AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನೊಬ್ಬ ಬಜರಂಗಿ’; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರಿಂದ ಪ್ರೊಫೈಲ್ ಪಿಕ್ಚರ್ ಅಭಿಯಾನ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

‘ನಾನೊಬ್ಬ ಬಜರಂಗಿ’; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರಿಂದ ಪ್ರೊಫೈಲ್ ಪಿಕ್ಚರ್ ಅಭಿಯಾನ
ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರಿಂದ ಪ್ರೊಫೈಲ್ ಪಿಕ್ಚರ್ ಅಭಿಯಾನ
ಗಣಪತಿ ಶರ್ಮಾ
|

Updated on: May 02, 2023 | 5:59 PM

Share

ಬೆಂಗಳೂರು: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ (Bajrang Dal) ವಿರುದ್ಧ ಕ್ರಮದ ಕುರಿತು ಪ್ರಸ್ತಾವ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ (BJP) ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಡಾ. ಅಶ್ವಥ್ಥನಾರಾಯಣ, ಸಂಸದ ಪ್ರತಾಪಸಿಂಹ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಇನ್ನಿತರರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಾವಣೆ ಮಾಡಿ ‘ನಾನೊಬ್ಬ ಬಜರಂಗಿ’ ಎಂಬ ಚಿತ್ರ ಅಳವಡಿಸಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಕೂಡ ಪೋಸ್ಟ್ ಮಾಡಿದ್ದಾರೆ.

ಬಜರಂಗದಳ ನಿಷೇಧಿಸುವ ಪ್ರಶ್ನೆಯೇ ಇಲ್ಲ; ಸಿಎಂ ಬೊಮ್ಮಾಯಿ

ಈ ಮಧ್ಯೆ, ಕಾಂಗ್ರೆಸ್ ಪ್ರಣಾಳಿಕೆ ವಿಚಾರವಾಗಿ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಬಜರಂಗದಳ ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕವಾಗಿ, ಧಾರ್ಮಿಕವಾಗಿ ಕೆಲಸ ಮಾಡುವಂಥ ಸಂಘಟನೆ ಬಜರಂಗದಳ. ಆದರೆ, ಪಿಎಫ್​​ಐ ದೇಶವಿರೋಧಿ ಕೃತ್ಯಗಳನ್ನು ಎಸಗಿದೆ. ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ. ಸಾಕಷ್ಟು ಕೇಸ್​ಗಳು ಅದರ ಮೇಲಿವೆ, ಪುರಾವೆಗಳೂ ಇವೆ. ಅದಕ್ಕೆ ಭಜರಂಗದಳವನ್ನು ಹೊಲಿಸುವುದು ಸರಿಯಲ್ಲ. ಪಿಎಫ್​ಐಯನ್ನು ನಾವು ನಿಷೇಧಿಸಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: PM Modi: ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಲ್ಲ; ಬಜರಂಗದಳ ನಿಷೇಧ ಪ್ರಸ್ತಾವಕ್ಕೆ ಮೋದಿ ಟಾಂಗ್

ಸಮಾಜದಲ್ಲಿ ದ್ವೇಷ ಬಿತ್ತಿದರೆ ಬಜರಂಗದಳ, ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ ಮಾಡುವುದಾಗಿ ಕಾಂಗ್ರೆಸ್​ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹ ಟಾಂಗ್ ನೀಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಮೋದಿ, ಬಜರಂಗದಳ ನಿಷೇಧಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಕಾಂಗ್ರೆಸ್​​ನ ಈ​ ಪ್ರಣಾಳಿಕೆಯಲ್ಲಿ ಹೊಸ ತಂತ್ರ ಅಡಗಿದೆ. ಕಾಂಗ್ರೆಸ್​​ನವರಿಗೆ ಹನುಮಂತನ ಕಂಡರೂ ಆಗಿಬರುವುದಿಲ್ಲ ಎಂದು ಹೇಳಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ