AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಲ್ಲಿ ಸಕ್ರಿಯರಾದ್ರೆ ತೊಂದ್ರೆ ಕೊಡ್ತೇವೆ ಎನ್ನುವ ಸಂದೇಶ ನೀಡಲು ಅರವಿಂದ್​ ಚೌಹಾಣ್ ಮನೆ ಮೇಲೆ ಐಟಿ ದಾಳಿ: ಪ್ರಿಯಾಂಕ್ ಖರ್ಗೆ

ಅರವಿಂದ್ ಚೌಹಾಣ್ ಪ್ರತಿಕ್ರಿಯೆ ನೀಡಿದ್ದು ಬಿಜೆಪಿ ಕೀಳು ಮಟ್ಟಕ್ಕೆ ಇಳಿದು, ಐಟಿ ದಾಳಿ ನಡೆಸಿದೆ. ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿರುವುದಕ್ಕೆ ಐಟಿ ರೇಡ್ ಮಾಡಲಾಗಿದೆ. ಬಿಜೆಪಿ ಸಿದ್ಧಾಂತಗಳನ್ನು ಮಾರಿಕೊಂಡಿದೆ ಎಂದು ಆಕ್ರೋಶ ಹೊರಹಾಕಿದ್ರು.

ಕಾಂಗ್ರೆಸ್​ನಲ್ಲಿ ಸಕ್ರಿಯರಾದ್ರೆ ತೊಂದ್ರೆ ಕೊಡ್ತೇವೆ ಎನ್ನುವ ಸಂದೇಶ ನೀಡಲು ಅರವಿಂದ್​ ಚೌಹಾಣ್ ಮನೆ ಮೇಲೆ ಐಟಿ ದಾಳಿ: ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
ಆಯೇಷಾ ಬಾನು
|

Updated on: May 07, 2023 | 11:23 AM

Share

ಕಲಬುರಗಿ: ಕಾಂಗ್ರೆಸ್​ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಬೆಂಬಲಿಗ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್​ ಚೌಹಾಣ್​ ಮನೆ, ಹೋಟೆಲ್, ಕ್ರಷರ್ ಮೇಲೆ ಐಟಿ ಅಧಿಕಾರಿಗಳು ದಾಳಿ (IT Raid) ಮಾಡಿ ಪರಿಶೀಲನೆ ನಡೆಸುತ್ತಿದ್ದು ಈ ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್​ನಲ್ಲಿ ಸಕ್ರಿಯರಾಗಿಬಿಟ್ರೆ ತೊಂದರೆ ಕೊಡ್ತೇವೆ ಅನ್ನೋ ಸಂದೇಶ ನೀಡಲು ಅರವಿಂದ್​ ಚೌಹಾಣ್ ಮನೆ ಮೇಲೆ ಐಟಿ ದಾಳಿ ನಡೆದಿದೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

ಇನ್ನು ಅರವಿಂದ್ ಚೌಹಾಣ್ ಪ್ರತಿಕ್ರಿಯೆ ನೀಡಿದ್ದು ಬಿಜೆಪಿ ಕೀಳು ಮಟ್ಟಕ್ಕೆ ಇಳಿದು, ಐಟಿ ದಾಳಿ ನಡೆಸಿದೆ. ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿರುವುದಕ್ಕೆ ಐಟಿ ರೇಡ್ ಮಾಡಲಾಗಿದೆ. ಬಿಜೆಪಿ ಸಿದ್ಧಾಂತಗಳನ್ನು ಮಾರಿಕೊಂಡಿದೆ ಎಂದು ಆಕ್ರೋಶ ಹೊರಹಾಕಿದ್ರು. ಕಲಬುರಗಿ ನಗರದಲ್ಲಿ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಕೂಡ ಘಟನೆ ಸಂಬಂಧ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಚುನಾವಣೆ ಸೋಲ್ತಾರೆ. ಸೋಲುವ ಭಯ ಆರಂಭವಾದಾಗ ಸರ್ಕಾರಿ ಏಜನ್ಸಿಗಳನ್ನು ಬಳಕೆ ಮಾಡ್ತಾರೆ. ಕಲಬುರಗಿ ಜಿಲ್ಲೆಯಲ್ಲಿ ಕೂಡಾ ಐಟಿ ಅಸ್ತ್ರ ಬಳಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರು, ಕಾರ್ಯಕರ್ತರ ಮನೆ ಮೇಲೆ ಐಟಿ ದಾಳಿ ನಡೆದಿದೆ. ವಾಹೀದ್ ಅಲಿ, ಮಹಮ್ಮದ್ ಜಾಗೀರದಾರ್, ಅರವಿಂದ್ ಚೌಹಾಣ್ ಮನೆ ಮೇಲೆ ಐಟಿ ದಾಳಿ ನಡೆದಿದೆ ಎಂದು ಬಿಜೆಪಿ ವಿರುದ್ಧ ಗರಂ ಆದ್ರು.

ಇದನ್ನೂ ಓದಿ: IT Raid: ಹಾವೇರಿ, ಕಲಬುರಗಿ ಜಿಲ್ಲೆಯ ಕಾಂಗ್ರೆಸ್​ ಮುಖಂಡರ ಮನೆ ಮೇಲೆ ಐಟಿ ದಾಳಿ

ಕಳೆದ ಹತ್ತು ವರ್ಷದಲ್ಲಿ ಶೇಕಡ 95 ರಷ್ಟು ದಾಳಿ ನಡೆದಿದ್ದು ವಿರೋಧ ಪಕ್ಷದವರ ಮನೆ ಮೇಲೆ. ವಿರೋಧ ಪಕ್ಷದಲ್ಲಿದ್ದರೆ ಕಳ್ಳರು, ತಮ್ಮ ಪಕ್ಷಕ್ಕೆ ಸೇರಿದ್ರೆ ದೇಶಭಕ್ತರು. ಅರವಿಂದ್ ಚೌಹಾಣ್ ಕಾಂಗ್ರೆಸ್ ಸೇರಿ ಕೇವಲ ಎರಡು ವಾರವಾಯ್ತು. ಎರಡೇ ವಾರಕ್ಕೆ ಅರವಿಂದ್ ಚೌಹಾಣ್ ತೆರಿಗೆ ವಂಚಿಸಿ ಬಿಟ್ರಾ? ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿಬಿಟ್ರೆ ತೊಂದರೆ ಕೊಡ್ತೇವೆ ಅನ್ನೋ ಸಂದೇಶ ಕಳುಹಿಸಿದ್ದಾರೆ. ಅರವಿಂದ್ ಚೌಹಾನ್ ಗೆ ಬಿಜೆಪಿಯವರು ಸಂದೇಶ ಕಳುಹಿಸಿದ್ದಾರೆ. ಈ ರೀತಿಯ ತಂತ್ರಕ್ಕೆ ನಾವು ಬಗ್ಗಲ್ಲಾ, ಅಂಜಲ್ಲಾ. ನರೇಂದ್ರ ಮೋದಿ ಮತ್ತು ಅಮಿತ್ ಶಾಗೆ ಕಾಲು ಬಿದ್ದಿದ್ದಾರೆ. ರಾಜ್ಯದಲ್ಲಿ ನಮ್ಮನ್ನು ಗೆಲ್ಲಿಸಿಕೊಡಿ ಅಂತ ಬಿಜೆಪಿ ನಾಯಕರು ಕಾಲಿಗೆ ಬಿದ್ದಿದ್ದಾರೆ ಎಂದರು.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ