AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೆ ಬಿಜೆಪಿ ಸರ್ಕಾರ ನೀಡಿದ ಮೀಸಲಾತಿಗೆ ಕಂಟಕ: ಪ್ರತಾಪ್ ಸಿಂಹ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಎಲಚಿಗೆರೆ ಬೋರೆಯಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಸಿಗುವ ಗ್ಯಾರಂಟಿ ಲಾಡೆನ್ ಮುಲ್ಲಾ ನೇತೃತ್ವದ ಸರ್ಕಾರ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೆ ಬಿಜೆಪಿ ಸರ್ಕಾರ ನೀಡಿದ ಮೀಸಲಾತಿಗೆ ಕಂಟಕ: ಪ್ರತಾಪ್ ಸಿಂಹ
ಪ್ರತಾಪ್ ಸಿಂಹ ಮತ್ತು ಸಿದ್ದರಾಮಯ್ಯ
Rakesh Nayak Manchi
Rakesh Nayak Manchi|

Updated on: May 07, 2023 | 7:00 PM

Share

ಮೈಸೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಸಿಗುವ ಗ್ಯಾರಂಟಿ ಲಾಡೆನ್ ಮುಲ್ಲಾ ನೇತೃತ್ವದ ಸರ್ಕಾರ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದರು. ಜಿಲ್ಲೆಯ ನಂಜನಗೂಡು ತಾಲೂಕಿನ ಎಲಚಿಗೆರೆ ಬೋರೆಯಲ್ಲಿ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಸರಿ ಧ್ವಜ ನೋಡಿದರೆ ಸುರಕ್ಷಿತಭಾವ ಬರುತ್ತದೆ. ಆದರೆ ಸಿದ್ದರಾಮಯ್ಯ ಕೇಸರಿ ಟೋಪಿ ಹಾಕಿದರೆ ಕಿತ್ತು ಹಾಕುತ್ತಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಶಿವನ ಬೆಟ್ಟವನ್ನು ಏಸುಬೆಟ್ಟ ಮಾಡಲು ಹೊರಟಿದ್ದರು ಎಂದು ಕಿಡಿಕಾರಿದರು.

ಎಲಚಿಗೆರೆ ಬೋರೆ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ವಿವಿಧ ಸಮುದಾಯಗಳಿಗೆ ನೀಡಿದ ಮೀಸಲಾತಿಗೆ ಕಂಟಕ ಬರಲಿದೆ. ಹಿಂದೂಗಳ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ಕೊಡುತ್ತಾರೆ. ಸಿದ್ದರಾಮಯ್ಯ ಲಿಂಗಾಯತ ಸಮುದಾಯವರು ಭ್ರಷ್ಟರು ಅಂತ ಹೇಳುತ್ತಾರೆ. ಸಿದ್ದರಾಮಯ್ಯ ಕ್ಷಮೆ ಕೇಳಿದ್ದು ಬೆಕ್ಕು ಸನ್ಯಾಸ ಸ್ವೀಕರಿಸಿದಂತೆ ಎಂದರು.

ಇದನ್ನೂ ಓದಿ: ಅಪ್ಪು ಹೆಸರಲ್ಲಿ ಆಸ್ಪತ್ರೆ ಕಟ್ಟಿದ್ದು ಸೋಮಣ್ಣ, ಆದರೆ ಶಿವಣ್ಣ ಸಿದ್ದರಾಮಯ್ಯ ಪರ ಪ್ರಚಾರ ಮಾಡ್ತಿದಾರೆ! ಪ್ರತಾಪ್ ಸಿಂಹ ಪ್ರಹಾರ

ಸಿದ್ದರಾಮಯ್ಯ ಅವರ ವರುಣಾದಲ್ಲಿನ ಸೋಲು ಗೆಲುವಿನ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ಯಾವುದೇ ಪ್ರಬಲ ಅಭ್ಯರ್ಥಿ ವಿರುದ್ಧ ಸಿದ್ದರಾಮಯ್ಯ ಗೆದ್ದಿಲ್ಲ. ಸಿದ್ದರಾಮಯ್ಯ ಪರ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಮತಯಾಚನೆಗೆ ಬರಲಿಲ್ಲ. ಯಾಕೆಂದರೆ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದರೆ ಕಾಂಗ್ರೆಸ್ ಮುಗಿಸುತ್ತಾರೆ ಅಂತಾ ಅವರಿಗೆ ಗೊತ್ತಿದೆ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ