AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮಣೆ ಹಾಕಿದ್ದು 75 ಹೊಸ ಮುಖಗಳಿಗೆ, ಗೆದ್ದಿದ್ದು ಮಾತ್ರ 19 ಮಂದಿಯಷ್ಟೇ! ಪಕ್ಷದ ಸೋಲಿಗೆ ಇದೂ ಕಾರಣವಾ?

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ 2023 ಪ್ರಕಟಗೊಂಡಿದ್ದು, ಬಿಜೆಪಿಯಿಂದ ಕಣಕ್ಕಿಳಿಸಿದ್ದ 75 ಹೊಸ ಅಭ್ಯರ್ಥಿಗಳಲ್ಲಿ 19 ಮಂದಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್​ನಿಂದ ಕಣಕ್ಕಿಳಿದಿದ್ದ 42 ಹೊಸಮುಖಗಳಲ್ಲಿ 35 ಮಂದಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಮಣೆ ಹಾಕಿದ್ದು 75 ಹೊಸ ಮುಖಗಳಿಗೆ, ಗೆದ್ದಿದ್ದು ಮಾತ್ರ 19 ಮಂದಿಯಷ್ಟೇ! ಪಕ್ಷದ ಸೋಲಿಗೆ ಇದೂ ಕಾರಣವಾ?
ಬಿಜೆಪಿಯ 75 ಹೊಸ ಅಭ್ಯರ್ಥಿಗಳಲ್ಲಿ 19 ಮಂದಿಗೆ ಗೆಲುವು, ಕಾಂಗ್ರೆಸ್​ನ 42 ಹೊಸ ಮುಖಗಳಲ್ಲಿ 35 ಮಂದಿಗೆ ಗೆಲುವು.
Follow us
Rakesh Nayak Manchi
|

Updated on: May 13, 2023 | 7:22 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ 2023 (Karnataka Assembly Election Results 2023) ಪ್ರಕಟಗೊಂಡಿದ್ದು, ನಾಲ್ಕು ವರ್ಷಗಳ ಕಾಲ ಅಧಿಕಾರ ನಡೆಸಿದ ಬಿಜೆಪಿ (BJP) ಹೀನಾಯ ಸೋಲು ಕಂಡಿದೆ. ಹಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಪಕ್ಷದ ಸೋಲಿಗೆ ಕಾರಣವಾಯ್ತಾ? ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ಕಣಕ್ಕಿಳಿಸಿದ ಒಟ್ಟು 75 ಹೊಸ ಅಭ್ಯರ್ಥಿಗಳ ಪೈಕಿ 19 ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸಿದ್ದಾರೆ. ಇತ್ತ ಕಾಂಗ್ರೆಸ್ (Congress) ಹೈಕಮಾಂಡ್ ಕಣಕ್ಕಿಳಿಸಿದ್ದ 42 ಹೊಸ ಮುಖಗಳ ಪೈಕಿ 35 ಮಂದಿ ಗೆಲುವು ಸಾಧಿಸಿದ್ದಾರೆ.

224 ವಿಧಾನಸಭೆ ಕ್ಷೇತ್ರಗಳ ಪೈಕಿ 75 ಕ್ಷೇತ್ರಗಳಲ್ಲಿ ಬಿಜೆಪಿ ಹೊಸಬರಿಗೆ ಟಿಕೆಟ್​ ನೀಡಿತ್ತು. ಈ ಪೈಕಿ ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮಂಜುಳಾ ಲಿಂಬಾವಳಿ ಗೆಲುವು ಸಾಧಿಸಿದರೆ, ಹುಬ್ಬಳ್ಳಿ ಧಾರವಾಡ ಕೇಂದ್ರ ಕ್ಷೇತ್ರದಲ್ಲಿ ಮಹೇಶ್ ಟೆಂಗಿನಕಾಯಿ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದಲ್ಲಿ ನಿಖಿಲ್ ಕತ್ತಿ, ಖಾನಾಪುರ ಕ್ಷೇತ್ರದಲ್ಲಿ ವಿಠ್ಠಲ್ ಹಲಗೇಕರ್, ಬೈಂದೂರು ಕ್ಷೇತ್ರದಲ್ಲಿ ಗುರುರಾಜ್ ಗಂಟಿಹೊಳೆ, ಉಡುಪಿ ಜಿಲ್ಲೆ ಕಾಪು ಗುರ್ಮೆ ಸುರೇಶ್ ಶೆಟ್ಟಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: Karnataka Election Results: ಬಿಜೆಪಿ ಸೋಲು, ಕಾಂಗ್ರೆಸ್​​ ಗೆಲುವಿಗೆ ನಾಯಕರು ಹೇಳಿದ್ದಲ್ಲ, ನಿಜವಾದ ಕಾರಣ ಇಲ್ಲಿದೆ

ಕುಂದಾಪುರ ಕ್ಷೇತ್ರದಲ್ಲಿ ಕಿರಣ್ ಕುಮಾರ್​ ಕೊಡ್ಗಿ ಅವರು ಗೆಲುವು ಸಾಧಿಸಿದರೆ, ಉಡುಪಿ ಕ್ಷೇತ್ರದಲ್ಲಿ ಯಶ್ಪಾಲ್ ಸುವರ್ಣ, ಬೇಲೂರು ಕ್ಷೇತ್ರದಲ್ಲಿ ಹುಲ್ಲಳ್ಳಿ ಸುರೇಶ್​, ಸಕಲೇಶಪುರ ಕ್ಷೇತ್ರದಲ್ಲಿ ಸಿಮೆಂಟ್ ಮಂಜು, ಸುಳ್ಯ ಕ್ಷೇತ್ರದಲ್ಲಿ ಭಾಗೀರಥಿ ಮುರುಳ್ಯ, ಶಿಕಾರಿಪುರ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ, ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಟಿ.ಎ.ಶ್ರೀವತ್ಸ, ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಧೀರಜ್ ಮುನಿರಾಜು, ಜಮಖಂಡಿ ಕ್ಷೇತ್ರದಲ್ಲಿ ಜಗದೀಶ್ ಗುಡಗಂಟಿ ಗೆಲುವು ಸಾಧಿಸಿದರೆ, ಶಿರಹಟ್ಟಿ ಕ್ಷೇತ್ರದಲ್ಲಿ ಡಾ.ಚಂದ್ರು ಲಮಾಣಿ, ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಚನ್ನಬಸಪ್ಪ, ಹುಮ್ನಾಬಾದ್ ಕ್ಷೇತ್ರದಲ್ಲಿ ಸಿದ್ದು ಪಾಟೀಲ್ ಗೆದ್ದಿದ್ದಾರೆ.

ಕಾಂಗ್ರೆಸ್​ನಲ್ಲಿ ಹೊಸಮುಖಗಳಲ್ಲಿ ಗೆದ್ದ ಬಹುಪಾಲು ಅಭ್ಯರ್ಥಿಗಳು

ಬಿಜೆಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಮಣೆ ಹಾಕಿದ್ದರೆ, ಕಾಂಗ್ರೆಸ್ ಕೆಲವೊಂದು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ಕೊಟ್ಟಿತ್ತು. ಅದರಂತೆ ಕಾಂಗ್ರೆಸ್​ನಿಂದ ಮೊದಲಬಾರಿ ಸ್ಪರ್ಧಿಸಿದ ಅಭ್ಯರ್ಥಿಗಳ ಪೈಕಿ ಬಹುಪಾಲು ಮಂದಿ ವಿಧಾನಸಭೆ ಪ್ರವೇಶಿಸಿದ್ದಾರೆ. ಕಾಂಗ್ರೆಸ್ ಈ ಬಾರಿ 42 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಈ ಪೈಕಿ 35 ಮಂದಿ ಗೆಲುವು ಸಾಧಿಸಿದ್ದಾರೆ. 7 ಮಂದಿ ಸೋಲು ಅನುಭವಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ