AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಹಾಸನ ಕ್ಷೇತ್ರದ ಟಿಕೆಟ್​ ತಪ್ಪುವ ಭೀತಿ: ಆತಂಕದ ಜೊತೆ ಅಚ್ಚರಿ ಹೇಳಿಕೆ ಕೊಟ್ಟ ಪ್ರೀತಂಗೌಡ

ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಅವರು ಮುಂಬರುವ ವಿಧಾನಸಭೆ ಚುನಾವಣೆ ಟಿಕೆಟ್ ಕೈತಪ್ಪು ಭೀತಿಯಲ್ಲಿದ್ದಾರೆ. ಈ ಬಗ್ಗೆ ಅವರೇ ಬಹಿರಂಗವಾಗಿ ಟಿಕೆಟ್​ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಬಾರಿ ಹಾಸನ ಕ್ಷೇತ್ರದ ಟಿಕೆಟ್​ ತಪ್ಪುವ ಭೀತಿ: ಆತಂಕದ ಜೊತೆ ಅಚ್ಚರಿ ಹೇಳಿಕೆ ಕೊಟ್ಟ ಪ್ರೀತಂಗೌಡ
ಪ್ರೀತಂಗೌಡ,
TV9 Web
| Edited By: |

Updated on:Jan 17, 2023 | 3:36 PM

Share

ಹಾಸನ: ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Election 2023) ಇನ್ನೇನು ಕೆಲವೇ ತಿಂಗಳು ಬಾಕಿ ಇದ್ದು, ಆಗಲೇ ನಾಯಕರು ಕ್ಷೇತ್ರದಲ್ಲಿ ಬೀಡುಬಿಟ್ಟು ಮುಂದಿನ ಚುನಾವಣೆಗೆ ಭರ್ಜರಿ ಸಿದ್ಧತೆ ಕೈಗೊಂಡಿದ್ದಾರೆ. ಇದರ ಮಧ್ಯೆ ಹಾಸನ(Hassan) ಜಿಲ್ಲೆಯಲ್ಲಿ  ಕೇಸರಿ ಬಾವುಟ ಹಾರಿಸಿರುವ ಏಕೈಕ ಶಾಸಕ ಪ್ರೀತಂಗೌಡ(preetam gowda) ಅವರಿಗೆ 2023ರ ಚುನಾವಣೆಯ ಟಿಕೆಟ್ ಕೈತಪ್ಪುವ ಭೀತಿ ಶುರುವಾಗಿದೆ. ಈ ಬಗ್ಗೆ ಸ್ವತಃ ಅವರೇ ಪ್ರತಿಕ್ರಿಯಿಸಿ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ. ಹಾಸನದಲ್ಲಿ ಇಂದು(ಜನವರಿ 17) ಮಾತನಾಡಿರುವ ಪ್ರೀತಂಗೌಡ, ಆಪ್​, ಕಾಂಗ್ರೆಸ್, ಜನತಾದಳದವರೆಲ್ಲರೂ ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. ನಮ್ಮ ಪಕ್ಷದಿಂದ ಹಾಸನ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಪ್ರಕಟ ಮಾಡಿಲ್ಲ. ಆದರೆ ಬಿಜೆಪಿಯಿಂದ ಇನ್ಯಾರಿಗೋ ಟಿಕೆಟ್ ಕೊಡುತ್ತಾರೆ. ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಎನ್ನುವುದನ್ನು ಕಾದುನೋಡಬೇಕಿದೆ ಎಂದು ಆತಂಕದ ಜೊತೆ ಅಚ್ಚರಿ ಹೇಳಿಕೆ ನೀಡಿದ್ದು ಬಾರೀ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Karnataka Politics: ಯಡಿಯೂರಪ್ಪ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯೇಕ ಮಾತುಕತೆ; ಕರ್ನಾಟಕದ ಬಿಜೆಪಿ ಪ್ಲಾನ್ ಬಗ್ಗೆ ಗರಿಗೆದರಿದ ನಿರೀಕ್ಷೆ

ಹಾಸನ ಕ್ಷೇತ್ರದ್ದು 196 ಕೋಡ್ ನಂಬರ್. 196ಕ್ಕೆ ಯಾವ ಪಕ್ಷದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ಆ ಪಕ್ಷಕ್ಕೆ ಬಿಟ್ಟ ವಿಚಾರ. ನಮ್ಮ ಪಕ್ಷದಿಂದ ಇನ್ನೂ ಅಭ್ಯರ್ಥಿ ಹೆಸರು ಪ್ರಕಟ ಮಾಡಿಲ್ಲ. ಈಗ ನಾನು ಹಾಲಿ ಶಾಸಕನಿದ್ದೇನೆ. ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತೆ ಆ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಆಮ್ ಆದ್ಮಿ, ಕಾಂಗ್ರೆಸ್, ಜನತಾದಳವರು, ಅದಲ್ಲದೇ ಎಸ್‌ಡಿಪಿಐ, ಬಿಎಸ್‌ಪಿ ಅವರು ಇದ್ದಾರೆ. ಎಲ್ಲರೂ ಓಡಾಟ ಮಾಡ್ತಿದ್ದಾರೆ. ಬಿಜೆಪಿಯಿಂದ ಇನ್ಯಾರಿಗೆ ಟಿಕೆಟ್ ಕೊಡುತ್ತಾರೆ ಎನ್ನುವುದನ್ನು ನಮ್ಮ‌ ಚುನಾವಣೆ ನಿರ್ವಹಣಾ ಸಮಿತಿ ದೆಹಲಿಯಲ್ಲಿ ತೀರ್ಮಾನ ಮಾಡುತ್ತೆ ಎಂದು ಅಚ್ಚರಿ ಹೇಳಿಕೆ ನೀಡಿದರು. ಈ ಮೂಲಕ ಹಾಸನ ಕ್ಷೇತ್ರದ ಟಿಕೇಟ್ ಯಾರಿಗೆ ಸಿಗುತ್ತೋ ಏನೋ ಎಂಬ ಅನುಮಾನ ವ್ಯಕ್ತಪಡಿಸಿದರು.

ಅಚ್ಚರಿಗೆ ಕಾರಣವಾಯ್ತು ಪ್ರೀತಂಗೌಡ ಹೇಳಿಕೆ

2018ರಲ್ಲಿ ಹಾಸನದಲ್ಲಿ ಗೆದ್ದು ಜೆಡಿಎಸ್ ಭದ್ರಕೋಟೆಯನ್ನೇ ಭೇದಿಸಿದ ಶಾಸಕ ಪ್ರೀತಂಗೌಡ, ಪ್ರತಿ ಹಂತದಲ್ಲೂ ಜೆಡಿಎಸ್​ಗೆ ತಿರುಗೇಟು ನೀಡುತ್ತಲ್ಲೇ ಹಾಸನ ಕ್ಷೇತ್ರದಲ್ಲಿ ರಾಜಕೀಯ ನೆಲೆ ಭದ್ರಪಡಿಸಿಕೊಳ್ಳುತ್ತಾ ಬಂದಿದ್ದಾರೆ. ಆದ್ರೆ, ಪ್ರೀತಂಗೌಡ ಅವರು ಮುಂದಿನ ಚುನಾವಣೆ ಟಿಕೆಟ್​ ಕೈತಪ್ಪು ಆತಂಕ ವ್ಯಕ್ತಪಡಿಸಿದ್ದು ಮಾತ್ರ ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ: ದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಬಗ್ಗೆ ಮಹತ್ವದ ಚರ್ಚೆ

ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿದ್ದ ಜಿಲ್ಲೆಯಲ್ಲಿ ಕಮಲದ ಬಾವುಟ ಹಾರಿಸಿ ಹಾಸನ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು ಪ್ರೀತಂ ಜೆ. ಗೌಡ ಒಬ್ಬರೆ. ಪ್ರೀತಂಗೌಡ ರಾಜಕೀಯ ಚಾಣಕ್ಷ್ಯ ನಡೆಯಿಂದ ಹಾಸನ ಹಾಸನದ ನಗರಸಭೆ ಐತಿಹಾಸಿಕ ಎಂಬಂತೆ ಬಿಜೆಪಿ ಪಾಲಾಗಿದೆ. ಹೀಗೆ ಹಾಸನದಲ್ಲಿ ದಳಪತಿಗಳಿಗೆ ಟಕ್ಕರ್ ನೀಡುತ್ತಲೇ ಹಂತ-ಹಂತವಗಿ ಜೆಡಿಎಸ್ ಭದ್ರಕೋಟೆಯನ್ನು ಕೆಡವುತ್ತಿದ್ದಾರೆ. ಇಷ್ಟೆಲ್ಲಾ ಮಾಡಿದ್ರೂ ಪ್ರೀತಂಗೌಡ ಅವರಿಗೆ ಟಿಕೆಟ್ ಕೈತಪ್ಪುವ ಭೀತಿ ಶುರುವಾಗಿದ್ಯಾ? ಪ್ರೀತಂ ಗೌಡ ಅವರೇ ಟಿಕೆಟ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ಯಾಕೆ? ಪ್ರೀತಂಗೌಡ ಬಿಟ್ಟು ಹಾಸನದಲ್ಲಿ ಇನ್ಯಾರು ಇದ್ದಾರೆ? ಹೀಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:17 pm, Tue, 17 January 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?