AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣಾ ಅಖಾಡಕ್ಕಿಳಿದ ಬಿಜೆಪಿ ಘಟಾನುಘಟಿಗಳು, ಠಕ್ಕರ್ ನೀಡಲು ಇಂದು ತವರಿನತ್ತ ಹೊರಟ ಸಿದ್ದರಾಮಯ್ಯ

ವರುಣಾದಲ್ಲಿ ಪ್ರಚಾರ ಮಾಡಲ್ಲ ಎಂದಿದ್ದ ಸಿದ್ದರಾಮಯ್ಯ ಅವರಿಗೆ ಈಗ ಬಿಜೆಪಿ ರಣತಂತ್ರದಿಂದ ಟೆನ್ಷನ್​ ಶುರುವಾಗಿದ್ದು ಇಂದು (ಏ.22) ತವರು ಕ್ಷೇತ್ರ ವರುಣಾಗೆ ಭೇಟಿ ನೀಡಲಿದ್ದಾರೆ.

ವರುಣಾ ಅಖಾಡಕ್ಕಿಳಿದ ಬಿಜೆಪಿ ಘಟಾನುಘಟಿಗಳು, ಠಕ್ಕರ್ ನೀಡಲು ಇಂದು ತವರಿನತ್ತ ಹೊರಟ ಸಿದ್ದರಾಮಯ್ಯ
ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on: Apr 22, 2023 | 8:38 AM

Share

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Election 2023) ವೇಗೋತ್ಕರ್ಷ ದೊರೆಯುತ್ತಿದ್ದಂತೆ ಕ್ಷೇತ್ರಗಳ ಆಯ್ಕೆ ಜೋರಾಗಿ ಸದ್ದು ಮಾಡಿತ್ತು. ಈ ವೇಳೆ ಅತಿ ಹೆಚ್ಚು ಚರ್ಚೆಯಾಗಿದ್ದು, ವಿಪಕ್ಷನಾಯಕ ಸಿದ್ದರಾಮಯ್ಯ (Siddramaiah) ಅವರ ಕ್ಷೇತ್ರ. ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿತ್ತು. ಮೊದಲು ಕೋಲಾರದತ್ತ (Kolar) ಮುಖ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್​ (Congress) ಹೈಕಮಾಂಡ್​​ ಕೆಂಪು ಬಾವುಟ ತೋರಿಸಿತ್ತು. ನಂತರ ವರುಣಾದಲ್ಲಿ (Varuna) ಸ್ಪರ್ಧಿಸುವುದು ಫಿಕ್ಸ್​ ಆಯಿತು. ಇನ್ನು ಸಿದ್ದರಾಮಯ್ಯ ಅವರು ವರುಣಾದಲ್ಲಿ ಸ್ಪರ್ಧಿಸುವುದು ಪಕ್ಕಾ ಆದಮೇಲೆ ವಿರೋಧಿಗಳು ವರುಣಾದಲ್ಲಿ ಅವರನ್ನು ಈ ಬಾರಿ ಸೋಲಿಸಲು ತಂತ್ರ-ಪ್ರತಿತಂತ್ರವನ್ನು ಹೆಣೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ವರುಣಾದಲ್ಲೇ ಕಟ್ಟಿ ಹಾಕಲು ಬಿಜೆಪಿ (BJP) ಮಾಸ್ಟರ್​ ಪ್ಲಾನ್​ ಮಾಡುತ್ತಿದ್ದು, ವಿ.ಸೋಮಣ್ಣ ಅವರನ್ನು ಪ್ರತಿಸ್ಪರ್ಧಿಯಾಗಿಸಿದೆ. ಅಲ್ಲದೇ ರಾಜ್ಯ ಬಿಜೆಪಿ ಘಟಕ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ (BY Vijayendra) ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್​​ ಸಂತೋಷ್​​ (BL Santosh) ಅವರನ್ನು ಕಣಕ್ಕೆ ಇಳಿಸಿದೆ. ಬಿವೈ ವಿಜಯೇಂದ್ರ ವರುಣಾ ಕಣದೊಳಗೆ ಧುಮುಕಿ ಆರ್ಭಟಿಸುತ್ತಿದ್ದರೇ, ಕಣದಿಂದ ಹೊರನಿಂತು ಬಿಎಲ್​ ಸಂತೋಷ್​ ಯೋಜನೆ ರೂಪಿಸುತ್ತಿದ್ದಾರೆ. ವರುಣಾದಲ್ಲಿ ಪ್ರಚಾರ ಮಾಡಲ್ಲ ಎಂದಿದ್ದ ಸಿದ್ದರಾಮಯ್ಯ ಅವರಿಗೆ ಈಗ ಟೆನ್ಷನ್​ ಶುರುವಾಗಿದ್ದು ಇಂದು (ಏ.22) ತವರು ಕ್ಷೇತ್ರ ವರುಣಾಗೆ ಭೇಟಿ ನೀಡಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾದಲ್ಲಿ ಪ್ರಚಾರ ಮಾಡಲ್ಲ ಎಂದಿದ್ದರು. ನಂತರ ಒಂದು ದಿನ ಪ್ರವಾಸ ಮಾಡುವುದಾಗಿ ಹೇಳಿದ್ದರು. ತದನಂತರ ಎರಡು ದಿನ ಪ್ರವಾಸ ಮಾಡುವ ಹೇಳಿದ್ದರು. ಈ ವೇಳೆ ಕೇವಲ ನಾಲ್ಕು ಗ್ರಾಮದಲ್ಲಿ ಮಾತ್ರ ಪ್ರಚಾರ ಸಭೆ ನಡೆಸುವುದಾಗಿ ತಿಳಿಸಿದ್ದರು. ಇದೀಗ ನಾಮಪತ್ರ ಸಲ್ಲಿಸಿದ ಮೂರೇ ದಿನಕ್ಕೆ ವರುಣದತ್ತ ದೌಡಾಯಿಸುತ್ತಿರುವ ಅವರು ಬರೊಬ್ಬರಿ 18 ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ: ವರುಣಾ ಕ್ಷೇತ್ರ ಚಿತ್ರಣ; ಸಿದ್ದರಾಮಯ್ಯ ಅದೃಷ್ಟದ ಕ್ಷೇತ್ರ, ಸೋಮಣ್ಣಗೆ ಲಿಂಗಾಯತರ ಬಲ

ಬೆಳಗ್ಗೆ 10.30ಕ್ಕೆ ಹೆಲಿಕಾಪ್ಟರ್​ನಲ್ಲಿ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸುತ್ತಾರೆ. 11 ಗಂಟೆಯಿಂದ ವರುಣಾ ಕ್ಷೇತ್ರದಲ್ಲಿ ಮತಯಾಚನೆ ಆರಂಭಿಸುತ್ತಾರೆ. 11:00 ಗಂಟೆಗೆ ಕಾರ್ಯ ಗ್ರಾಮ, 12:00 ಗಂಟೆಗೆ ಕಾರೇಪುರ ಗ್ರಾಮ, 12:30ಕ್ಕೆ ಹಾಡ್ಯ, 1:00 ಗಂಟೆಗೆ ಬಾಣೂರು, 1:30ಕ್ಕೆ ಚಿನ್ನಂಬಳ್ಳಿ, 2:00 ಗಂಟೆಗೆ ತಗಡೂರು, 2:30ಕ್ಕೆ ವರಹಳ್ಳಿ, 3:00 ಗಂಟೆಗೆ ಚುಂಚನಹಳ್ಳಿ, 3:30ಕ್ಕೆ ಹನುಮನಪುರ, 4:00ಗಂಟೆಗೆ ದಾಸನೂರು, 4:30ಕ್ಕೆ ಕಾರೆಮೋಳೆ, 5:00ಗಂಟೆಗೆ ತೊರವಳ್ಳಿ, 5:30ಕ್ಕೆ ತೊರವಳ್ಳಿ ಮೋಳೆ ಮತ್ತು ಚಿಕ್ಕಹೊಮ್ಮಾದ ಮೋಳೆ, 6:00ಗಂಟೆಗೆ ಅಂಕುಶರಾಯನ ಪುರ, 6:30ಕ್ಕೆ ಚಿಕ್ಕಹೊಮ್ಮ ಮತ್ತು ದೊಡ್ಡಹೊಮ್ಮ, 7:00ಗಂಟೆಗೆ ಅವತಾಳಪುರ ಗ್ರಾಮಗಳಲ್ಲಿ ಪ್ರಚಾರ ಮಾಡಲಿದ್ದಾರೆ. ಬಳಿಕ ಪ್ರಚಾರ ಮುಗಿಸಿ ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವರುಣಾ ಕ್ಷೇತ್ರದ ಪ್ರಚಾರದ ನಿರ್ವಹಣೆ ಮತ್ತು ಕಾರ್ಯಕರ್ತರೊಂದಿಗೆ ನಿಕಟವಾಗಿ ಕೆಲಸ ಮಾಡಲು ಕೇಂದ್ರ ವೀಕ್ಷಕರಾಗಿ ತಮ್ಮ ಆಪ್ತ ದಿಲೀಪ್ ಕುಮಾರ್ ಜೈಸ್ವಾಲ್ ಅವರನ್ನು ನಿಯೋಜಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದ ಬೇರೆ ಸ್ಥಳಗಳಲ್ಲಿ ಪ್ರಚಾರ ಮಾಡದಂತೆ ವರುಣಾ ಕ್ಷೇತ್ರದಲ್ಲಿ ಮಾತ್ರವೇ ಪ್ರಚಾರದಲ್ಲಿ ತೊಡಗಿಕೊಳ್ಳುವಂತೆ ಸಿದ್ದರಾಮಯ್ಯ ಅವರನ್ನು ಬ್ಯುಸಿಯಾಗಿರುವಂತೆ ಮಾಡಲು ಸೋಮಣ್ಣ ಮತ್ತು ಅವರ ತಂಡಕ್ಕೆ ಅಮಿತ್ ಶಾ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​