AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​​ಎಸ್ ಪ್ರಮುಖರ ಜೊತೆ ಬಿಜೆಪಿ ನಾಯಕರ ಸಭೆ; ಅಚ್ಚರಿ ಮೂಡಿಸಿದ ಸಚಿವ ವಿ.ಸೋಮಣ್ಣ ಉಪಸ್ಥಿತಿ

ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಸಚಿವ ವಿ. ಸೋಮಣ್ಣ ಗುರುವಾರ ಹೇಳಿದ್ದಾರೆ.

ಗಣಪತಿ ಶರ್ಮಾ
|

Updated on:Apr 06, 2023 | 10:03 PM

Share

ಮುಖ್ಯಾಂಶಗಳು

  • ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ; ಸಚಿವ ವಿ.ಸೋಮಣ್ಣ
  • ಕೇಶವಶಿಲ್ಪದಲ್ಲಿ ಆರ್​​ಎಸ್​ಎಸ್ ಪ್ರಮುಖರ ಜೊತೆ ಸಭೆ ಬಳಿಕ ಸೋಮಣ್ಣ ಹೇಳಿಕೆ
  • ಆರ್​​ಎಸ್​ಎಸ್ ಪ್ರಮುಖರ ಜತೆಗಿನ ಸಭೆಯಲ್ಲಿ ಕ್ಷೇತ್ರದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದ ಸೋಮಣ್ಣ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಸಚಿವ ವಿ. ಸೋಮಣ್ಣ ಗುರುವಾರ ಹೇಳಿದ್ದಾರೆ. ಗೋವಿಂದರಾಜನಗರ ಕ್ಷೇತ್ರದಿಂದಲೇ ಸ್ಪರ್ಧಿಸುವ ವಿಚಾರವಾಗಿ ಕೇಶವಶಿಲ್ಪದಲ್ಲಿ ಆರ್​​ಎಸ್​ಎಸ್ ಪ್ರಮುಖರ ಜೊತೆ ಚರ್ಚೆ ನಡೆದಿದೆಯೇ ಎಂಬ ಬಗ್ಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಆರ್​​ಎಸ್​ಎಸ್ ಪ್ರಮುಖರ ಜತೆಗಿನ ಸಭೆಯಲ್ಲಿ ಕ್ಷೇತ್ರದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಕರೆದಿದ್ದರಿಂದ ಮಾತನಾಡಿಕೊಂಡು ಬರಲು ಹೋಗಿದ್ದೆ ಅಷ್ಟೇ ಎಂದು ಅವರು ‘ಟಿವಿ9’ಗೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಕೇಶವಶಿಲ್ಪದಲ್ಲಿ ಆರ್​ಎಸ್​ಎಸ್ ಪ್ರಮುಖರ ಜೊತೆ ಬಿಜೆಪಿ ನಾಯಕರು ಸುಮಾರು 2 ಗಂಟೆ ಕಾಲ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಭಾಗವಹಿಸುವಂತೆ ಸೋಮಣ್ಣ ಅವರಿಗೂ ಬುಲಾವ್ ಬಂದಿತ್ತು. ಅದರಂತೆ ಅವರು ಭಾಗವಹಿಸಿದ್ದರು. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್​, ಆರ್​ಎಸ್​​ಎಸ್ ಪ್ರಮುಖರಾದ ಮುಕುಂದ್​ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಕೇಶವಶಿಲ್ಪದಲ್ಲಿ ಸಾಹಿತ್ಯ ಚರ್ಚೆ ಎಂದ ಕಟೀಲ್

ಕೇಶವಶಿಲ್ಪದಲ್ಲಿ ಆರ್​ಎಸ್​ಎಸ್ ಪ್ರಮುಖರೊಂದಿಗೆ ಯಾವುದೇ ಸಭೆ ನಡೆಸಿಲ್ಲ. ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ ಚರ್ಚೆ ಮಾಡಿದ್ದೇವೆ ಎಂದು ಸಭೆ ಬಳಿಕ ನಳಿನ್‌ ಕುಮಾರ್‌ ಕಟೀಲ್ ಹೇಳಿದ್ದಾರೆ. ಸಚಿವ ವಿ.ಸೋಮಣ್ಣ ಕ್ಷೇತ್ರದ ಬಗ್ಗೆ ನಾನು ನಿರ್ಧರಿಸಲು ಆಗಲ್ಲ ಎಂದು ಅವರು ಹೇಳಿದ್ದಾರೆ. ಬಿ.ಎಸ್.ಯಡಿಯೂರಪ್ಪ ಶುಕ್ರವಾರ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾಳೆಯೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲ್ಲ. 224 ಕ್ಷೇತ್ರಗಳಿಗೆ ತಲಾ ಮೂವರ ಹೆಸರನ್ನು ಆಯ್ಕೆ ಮಾಡಿದ್ದೇವೆ. ಪಟ್ಟಿಯನ್ನು ಪಕ್ಷದ ಕೇಂದ್ರದ ಚುನಾವಣಾ ಸಮಿತಿಗೆ ಕಳುಹಿಸಿದ್ದೇವೆ. ಬಿಜೆಪಿ ಹೈಕಮಾಂಡ್‌ ಅಭ್ಯರ್ಥಿಗಳ ಹೆಸರು ಘೋಷಿಸಲಿದೆ ಎಂದು ಕಟೀಲ್ ‘ಟಿವಿ9’ಗೆ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:45 pm, Thu, 6 April 23

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು