AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಮತ್ತೆ ಬದಲಾವಣೆ: ಇಲ್ಲಿದೆ ಹೊಸ ರೂಟ್ ಮ್ಯಾಪ್​

ನೀಟ್ ಪರೀಕ್ಷೆ ಕಾರಣ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಪ್ಲ್ಯಾನ್‌ನಲ್ಲಿ ಸ್ವಲ್ಪ ಬದಲಾವಣೆಯಾಗಿದೆ. ಭಾನುವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಶನಿವಾರಕ್ಕೆ ನಿಗದಿ ಮಾಡಲಾಗಿದೆ. ಹಾಗಾದ್ರೆ ಮೋದಿ ರೋಡ್ ಶೋ ಎಲ್ಲೆಲ್ಲಿ ಸಾಗಲಿದೆ ಎನ್ನುವ ಹೊಸ ರೂಟ್ ಮ್ಯಾಪ್ ಇಲ್ಲಿದೆ ನೋಡಿ.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಮತ್ತೆ ಬದಲಾವಣೆ: ಇಲ್ಲಿದೆ ಹೊಸ ರೂಟ್ ಮ್ಯಾಪ್​
ನರೇಂದ್ರ ಮೋದಿ
ರಮೇಶ್ ಬಿ. ಜವಳಗೇರಾ
| Updated By: ಆಯೇಷಾ ಬಾನು|

Updated on:May 06, 2023 | 8:05 AM

Share

ಬೆಂಗಳೂರು: ಕರ್ನಾಟಕದಲ್ಲಿ ಪೂರ್ಣಬಹುಮತದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಧಾನಿ ನರೇಂದ್ರ ಮೋದಿ(PM Nagendra Modi) ಶಪಥ ಮಾಡಿದ್ದಾರೆ. ಚುನಾವಣೆಗೆ ಇನ್ನೇನು ಬೆರಳೆಣಿಕೆ ದಿನಗಳು ಬಾಕಿ ಉಳಿದಿರುವಂತೆ ರಾಜ್ಯದ ಉದ್ದಗಲಕ್ಕೂ ದಂಡಯಾತ್ರೆ ಕೈಗೊಂಡಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಲ್ಲಿ ಮೇ 6ರಂದು(ಶನಿವಾರ) ಮಾತ್ರವಲ್ಲದೇ ಭಾನುವಾರವೂ (ಮೇ7) ಸಹ ರಾಜಧಾನಿ ಬೆಂಗಳೂರು(Bengaluru) ನಗರದಲ್ಲಿ ಬೃಹತ್‌ ರೋಡ್‌ ಶೋ(Modi Roadshow) ನಡೆಸಲಿದ್ದಾರೆ. ಆದ್ರೆ, ರೋಡ್ ಶೋ ಮಾರ್ಗದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಶನಿವಾರಕ್ಕೆ ನಿಗದಿ ಮಾಡಲಾಗಿದೆ. ಭಾನುವಾರ ನೀಟ್ ಪರೀಕ್ಷೆ ಹಿನ್ನೆಲೆ ಪ್ರಧಾನಿ ಕಚೇರಿ ನಿರ್ದೇಶನದಂತೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ. ಹಾಗಾದ್ರೆ, ಮೋದಿ ರೋಡ್ ಶೋ ಎಲ್ಲೆಲ್ಲಿ ಸಾಗಲಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ: ಇಂದು ಸಂಜೆ ಬೆಂಗಳೂರಿಗೆ ಮೋದಿ, ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ನೀಟ್ ಪರೀಕ್ಷೆ ಹಿನ್ನೆಲೆ ರೋಡ್​ ಶೋನಲ್ಲಿ ಬದಲಾವಣೆ

ಭಾನುವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಶನಿವಾರಕ್ಕೆ ಫಿಕ್ಸ್ ಮಾಡಲಾಗಿದ್ದು, ಶನಿವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಭಾನುವಾರಕ್ಕೆ ನಿಗದಿ ಮಾಡಲಾಗಿದೆ.  ಭಾನುವಾರ ನೀಟ್ ಪರೀಕ್ಷೆ ಹಿನ್ನೆಲೆ ಪ್ರಧಾನಿ ಕಚೇರಿ ನಿರ್ದೇಶನದಂತೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮೋದಿ ರೋಡ್ ಶೋ ಮತ್ತೆ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಶನಿವಾರಕ್ಕೆ ನಿಗದಿಯಾಗಿದೆ. ಶನಿವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಭಾನುವಾರಕ್ಕೆ ಫಿಕ್ಸ್ ಮಾಡಲಾಗಿದೆ. ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ರೋಡ್ ಶೋ ನಡೆಯಲಿದ್ದು, ಜೆ.ಪಿ.ನಗರದ ಬ್ರಿಗೇಡ್ ಮಿಲೇನಿಯಂನಿಂದ ರೋಡ್ ಶೋ ಆರಂಭವಾಗಲಿದೆ. ಮಲ್ಲೇಶ್ವರಂನ ಸರ್ಕಲ್ ಮಾರಮ್ಮ ಟೆಂಪಲ್‌ವರೆಗೆ ರೋಡ್ ಶೋ ಮಾಡಲಿದ್ದಾರೆ.

ಶನಿವಾರ ಮೋದಿ ರೋಡ್ ಶೋ ಮಾರ್ಗ

ಜೆ.ಪಿ. ನಗರ ಬ್ರಿಗೇಡ್ ಮಿಲೇನಿಯಂ->ಸಾರಕ್ಕಿ ಜಂಕ್ಷನ್-> ಸೌತ್ ಎಂಡ್ ಸರ್ಕಲ್->ಕೃಷ್ಣರಾವ್ ಪಾರ್ಕ್->ರಾಮಕೃಷ್ಣ ಆಶ್ರಮ-> ಮಕ್ಕಳ ಕೂಟ->ಟೌನ್ ಹಾಲ್->ಕಾವೇರಿ ಭವನ->ಮೆಜೆಸ್ಟಿಕ್-> ಮಾಗಡಿ ರೋಡ್->GT ವರ್ಲ್ಡ್ ಮಾಲ್->ಹೌಸಿಂಗ್ ಬೋರ್ಡ್->ಬಸವೇಶ್ವರ ನಗರ->ಶಂಕರ ಮಠ ಸರ್ಕಲ್-> ಮೋದಿ ಆಸ್ಪತ್ರೆ ರಸ್ತೆ->ನವರಂಗ್ ಸರ್ಕಲ್->ಮಹಾಕವಿ ಕುವೆಂಪು ರಸ್ತೆ->ಮಲ್ಲೇಶ್ವರಂ ಸರ್ಕಲ್ ->ಸಂಪಿಗೆ ರಸ್ತೆ-> ಸರ್ಕಲ್ ಮಾರಮ್ಮ ದೇವಸ್ಥಾನ.

ರೋಡ್ ಶೋನಲ್ಲಿ 4 ಕಿ.ಮೀ ಕಡಿತ!

ಭಾನುವಾರ ಬೆಳಗ್ಗೆ 10 ಗಂಟೆಯಿಂದ 11.30ರವರೆಗೆ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಸುರಂಜನ್‌ದಾಸ್ ಸರ್ಕಲ್‌ನಿಂದ ಟ್ರಿನಿಟಿ ಸರ್ಕಲ್‌ವರೆಗೆ ರೋಡ್ ಶೋ ನಡೆಯಲಿದೆ. ಭಾನುವಾರ ನಡೆಯುವ ಪ್ರಧಾನಿ ರೋಡ್ ಶೋ 4 ಕಿ.ಮೀ‌. ಕಡಿತ ಮಾಡಲಾಗಿದೆ. ನೀಟ್ ಪರೀಕ್ಷೆ ಹಿನ್ನೆಲೆ ರೋಡ್‌ ಶೋ ರೂಟ್‌ನಲ್ಲಿ ಬದಲಾವಣೆ ಮಾಡಲಾಗಿದ್ದು, ಟ್ರಾಫಿಕ್ ಸಮಸ್ಯೆ ಆಗಬಹುದು ಅನ್ನೋ ಕಾರಣಕ್ಕೆ ಪ್ರಧಾನಿ ಕಚೇರಿ ನಿರ್ದೇಶನದಂತೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿದೆ.

ಭಾನುವಾರದ ರೋಡ್ ಶೋ ರೂಟ್ ಮ್ಯಾಪ್

ಬೆಮೆಲ್ ಸರ್ಕಲ್->ತಿಪ್ಪಸಂದ್ರ ಮುಖ್ಯರಸ್ತೆ->ಇಎಸ್ಐ ಆಸ್ಪತ್ರೆ, CMH ರೋಡ್->ಇಂದಿರಾನಗರ->ಹಲಸೂರು ಪೊಲೀಸ್ ಸ್ಟೇಷನ್- ಎಂ.ಜಿ ರಸ್ತೆ->ಬ್ರಿಗೇಡ್ ರೋಡ್

ಸಕಲ ಸಿದ್ಧತೆ

ಮೋದಿ ರೋಡ್​ ಶೋಗೆ ಈಗಾಗಲೇ ಪೊಲೀಸರು, ಬಿಬಿಎಂಪಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ರಸ್ತೆಯ ಎರಡು ಬದಿಯಲ್ಲಿ ಬ್ಯಾರಿಕೇಡ್​ ಹಾಕಲಾಗಿದ್ದು, ರೋಡ್ ಶೋ ನಡೆಯುವ ರಸ್ತೆಯಲ್ಲಿರುವ ಮರದ ಕೊಂಬೆಗಳನ್ನು ಕತ್ತರಿಸುವ ಕೆಲಸ ನಡೆಯುತ್ತಿದೆ. ಅಲ್ಲದೇ ರೋಡ್ ಶೋ ಸಾಗುವ ರಸ್ತೆಗಳಲ್ಲಿ ಸ್ಚಚ್ಛತೆ ಕಾರ್ಯವೂ ಸಹ ನಡೆಯುತ್ತಿದೆ. ಅಲ್ಲದೇ ಹೆಜ್ಜೆ-ಹೆಜ್ಜೆಗೂ ಪೊಲೀಸರ ಬಿಗಿ ಭದ್ರತೆ ಇರಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:28 am, Fri, 5 May 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!