ಇಂದಿನ ಬಿಜೆಪಿ ನಾಯಕರ ರಾಜ್ಯ ಪ್ರವಾಸ; ಮೋದಿ, ಯೋಗಿ, ಶಾ, ಕಿಚ್ಚ ಸುದೀಪ್ ಸೇರಿ ಘಟಾನುಘಟಿ ನಾಯಕರು ಎಲ್ಲೆಲ್ಲಿ ಪ್ರಚಾರ ನಡೆಸಲಿದ್ದಾರೆ ಗೊತ್ತಾ?

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೇರಲು ಬಿಜೆಪಿ ಇನ್ನಿಲ್ಲದ ಶ್ರಮವಹಿಸಿ ಪ್ರಚಾರ ಕೈಗೊಳ್ಳುತ್ತಿದೆ. ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರಂತಹ ಕೇಂದ್ರದ ಘಟಾನುಘಟಿ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ.

ಇಂದಿನ ಬಿಜೆಪಿ ನಾಯಕರ ರಾಜ್ಯ ಪ್ರವಾಸ; ಮೋದಿ, ಯೋಗಿ, ಶಾ, ಕಿಚ್ಚ ಸುದೀಪ್ ಸೇರಿ ಘಟಾನುಘಟಿ ನಾಯಕರು ಎಲ್ಲೆಲ್ಲಿ ಪ್ರಚಾರ ನಡೆಸಲಿದ್ದಾರೆ ಗೊತ್ತಾ?
ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿ ನಾಯಕರ ಕರ್ನಾಟಕ ಪ್ರವಾಸ
Rakesh Nayak Manchi

Updated on: May 06, 2023 | 5:54 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೇರಲು ಬಿಜೆಪಿ (BJP Karnataka) ಇನ್ನಿಲ್ಲದ ಶ್ರಮವಹಿಸಿ ಪ್ರಚಾರ ಕೈಗೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah), ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರಂತಹ ಕೇಂದ್ರದ ಘಟಾನುಘಟಿ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ, ರೋಡ್ ಶೋ ನಡೆಸಲಿದ್ದಾರೆ. ಹಾಗಿದ್ದರೆ ಯಾವ ನಾಯಕರು ಯಾವ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ? ಇಲ್ಲಿದೆ ಮಾಹಿತಿ.

ಪ್ರಧಾನಿ ನರೇಂದ್ರ ಮೋದಿ: ಬೆಂಗಳೂರು, ಬಾದಾಮಿ, ಹಾವೇರಿ

ಕೇಂದ್ರ ಗೃಹ ಸಚಿವ ಅಮಿತ್ ಷಾ: ಸವದತ್ತಿ, ಅಥಣಿ, ರಾಯಬಾಗ್, ಚಿಕ್ಕೋಡಿ, ಯಮಕನಮರಡಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ: ಮದ್ದೂರು, ಚಿಂತಾಮಣಿ, ಬಾಗೇಪಲ್ಲಿ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್: ಶೃಂಗೇರಿ, ಪುತ್ತೂರು, ಕಾರ್ಕಳ, ಭಟ್ಕಳ, ಬಂಟ್ವಾಳ

ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಸರ್ಮ: ವಿರಾಜಪೇಟೆ, ಮಡಿಕೇರಿ, ಬೆಳ್ತಂಗಡಿ

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ: ಔರಾದ್, ಭಾಲ್ಕಿ, ಬಸವಕಲ್ಯಾಣ, ಹುಮ್ನಾಬಾದ್

ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್: ಹಗರಿಬೊಮ್ಮನಹಳ್ಳಿ, ಗಂಗಾವತಿ

ಸಿಎಂ ಬಸವರಾಜ ಬೊಮ್ಮಾಯಿ: ಬ್ಯಾಡಗಿ, ಹಾವೇರಿ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ: ತೀರ್ಥಹಳ್ಳಿ, ಬೈಂದೂರು, ಹೊನ್ನಾಳಿ, ಸೊರಬ

ಚಲನಚಿತ್ರ ನಟ ಸುದೀಪ್: ದೇವನಹಳ್ಳಿ, ದೊಡ್ಡಬಳ್ಳಾಪುರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಹೊಸಕೋಟೆ

ಕೇಂದ್ರ ಸಚಿವೆ ಸ್ಮೃತಿ ಇರಾನಿ: ಯಾದಗಿರಿ, ಸೇಡಂ, ಕಲ್ಬುರ್ಗಿ ಗ್ರಾಮೀಣ

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ: ಭಾಲ್ಕಿ, ಬೀದರ್

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್: ಬೀದರ್, ಚಿಂಚೋಳಿ, ಹುಕ್ಕೇರಿ, ಕುಡಚಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪುರಂದೇಸ್ವರಿ: ಹೆಬ್ಬಾಳ, ಶ್ರೀನಿವಾಸಪುರ, ಬಾಗೇಪಲ್ಲಿ

ಕೇಂದ್ರ ಸಚಿವ ಅರ್ಜುನ್ ರಾಂ ಮೇಘವಾಲ್: ಯಲಹಂಕ, ಗಾಂಧಿನಗರ, ಚಿಕ್ಕಪೇಟೆ, ಬಸವನಗುಡಿ, ದೇವನಹಳ್ಳಿ, ಬೊಮ್ಮನಹಳ್ಳಿ

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್: ಹೊಸಪೇಟೆ

ಕೇಂದ್ರ ಸಚಿವ ಕಿಶನ್ ರೆಡ್ಡಿ: ಚಾಮರಾಜಪೇಟೆ

ಕೇಂದ್ರ ಸಚಿವ ಎ.‌ ನಾರಾಯಣಸ್ವಾಮಿ: ಚಿಕ್ಕನಾಯಕನಹಳ್ಳಿ, ಗುಬ್ಬಿ, ಪಾವಗಡ

ತೆಲಂಗಾಣ ಶಾಸಕ ಈಟೇಲ ರಾಜರಂದ್ರ: ಸೇಡಂ, ಚಿಂಚೋಳಿ

ಈ ಎಲ್ಲಾ ನಾಯಕರು ನಿಗದಿಪಡಿಸಿದ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಂಡು ಬಿಜೆಪಿ ಪರ ಅಲೆ ಎಬ್ಬಿಸಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us