AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೆ ಬಿಜೆಪಿ ಸರ್ಕಾರ ನೀಡಿದ ಮೀಸಲಾತಿಗೆ ಕಂಟಕ: ಪ್ರತಾಪ್ ಸಿಂಹ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಎಲಚಿಗೆರೆ ಬೋರೆಯಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಸಿಗುವ ಗ್ಯಾರಂಟಿ ಲಾಡೆನ್ ಮುಲ್ಲಾ ನೇತೃತ್ವದ ಸರ್ಕಾರ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೆ ಬಿಜೆಪಿ ಸರ್ಕಾರ ನೀಡಿದ ಮೀಸಲಾತಿಗೆ ಕಂಟಕ: ಪ್ರತಾಪ್ ಸಿಂಹ
ಪ್ರತಾಪ್ ಸಿಂಹ ಮತ್ತು ಸಿದ್ದರಾಮಯ್ಯ
Rakesh Nayak Manchi
|

Updated on: May 07, 2023 | 7:00 PM

Share

ಮೈಸೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಸಿಗುವ ಗ್ಯಾರಂಟಿ ಲಾಡೆನ್ ಮುಲ್ಲಾ ನೇತೃತ್ವದ ಸರ್ಕಾರ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದರು. ಜಿಲ್ಲೆಯ ನಂಜನಗೂಡು ತಾಲೂಕಿನ ಎಲಚಿಗೆರೆ ಬೋರೆಯಲ್ಲಿ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಸರಿ ಧ್ವಜ ನೋಡಿದರೆ ಸುರಕ್ಷಿತಭಾವ ಬರುತ್ತದೆ. ಆದರೆ ಸಿದ್ದರಾಮಯ್ಯ ಕೇಸರಿ ಟೋಪಿ ಹಾಕಿದರೆ ಕಿತ್ತು ಹಾಕುತ್ತಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಶಿವನ ಬೆಟ್ಟವನ್ನು ಏಸುಬೆಟ್ಟ ಮಾಡಲು ಹೊರಟಿದ್ದರು ಎಂದು ಕಿಡಿಕಾರಿದರು.

ಎಲಚಿಗೆರೆ ಬೋರೆ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರ ವಿವಿಧ ಸಮುದಾಯಗಳಿಗೆ ನೀಡಿದ ಮೀಸಲಾತಿಗೆ ಕಂಟಕ ಬರಲಿದೆ. ಹಿಂದೂಗಳ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ಕೊಡುತ್ತಾರೆ. ಸಿದ್ದರಾಮಯ್ಯ ಲಿಂಗಾಯತ ಸಮುದಾಯವರು ಭ್ರಷ್ಟರು ಅಂತ ಹೇಳುತ್ತಾರೆ. ಸಿದ್ದರಾಮಯ್ಯ ಕ್ಷಮೆ ಕೇಳಿದ್ದು ಬೆಕ್ಕು ಸನ್ಯಾಸ ಸ್ವೀಕರಿಸಿದಂತೆ ಎಂದರು.

ಇದನ್ನೂ ಓದಿ: ಅಪ್ಪು ಹೆಸರಲ್ಲಿ ಆಸ್ಪತ್ರೆ ಕಟ್ಟಿದ್ದು ಸೋಮಣ್ಣ, ಆದರೆ ಶಿವಣ್ಣ ಸಿದ್ದರಾಮಯ್ಯ ಪರ ಪ್ರಚಾರ ಮಾಡ್ತಿದಾರೆ! ಪ್ರತಾಪ್ ಸಿಂಹ ಪ್ರಹಾರ

ಸಿದ್ದರಾಮಯ್ಯ ಅವರ ವರುಣಾದಲ್ಲಿನ ಸೋಲು ಗೆಲುವಿನ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ಯಾವುದೇ ಪ್ರಬಲ ಅಭ್ಯರ್ಥಿ ವಿರುದ್ಧ ಸಿದ್ದರಾಮಯ್ಯ ಗೆದ್ದಿಲ್ಲ. ಸಿದ್ದರಾಮಯ್ಯ ಪರ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಮತಯಾಚನೆಗೆ ಬರಲಿಲ್ಲ. ಯಾಕೆಂದರೆ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದರೆ ಕಾಂಗ್ರೆಸ್ ಮುಗಿಸುತ್ತಾರೆ ಅಂತಾ ಅವರಿಗೆ ಗೊತ್ತಿದೆ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ