AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು: ಮೇ 21ಕ್ಕೆ ಬಿಜೆಪಿ ಅವಲೋಕನಾ ಸಭೆ

ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಬಿಜೆಪಿ ಹೀನಾಯ ಸೋಲು ಅನಭವಿಸಿದ ಬಗ್ಗೆ ಅವಲೋಕನಾ ನಡೆಸಲು ಮೇ 21ರಂದು ಸಭೆ ಕರೆಯಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು: ಮೇ 21ಕ್ಕೆ ಬಿಜೆಪಿ ಅವಲೋಕನಾ ಸಭೆ
ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಗ್ಗೆ ಅವಲೋಕನ ನಡೆಸಲು ಮೇ 21ಕ್ಕೆ ಸಭೆ ಕರೆದ ಬಿಜೆಪಿ
Rakesh Nayak Manchi
|

Updated on: May 19, 2023 | 5:25 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಬಿಜೆಪಿ (BJP) ಮೇ 21ರಂದ ಅವಲೋಕನಾ ಸಭೆ (Review Meeting) ಕರೆದಿದೆ. ಭಾನುವಾರ ಸಂಜೆ 4 ಗಂಟೆಗೆ ಬೆಂಗಳೂರು ನಗರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಈ ಸಭೆ ಕರೆಯಲಾಗಿದ್ದು, ಬಿಜೆಪಿ ಜಿಲ್ಲಾಧ್ಯಕ್ಷರು, ವಿಭಾಗ ಉಸ್ತುವಾರಿಗಳು, ಸಹ ಉಸ್ತುವಾರಿಗಳು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಸಹ ಸಂಘಟನಾ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದಾರೆ.

ಚುನಾವಣಾ ಸಮೀಕ್ಷೆಗಳ ವರದಿಗಳನ್ನು ಮೀರಿ ಕರ್ನಾಟಕದಲ್ಲಿ ಕಾಂಗ್ರೆಸ್ ಭಾರೀ ಗೆಲುವು ಸಾಧಿಸಿದ್ದು, ಬಿಜೆಪಿ ನಿರೀಕ್ಷೆ ಮಾಡದಂತಹ ಸೋಲು ಕಂಡಿದೆ. 135 + ಸ್ಥಾನಗಳನ್ನು ಪಡೆದುಕೊಂಡಿರುವ ಕಾಂಗ್ರೆಸ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಮೇ 20ರಂದು ಸಿಎಂ ಡಿಸಿಎಂ ಮತ್ತು ಕೆಲ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇತ್ತ 65 ಸ್ಥಾನಗಳನ್ನು ಗೆದ್ದ ಬಿಜೆಪಿ ಆತ್ಮಾವಲಕೋನ ನಡೆಸಲು ಮುಂದಾಗಿದೆ.

ಈಗಾಗಲೇ ಸೋಲಿನ ಕೆಲವು ನಿಖರ ಕಾರಣಗಳನ್ನು ಬಿಜೆಪಿ ಹುಡುಕಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕಾತಿಯಲ್ಲಿನ ಬದಲಾವಣೆ ಸೋಲಿಗೆ ಪ್ರಧಾನ ಕಾರಣ ಎಂಬ ಮಾಹಿತಿ ಪಡೆದಿದೆ. ಅಯಾಯ ಜಿಲ್ಲೆಗಳ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳ ಸಚಿವರನ್ನು ಉಸ್ತುವಾರಿ ಮಾಡಿ ಪ್ರಯೋಗ ಮಾಡಿದ್ದೇ ಸೋಲಿಗೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಉಸ್ತುವಾರಿ ಸಚಿವರು ಜಿಲ್ಲೆಗಳಿಂದ ನಿಖರ ಮಾಹಿತಿ ತೆಗೆಯುವಲ್ಲಿ ವಿಫಲವಾಗಿದ್ದು, ತಮ್ಮ ಸ್ವಂತ ಜಿಲ್ಲೆ ಅಲ್ಲ ಎಂಬ ಕಾರಣಕ್ಕೆ ಉಸ್ತುವಾರಿ ಸಚಿವರು ಆಸಕ್ತಿ ತೋರಿಸಿಲ್ಲ. ಹೀಗಾಗಿ ಜಿಲ್ಲೆಗಳ ವಾಸ್ತವ ಸ್ಥಿತಿ ಮಾಹಿತಿ ಪಡೆಯುವಲ್ಲಿ ರಾಜ್ಯ ಬಿಜೆಪಿ ವಿಫಲವಾಗಿತ್ತು.

ಇದನ್ನೂ ಓದಿ: ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆ ಚರ್ಚೆ: ನಳಿನ್ ಕುಮಾರ್ ಕಟೀಲ್ ಸ್ಥಾನಕ್ಕೆ ಯಾರು? ಇಲ್ಲಿವೆ ಕೆಲವು ಹೆಸರುಗಳು

ಇದಲ್ಲದೆ, ನಿಗಮ ಮತ್ತು ಮಂಡಳಿಗಳ ಸೂಕ್ತವಲ್ಲದ ನೇಮಕಾತಿಯಿಂದಲೂ ಪಕ್ಷಕ್ಕೆ ನಷ್ಟವಾಗಿದೆ. ಮೋದಿ ಅಲೆ ಇದೆ ಎಂದು ಅತಿಯಾಗಿ ನಂಬಿಕೊಂಡಿದ್ದು ಕೂಡಾ ಹಿನ್ನೆಡೆಗೆ ಕಾರಣವಾಗಿದೆ. ಹಳೆ ಮೈಸೂರು ಭಾಗದಲ್ಲಿ 1:10 ಮತ ಪ್ರಮಾಣ ಹೆಚ್ಚಳವಾದರೂ ಲಾಭವಾಗಿಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಜೆಡಿಎಸ್ ಮತಗಳನ್ನು ಕಸಿದಿದ್ದು ಕಾಂಗ್ರೆಸ್ ಪಕ್ಷಕ್ಕೆ ಲಾಭ.

ನಿಗಮ-ಮಂಡಳಿಗಳ ನೇಮಕಾತಿ ವಿಚಾರದಲ್ಲಿನ ವಿಳಂಬ ನೀತಿಯಿಂದಾಗಿ ಕಾರ್ಯಕರ್ತರು ಬೇಸತ್ತಿದ್ದರು, ಕೆಲವು ಕಡೆ ಅಭ್ಯರ್ಥಿಗಳ ಬದಲಾವಣೆಯಿಂದ ಗೆಲ್ಲುವ ಅವಕಾಶ ಕೈಚೆಲ್ಲಿತ್ತು. ಈ ಕಾರಣಗಳೊಂದಿಗೆ ಕಾಂಗ್ರೆಸ್​ನ ಉಚಿತ ಗ್ಯಾರಂಟಿಗಳು ಬಿಜೆಪಿ ಲೆಕ್ಕಾಚಾರಗಳು ಅಡಿಮೇಲು ಮಾಡಿತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ