AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರ, ಮಸೀದಿ, ಸ್ಮಶಾನದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಾರೆ; ಬಿ.ಕೆ.ಹರಿಪ್ರಸಾದ್​ ವಾಗ್ದಾಳಿ

‘ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ, ಮಸೀದಿ, ಮಂದಿರದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಾರೆ. ಈ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಮಂದಿರ, ಮಸೀದಿ, ಸ್ಮಶಾನದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಾರೆ; ಬಿ.ಕೆ.ಹರಿಪ್ರಸಾದ್​ ವಾಗ್ದಾಳಿ
ಬಿಕೆ ಹರಿಪ್ರಸಾದ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 24, 2023 | 1:23 PM

Share

ಉತ್ತರ ಕನ್ನಡ: ‘ಬಿಜೆಪಿಯವರು ಪಾಳುಬಿದ್ದ ಸ್ಮಶಾನ, ಮುರುಕಲು ಬಿದ್ದ, ಮಸೀದಿ, ಮಂದಿರದಲ್ಲೂ ಬಿಜೆಪಿಯವರು ರಾಜಕೀಯ ಮಾಡ್ತಾರೆ. ಈ ಚುನಾವಣೆ(Election)ಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್(B. K. Hariprasad) ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಕಾರವಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಬಿಜೆಪಿಯಲ್ಲಿ ಜಾತಿ, ಧರ್ಮ ರಂಗಪ್ರವೇಶ ಮಾಡಿದೆ ಎನ್ನುವ ಮೂಲಕ ಕಿಡಿಕಾರಿದ್ದಾರೆ.

‘ಬಿಜೆಪಿಯಲ್ಲಿ ಎರಡೂವರೆ ಸಾವಿರ ಕೋಟಿ ಹಣ ಕೊಟ್ಟರೆ ಸಿಎಂ ಆಗ್ತಾರೆ, ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ. ಈಗಲೂ ಬಿಜೆಪಿ ಕಾಂಗ್ರೆಸ್ ನಾಯಕರ ಫೋನ್​ ಕದ್ದಾಲಿಕೆ ಮಾಡುತ್ತಿದ್ದು, ಸಿಬಿಐ, ಇಡಿಯನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಹೀಗಾಗಿ ನಾವು ದೂರು ಕೊಡಲು ಹೋಗಿಲ್ಲ. ನಿನ್ನೆ(ಏ.23) ಗಂಗಾಧರ ಗೌಡರವರನ್ನ ವೈಸ್ ಪ್ರಸಿಡೆಂಟ್ ಮಾಡಿದ್ದೆವು. ಇಂದು(ಏ.24) ಲೋಕಾಯುಕ್ತ ದಾಳಿ ಆಗಿದೆ.

ಇದನ್ನೂ ಓದಿ:ಮೀಟೂ ಪ್ರತಿಭಟನೆ: ನಮಗೆ ಬೆಂಬಲ ನೀಡಿ ಎಂದು ಕುಸ್ತಿಪಟುಗಳಿಂದ ರಾಜಕೀಯ ಪಕ್ಷಗಳಿಗೆ ಕರೆ

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ನಾವು ಬ್ರಿಟಿಷರ ಗುಲಾಮರಾಗಿರಲಿಲ್ಲ, ಬೂಟ್ ನೆಕ್ಕಿದವರಲ್ಲ. ಬ್ರಿಟೀಷರಿಗೆ ಎದೆ ತಟ್ಟಿ ನಿಂತವರು ನಾವು, ಅದನ್ನ ಎದುರಿಸುತ್ತೇವೆ. ನಾವು ಅಧಿಕಾರಕ್ಕೆ ಬಂದಮೇಲೆ ಭ್ರಷ್ಟಾಚಾರದಲ್ಲಿ ಭಾಗಿಯಾದ ಬಿಜೆಪಿಗರನ್ನು ಜೈಲಿಗೆ ಕಳುಹಿಸುತ್ತೇವೆ ಎನ್ನುವ ಮೂಲಕ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್