BJP Candidates List: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ; ಯಾರಿಗೆಲ್ಲ ಟಿಕೆಟ್? ಇಲ್ಲಿದೆ ನೋಡಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಳೆದ ವಾರ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.

BJP Candidates List: ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ; ಯಾರಿಗೆಲ್ಲ ಟಿಕೆಟ್? ಇಲ್ಲಿದೆ ನೋಡಿ
ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ
Follow us
|

Updated on:Apr 17, 2023 | 6:52 PM

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಳೆದ ವಾರ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಈ ಹಿಂದಿನ 2 ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ.

ಮೂರನೇ ಪಟ್ಟಿಯಲ್ಲಿ ಯಾರಿಗೆಲ್ಲ ಬಿಜೆಪಿ ಟಿಕೆಟ್?

ಕ್ಷೇತ್ರ – ಅಭ್ಯರ್ಥಿ

  1. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ – ಮಹೇಶ್ ಟೆಂಗಿನಕಾಯಿ
  2. ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ – ಉಮೇಶ್ ಶೆಟ್ಟಿ
  3. ಬೆಂಗಳೂರಿನ ಹೆಬ್ಬಾಳ ಕ್ಷೇತ್ರ – ಕಟ್ಟಾ ಜಗದೀಶ್​
  4. ಮೈಸೂರಿನ ಕೃಷ್ಣರಾಜ ಕ್ಷೇತ್ರ – ಶ್ರೀವತ್ಸ
  5. ಹಗರಿಬೊಮ್ಮನಹಳ್ಳಿ ಕ್ಷೇತ್ರ – ಬಿ.ರಾಮಣ್ಣ
  6. ನಾಗಠಾಣ ಕ್ಷೇತ್ರ – ಸಂಜಯ್ ಐಹೊಳೆ
  7. ಸೇಡಂ ಕ್ಷೇತ್ರ – ರಾಜಕುಮಾರ ಪಾಟೀಲ್ಕೊ
  8. ಕೊಪ್ಪಳ ಕ್ಷೇತ್ರ – ಮಂಜುಳಾ ಅಮರೇಶ್
  9. ರೋಣ ಕ್ಷೇತ್ರ – ಕಳಕಪ್ಪ ಬಂಡಿ
  10. ಮಹದೇವಪುರ – ಮಂಜುಳಾ ಲಿಂಬಾಳಿ

ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿತ್ತು. 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆರು ಮಂದಿ ಹಾಲಿ ಶಾಸಕರಿಗೆ ಎರಡನೇ ಪಟ್ಟಿಯಲ್ಲಿ ಅವಕಾಶ ನೀಡಿರಲಿಲ್ಲ. ಇದೀಗ ಮೂರನೇ ಪಟ್ಟಿಯಲ್ಲಿ 10 ಮಂದಿಗೆ ಟಿಕೆಟ್ ನೀಡುವುದರೊಂದಿಗೆ ಒಟ್ಟು 222 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದಂತಾಗಿದೆ. 2 ಕ್ಷೇತ್ರಗಳ ಟಿಕೆಟ್​ ಅನ್ನು (ಶಿವಮೊಗ್ಗ ನಗರ ಹಾಗೂ ಮಾನ್ವಿ) ಬಿಜೆಪಿ ಬಾಕಿ ಉಳಿಸಿಕೊಂಡಿದೆ.

ಈಶ್ವರಪ್ಪ ಪುತ್ರನಿಗೆ ಇನ್ನೂ ಸಿಕ್ಕಿಲ್ಲ ಟಿಕೆಟ್

ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಜತೆಗೆ ಮಾನ್ವಿ ಕ್ಷೇತ್ರದ ಟಿಕೆಟ್​ ಅನ್ನೂ ಬಾಕಿ ಇರಿಸಿಕೊಂಡಿದೆ. ಶಿವಮೊಗ್ಗ ನಗರ ಕ್ಷೇತ್ರವನ್ನು ಈವರೆಗೆ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಪ್ರತಿನಿಧಿಸುತ್ತಿದ್ದರು. ಇತ್ತೀಚೆಗಷ್ಟೇ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆದರೆ, ತಮ್ಮ ಮಗ ಕಾಂತೇಶ್​ಗೆ ಟಿಕೆಟ್ ನೀಡಬೇಕೆಂಬ ಬೇಡಿಕೆಯನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Shivamogga: ಶಿವಮೊಗ್ಗ ನಗರ ಕ್ಷೇತ್ರ; ಯಾರಿದು ಬಿಜೆಪಿ ವರಿಷ್ಠರ ಗಮನ ಸೆಳೆದ ಡಾ. ಧನಂಜಯ ಸರ್ಜಿ? ಆಕಾಂಕ್ಷಿಗಳ ವಿವರ ಇಲ್ಲಿದೆ ನೋಡಿ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಹಲವು ಮಂದಿ ಆಕಾಂಕ್ಷಿಗಳಿದ್ದು, ತೀವ್ರ ಪೈಪೋಟಿ ಇದೆ. ಹೀಗಾಗಿ ಅಭ್ಯರ್ಥಿ ಘೋಷಣೆ ವಿಳಂಬವಾಗುತ್ತಿದೆ. ಸಂಘ ಪರಿವಾರದ ಗಮನ ಸೆಳೆದಿರುವ ಹೊಸ ಮುಖ ಡಾ. ಧನಂಜಯ ಸರ್ಜಿ ಹೆಸರು ಕೂಡ ಪ್ರಬಲವಾಗಿ ಕೇಳಿ ಬರುತ್ತಿದೆ. ಬಿಎಸ್ ಯಡಿಯೂರಪ್ಪ ಆಪ್ತ ಲಿಂಗಾಯತ ಗಾಣಿಗ ಸಮಾಜದ ಜ್ಯೋತಿ ಪ್ರಕಾಶ್ ಕೂಡಾ ರೇಸ್​​ನಲ್ಲಿದ್ದಾರೆ.

ಎಸ್.ಎ.ರಾಮದಾಸ್, ಸೋಮಣ್ಣ ಪುತ್ರನಿಗಿಲ್ಲ ಟಿಕೆಟ್

ಮೈಸೂರಿನ ಕೃಷ್ಣರಾಜ ಕ್ಷೇತ್ರದ ಹಾಲಿ ಶಾಸಕ ಎಸ್.ಎ.ರಾಮದಾಸ್​ಗೆ ಟಿಕೆಟ್ ಕೈತಪ್ಪಿದೆ. ಅಂತೆಯೇ ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣಗೆ ಕೂಡ ಟಿಕೆಟ್ ನಿರಾಕರಿಸಲಾಗಿದೆ. ಇವರು ಗೋವಿಂದರಾಜನಗರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮಹದೇವಪುರ ಕ್ಷೇತ್ರದ ಟಿಕೆಟ್ ಅರವಿಂದ ಲಿಂಬಾವಳಿ ಕೈತಪ್ಪಿದ್ದು, ಅವರ ಪತ್ನಿ ಮಂಜುಳಾಗೆ ದೊರೆತಿದೆ.

ಬಿಜೆಪಿ ಮೊದಲ ಪಟ್ಟಿಯ ವಿವರ; BJP’s First Candidate List: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 189 ಮಂದಿಗೆ ಟಿಕೆಟ್, 52 ಮಂದಿ ಹೊಸಬರಿಗೆ ಮಣೆ

ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ಅಚ್ಚರಿಯ ಆಯ್ಕೆ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅಚ್ಚರಿಯ ಆಯ್ಕೆ ಮಾಡಲಾಗಿದೆ. ಈ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಲ್ಲಾಹುಣ್ಸಿ ರಾಮಣ್ಣಗೆ ಟಿಕೇಟ್ ಘೋಷಣೆ ಮಾಡಲಾಗಿದೆ. ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ ಪ್ರಬಲ ಆಕಾಂಕ್ಷಿಗಳಾಗಿದ್ದರು. ಜೆತೆಗೆ ಕೆಎಸ್ಎಸ್ ಅಧಿಕಾರಿ ಭೀಮಾನಾಯ್ಕ್ ಕೂಡ ಆಕಾಂಕ್ಷಿ ಆಗಿದ್ದರು. ಇವರಿಗೂ ಟಿಕೇಟ್ ಕೈತಪ್ಪಿದೆ. ಹೀಗಾಗಿ ಈ ಕ್ಷೇತ್ರದಲ್ಲೂ ಬಿಜೆಪಿ ಬಂಡಾಯದ ಬಿಸಿ ಎದುರಿಸಬೇಕಾದ ಸಾಧ್ಯತೆ ಇದೆ.

ಬಿಜೆಪಿ ಎರಡನೇ ಪಟ್ಟಿಯ ವಿವರ; BJP Candidates Second List: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; ಇಲ್ಲಿದೆ ವಿವರ

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:22 pm, Mon, 17 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ