AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ಬಿಜೆಪಿ ಕೇಂದ್ರ ನಾಯಕರ ಪ್ರವಾಸ: ಅಮಿತ್​ ಶಾ, ಜೆಪಿ ನಡ್ಡಾ ಇಂದು ರಾಜ್ಯಕ್ಕೆ ಆಗಮನ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಇಂದು (ಏ.21) ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

Karnataka Assembly Election 2023: ಬಿಜೆಪಿ ಕೇಂದ್ರ ನಾಯಕರ ಪ್ರವಾಸ: ಅಮಿತ್​ ಶಾ, ಜೆಪಿ ನಡ್ಡಾ ಇಂದು ರಾಜ್ಯಕ್ಕೆ ಆಗಮನ
ಅಮಿತ್​ ಶಾ, ಜೆಪಿ ನಡ್ಡಾ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 21, 2023 | 7:16 AM

Share

ಮುಖ್ಯಾಂಶಗಳು

  • ಕಳೆದ 2-3 ತಿಂಗಳಿಂದ ಬಿಜೆಪಿ ಕೇಂದ್ರ ನಾಯಕರು ಕರುನಾಡ ಪ್ರವಾಸದಲ್ಲಿದ್ದು, ಪಕ್ಷ ಸಂಘಟನೆ ಮತ್ತು ಪ್ರಚಾರದ ದೃಷ್ಟಿಯಿಂದ ರಾಜ್ಯದ ಮೂಲೆ ಮೂಲೆ ಸುತ್ತುತ್ತಿದ್ದಾರೆ.
  • ಬುಧವಾರ (ಏ.19) ರಂದು ಬಿಜೆಪಿ 40 ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಹಲವು ಹೈಕಮಾಂಡ್​​ ನಾಯಕರು ಕರ್ನಾಟಕಕ್ಕೆ ಬರಲಿದ್ದಾರೆ.
  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಇಂದು (ಏ.21) ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

ಬೆಂಗಳೂರು: ಕಳೆದ 2-3 ತಿಂಗಳಿಂದ ಬಿಜೆಪಿ (BJP) ಕೇಂದ್ರ ನಾಯಕರು ಕರುನಾಡ ಪ್ರವಾಸದಲ್ಲಿದ್ದು, ಪಕ್ಷ ಸಂಘಟನೆ ಮತ್ತು ಪ್ರಚಾರದ ದೃಷ್ಟಿಯಿಂದ ರಾಜ್ಯದ ಮೂಲೆ ಮೂಲೆ ಸುತ್ತುತ್ತಿದ್ದಾರೆ. ಬುಧವಾರ (ಏ.19) ರಂದು ಬಿಜೆಪಿ 40 ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಆದಿಯಾಗಿ ಹಲವು ಹೈಕಮಾಂಡ್​​ ನಾಯಕರು ಕರ್ನಾಟಕಕ್ಕೆ (Karmataka) ಬರಲಿದ್ದಾರೆ. ಇದರ ಭಾಗವೆಂಬಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಇಂದು (ಏ.21) ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಚುನಾವಣಾ ಚಾಣಕ್ಯ ಅಮಿತ್​ ಶಾ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರೇ, ಜಗತ್ ಪ್ರಕಾಶ್ ನಡ್ಡಾ ಬೀದರ್ ಜಿಲ್ಲೆಗೆ ಆಗಮಿಸಲಿದ್ದಾರೆ.

ಇಂದಿನ ಅಮಿತ್​ ಶಾ ರಾಜ್ಯ ಪ್ರವಾಸ ವೇಳಾಪಟ್ಟಿ

ಚುನಾವಣಾ ಚಾಣಕ್ಯ ಅಮಿತ್​ ಶಾ ಅವರು ಇಂದು ಮಧ್ಯಾಹ್ನ 3:15ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3.45ಕ್ಕೆ ದೇವನಹಳ್ಳಿಯಲ್ಲಿ ಅಮಿತ್ ಶಾ ಅವರ ರೋಡ್​ ಶೋ ನಡೆಯಲಿದೆ. ನಂತರ ಸಂಜೆ 6 ಗಂಟೆಗೆ ರೇಸ್​ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್​ಗೆ ಬರಲಿದ್ದು, ರಾತ್ರಿ 7.45ರಿಂದ 9ರವರೆಗೆ ರಾಜ್ಯ ಬಿಜೆಪಿ ನಾಯಕರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ರಾತ್ರಿ ರೇಸ್​​ಕೋರ್ಸ್​ ರಸ್ತೆಯ ಹೋಟೆಲ್​ನಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ನಾಳೆ (ಏ.22) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ದೆಹಲಿಗೆ ವಾಪಸಾಗಲಿದ್ದಾರೆ.

ಇದನ್ನೂ ಓದಿ: ಲಿಂಗಾಯತ ವಿರೋಧ ಎದುರಿಸಲು ಬಿಜೆಪಿಗೆ ಯಡಿಯೂರಪ್ಪ ಗುರಾಣಿ; ಬೆಳಗಾವಿ ಬಂಡಾಯ ತಣಿಸಿದ ಸಂತೋಷ್ ತಂತ್ರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ರಾಜ್ಯ ಪ್ರವಾಸ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಇಂದು ಮಧ್ಯಾಹ್ನ ಬೀದರ್ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಬೀದರ್ ಏರ್‌ಬೇಸ್‌ಗೆ ಆಗಮಿಸಿ, 11.45ಕ್ಕೆ ಬೀದರ್ ನಗರದ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡುತ್ತಾರೆ. ಮಧ್ಯಾಹ್ನ 1.05ಕ್ಕೆ ಔರಾದ್ ರಸ್ತೆಯ ಹೋಟೆಲ್‌ನಲ್ಲಿ ಕೀ ವೋಟರ್ಸ್, ಸೋಷಿಯಲ್ ಇನ್‌ಫ್ಲುಯೆನ್ಸ್ ವ್ಯಕ್ತಿಗಳ ಜೊತೆ ಸಭೆ ನಡೆಸಲಿದ್ದಾರೆ.

ಬಳಿಕ ಸಂಜೆ 4.10ಕ್ಕೆ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಬಿಜೆಪಿ ಪ್ರತಿನಿಧಿಗಳ ಜೊತೆ ಸಭೆ ಮಾಡಲಿದ್ದಾರೆ. ಸಂಜೆ 4.50ಕ್ಕೆ ಶಕ್ತಿಕೇಂದ್ರಗಳ ಪ್ರಮುಖರ ಜೊತೆ ಚರ್ಚೆ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಬೀದರ್‌ನ ಸಾಯಿ ಸ್ಕೂಲ್‌ನಿಂದ ಅಂಬೇಡ್ಕರ್ ಚೌಕ್‌ವರೆಗೆ ರೋಡ್ ಶೋ ನಡೆಯಲಿದೆ. ರಾತ್ರಿ 8.05ಕ್ಕೆ ಬಿಜೆಪಿ ಬೀದರ್ ಜಿಲ್ಲಾ ಸಂಘಟನಾತ್ಮಕ ಸಭೆ ಮಾಡಿದ ಬಳಿಕ ರಾತ್ರಿ 8.50ಕ್ಕೆ ಪ್ರವಾಸಿ ಕಾರ್ಯಕರ್ತರ ಜೊತೆ ಮೀಟಿಂಗ್​ ಮಾಡಲಿದ್ದಾರೆ. ರಾತ್ರಿ 9.50ಕ್ಕೆ ಬೀದರ್‌ನಿಂದ ನಿರ್ಗಮಿಸಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:14 am, Fri, 21 April 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​