ಬರ ಫಾಲೋವರ್ ಒಬ್ಬರೇ ಇರಬಹುದು. ಅದ್ರೇ ಹೋಗುವವರನ್ನು ತಡೆಯಲು ಆಗುತ್ತಾ? ಯಾರಿಗೂ ಒತ್ತಡ ಮಾಡಲ್ಲ ಇರುವವರು ಇರಲಿ ಹೋಗುವವರು ಹೋಗಲಿ ಎಂದು ಸ್ಪಷ್ಟಪಡಿಸಿದರು.

ಕಳೆದ ಬಾರಿ ಅಂದರೆ 2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಶ್ರೀರಾಮುಲು ಅವರು ಅಖಾಡಕ್ಕಿಳಿದಿದ್ದರು. ಸಿದ್ದರಾಮಯ್ಯ ವಿರುದ್ಧ ಕೇವಲ 1696 ಮತಗಳ ಅಂತರದಿಂದ ಸೋಲು ಕಂಡಿದ್ದರು.

Published On - 4:52 pm, Tue, 10 January 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ