AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸೋಲಿಸಲು ಅಖಾಡಕ್ಕಿಳಿದ ಸಂಘಟನಾ ಚತುರ, ಕೋಲಾರದಲ್ಲಿ ಬಿಜೆಪಿ ಗೆಲುವಿಗೆ ಸಂತೋಷ್ ‘ಸೂತ್ರ’

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್ ಸಿದ್ದರಾಮಯ್ಯನವರ ಕೋಲಾರ ಕ್ಷೇತ್ರದ ಅಖಾಡಕ್ಕಿಳಿದಿದ್ದು, ಪಕ್ಷ ಸಂಘಟನೆ ಗಟ್ಟಿಗೊಳಿಸಲು ಕೆಲ ತಂತ್ರಗಳನ್ನು ಹೆಣೆದಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿ ಗೆಲುವಿಗೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಗೆಲ್ಲುವ ದಾರಿ ಹಾಕಿಕೊಟ್ಟಿದ್ದಾರೆ.

ಸಿದ್ದರಾಮಯ್ಯ ಸೋಲಿಸಲು ಅಖಾಡಕ್ಕಿಳಿದ ಸಂಘಟನಾ ಚತುರ, ಕೋಲಾರದಲ್ಲಿ ಬಿಜೆಪಿ ಗೆಲುವಿಗೆ ಸಂತೋಷ್ ‘ಸೂತ್ರ’
ಸಿದ್ದರಾಮಯ್ಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 21, 2023 | 4:40 PM

ಬೆಂಗಳೂರು/ಕೋಲಾರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ (Karnataka Assembly Election 2023) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆಗಲೇ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಯಾತ್ರೆಗೆ ಒಂದು ಹೆಸರಿಟ್ಟು ಚುನಾವಣಾ ಪ್ರಚಾರ ಮಾಡುತ್ತಿವೆ. ಎಲ್ಲಾ ಪಕ್ಷಗಳೂ ತಮ್ಮದೇ ರೀತಿಯಲ್ಲಿ ಗ್ರೌಂಡ್‌ ವರ್ಕ್ ಮೂಲಕ ಎದುರಾಳಿಗಳನ್ನ ಮಣ್ಣುಮುಕ್ಕಿಸುವ ತಂತ್ರ ಹೆಣೆಯುತ್ತಿವೆ. ಆದ್ರೆ, ಸಿದ್ದರಾಮಯ್ಯ(Siddaramaiah) ಅಖಾಡಕ್ಕಿಳಿಯುತ್ತಿರುವ ಕೋಲಾರ (Kolar) ಜಿಲ್ಲೆ ಮಾತ್ರ ಹೈವೋಲ್ಟೇಜ್‌ ಕಣವಾಗಿ ಪರಿಣಮಿಸಿದೆ. ಕೋಲಾರದಲ್ಲಿ ಸಿದ್ದು ಕಣಕ್ಕಿಳಿಯುವುದಾಗಿ ಘೋಷಿಸಿದ ಬೆನ್ನಲ್ಲೇ ಜೆಡಿಎಸ್ ಹಾಗೂ ಬಿಜೆಪಿ ಅವರನ್ನು ಹಣೆಯಲು ತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಸ್ವತಃ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​. ಸಂತೋಷ್ (BL Santosh)​ ಕೋಲಾರ ಅಖಾಡಕ್ಕಿಳಿದಿದ್ದು, ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರಿಗೆ ಗೆಲ್ಲುವ ದಾರಿ ಹಾಕಿಕೊಟ್ಟಿದ್ದಾರೆ.

ಇದನ್ನೂ ಓದಿ: ‘ಸಿದ್ದರಾಮಯ್ಯ ಸೋಲಿಸಿ’ಎಂಬ ಕರಪತ್ರ: ಕೋಲಾರ ಕ್ಷೇತ್ರದ ದಲಿತ ಮತದಾರರಲ್ಲಿ ಜಾಗೃತಿ ಅಭಿಯಾನ

ಹೌದು..ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದು ಈಗ ಕೇಸರಿ ಪಡೆಯ ಕಣ್ಣು ಬೀಳುವಂತೆ ಮಾಡಿದೆ. ಇಡೀ ರಾಜ್ಯ ಸುತ್ತಿ ಬಿಜೆಪಿ ಮೇಲೆ ವಾಚಾಮಗೋಚರ ವಾಗ್ದಾಳಿ ನಡೆಸುತ್ತಿರುವ ಸಿದ್ದರಾಮಯ್ಯರನ್ನ ಕಟ್ಟಿಹಾಕುವುದಕ್ಕೆ ಜಾಲ ರಚಿಸುತ್ತಿದೆ. ಇದೇ ಕಾರಣಕ್ಕೆ ಸಂಘಟನಾ ಚತುರ ಬಿ.ಎಲ್. ಸಂತೋಷ್‌ ಖುದ್ದು ಅಖಾಡಕ್ಕೆ ಇಳಿದಿದ್ದಾರೆ. ಮೊನ್ನೇ ಕೋಲಾರದಲ್ಲಿ ಸುದೀರ್ಘ ಸಭೆ ನಡೆಸಿದ್ದು, ಸಿದ್ದರಾಮಯ್ಯ ಹಣಿಯೋಕೆ ಪಟ್ಟು ರಣತಂತ್ರ ರೂಪಿಸುತ್ತಿದ್ದಾರೆ.

ಸಿದ್ದರಾಮಯ್ಯ ಸೋಲಿಸಲು ಅಖಾಡಕ್ಕೆ ಇಳಿದ ಸಂತೋಷ್‌

ಸಿದ್ದರಾಮಯ್ಯ ಸೋಲಿಸಲು ಖುದ್ದು ಅಖಾಡಕ್ಕೆ ಇಳಿದಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್‌, ಕೋಲಾರದಲ್ಲಿ ಪಕ್ಷ ಸಂಘಟನೆ ಗಟ್ಟಿಗೊಳಿಸಲು ತಂತ್ರ ಹೂಡಿದ್ದಾರೆ. ಯಾರೇ ಬಂದರೂ ನಮ್ಮ ಸಂಘಟನೆ ಗಟ್ಟಿ ಇದ್ರೆ ಗೆಲುವು ಎನ್ನುವುದು ಸಂತೋಷ್‌ ಸೂತ್ರ. ಈ ಮೂಲಕ ಕಾರ್ಯಕರ್ತರಿಗೆ ಈಗಿನಿಂದಲೇ ಗೆಲ್ಲುವ ದಾರಿ ಹಾಕಿಕೊಡುತ್ತಿದ್ದಾರೆ. ಹೀಗೆ, ಪಕ್ಷ ಸಂಘಟನೆಯ ಮಂತ್ರ ಜಪಿಸುತ್ತಿರುವ ಬಿ.ಎಲ್. ಸಂತೋಷ್, ಕಾರ್ಯಕರ್ತರಿಗೆ ಕೆಲವೊಂದು ಟಾಸ್ಕ್‌ಗಳನ್ನೂ ಕೊಟ್ಟಿಟ್ಟು, ಈ ಟಾಸ್ಕ್‌ ಪೂರ್ಣಗೊಳಿಸಿದ್ರೆ ನಮ್ಮ ಗೆಲುವು ಪಕ್ಕಾ ಎಂದು ಪಾಠ ಮಾಡಿದ್ದಾರೆ.

ಬಿಜೆಪಿ ಗೆಲುವಿಗೆ ಸಂತೋಷ್ ‘ಸೂತ್ರ’

ಕಾರ್ಯಕರ್ತರಿಗೆ ಗೆಲುವಿನ ಸೂತ್ರ ಹೇಳಿಕೊಟ್ಟಿರುವ ಬಿ.ಎಲ್ ಸಂತೋಷ್, ಕಾಂಗ್ರೆಸ್, ಜೆಡಿಎಸ್‌ ಸೇರಿದಂತೆ ಬೇರೆ ಪಕ್ಷದ ಸ್ಥಳೀಯ ಮುಖಂಡರನ್ನ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.. ಸೋತು ನಿರ್ಲಕ್ಷ್ಯಕ್ಕೆ ಒಳಗಾದ ಮುಖಂಡರನ್ನೇ ಟಾರ್ಗೆಟ್ ಮಾಡಿ ಚರ್ಚಿಸುವಂತೆ ಹೇಳಿದ್ದಾರೆ. ಇನ್ನು, ಸಮುದಾಯದ ಪ್ರಮುಖರನ್ನ ಭೇಟಿ ಮಾಡಿ ಚರ್ಚೆ ಮಾಡುವಂತೆ ತಿಳಿಸಿದ್ದಾರೆ. ಅಲ್ಲದೇ ಸಮುದಾಯದ ಪ್ರಮುಖರನ್ನ ಭೇಟಿ ಮಾಡಿ ಚರ್ಚೆ ಮಾಡುವಂತೆ ಹೇಳಿದ್ದು, ಸಣ್ಣ ಸಮುದಾಯಗಳನ್ನೂ ನೆಗ್ಲೆಟ್ ಮಾಡುವುದು ಬೇಡ ಎಂದಿದ್ದಾರೆ.

ಇದನ್ನೂ ಓದಿ: Karnataka Assembly Election: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರ ಹಿಡಿಯೋದು ಪಕ್ಕಾ: ಖಾಸಗಿ ಸಂಸ್ಥೆಯ ಸಮೀಕ್ಷೆ

ಇನ್ನು, ಹೋಬಳಿ ಮಟ್ಟದಲ್ಲಿ ಜಾತಿ ಸಮಾವೇಶಗಳನ್ನ ಮಾಡುವುದು, ಉದಯೋನ್ಮುಖ ಯುವಕರ ಗುರುತಿಸಿ ಮಣೆ ಹಾಕುವುದು, ಕುರುಬರ ಸಂಘದ ಅಸಮಾಧಾನ ಸೂಕ್ತವಾಗಿ ಬಳಸಿಕೊಳ್ಳುವುದು, ದೊಡ್ಡ ಮಟ್ಟದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಮಾಡುವುದು, ಮನೆ ಮನೆಗೆ ತೆರಳಿ ವಿಜಯ ಸಂಕಲ್ಪ ಅಭಿಯಾನ ನಡೆಸುವುದು ಮತ್ತು ಕೇರಿ ಕೇರಿಗಳಲ್ಲಿ ಕಮಲದ ವಾಲ್‌ ಪೇಂಟಿಂಗ್‌ ಮಾಡಿಸುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳನ್ನು ಸಂಪರ್ಕಿಸಿ ಎಂದು ಬಿ.ಎಲ್. ಸಂತೋಷ್‌ ಸೂಚನೆ ಕೊಟ್ಟಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್