AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಟಗೆರೆ ವಿಧಾನಸಭಾ ಕ್ಷೇತ್ರದ 13 ಗ್ರಾಮಗಳಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ: ಮನವೊಲಿಕೆಗೆ ಮುಂದಾದ ಜಿ ಪರಮೇಶ್ವರ

ಕ್ರಷರ್ ತೆರೆಯಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಪ್ರಯೋಜನವಾಗದ ಹಿನ್ನೆಲೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ 13 ಗ್ರಾಮದ ಜನರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದು, ಗ್ರಾಮಸ್ಥರ ಮನವೊಲಿಕೆಗೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರು ಮುಂದಾಗಿದ್ದಾರೆ.

ಕೊರಟಗೆರೆ ವಿಧಾನಸಭಾ ಕ್ಷೇತ್ರದ 13 ಗ್ರಾಮಗಳಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ: ಮನವೊಲಿಕೆಗೆ ಮುಂದಾದ ಜಿ ಪರಮೇಶ್ವರ
ಚಿನಿವಾರನಹಳ್ಳಿ ಗ್ರಾಮದಲ್ಲಿ ಡಾ. ಜಿ ಪರಮೇಶ್ವರ
ವಿವೇಕ ಬಿರಾದಾರ
|

Updated on:Apr 11, 2023 | 10:48 AM

Share

ತುಮಕೂರು: ಕ್ರಷರ್ ತೆರೆಯಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಪ್ರಯೋಜನವಾಗದ ಹಿನ್ನೆಲೆ ಕೊರಟಗೆರೆ (Kortagere) ವಿಧಾನಸಭಾ ಕ್ಷೇತ್ರದ 13 ಗ್ರಾಮದ ಜನರು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ್ದು, ಗ್ರಾಮಸ್ಥರ ಮನವೊಲಿಕೆಗೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ (G Parmeshwar) ಅವರು ಮುಂದಾಗಿದ್ದಾರೆ. ಜಿಲ್ಲೆಯ ಕೊರಟಗೆರೆ ತಾಲೂಕಿನ ಚಿನಿವಾರನಹಳ್ಳಿ ಗ್ರಾಮಕ್ಕೆ ಪರಮೇಶ್ವರ ಭೇಟಿ ನೀಡಿ ರೈತರ ಅಹವಾಲು ಸ್ವೀಕರಿಸಿದ್ದಾರೆ. ಈ ವೇಳೆ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು ನನ್ನ ಅವಧಿಯಲ್ಲಿ ಕ್ರಷರ್​ ಮಂಜೂರು ಆಗಿಲ್ಲ. 2015ರಲ್ಲಿ ಪ್ರಕ್ರಿಯೆ ಆರಂಭವಾಗಿ 2018ರ ವೇಳೆಗೆ ಮಂಜೂರಾಗಿದೆ. ಈ ಹಿಂದೆ ಇದ್ದ ಶಾಸಕರ ಅವಧಿಯಲ್ಲಿ ಕ್ರಷರ್​​ ಮಂಜೂರಾಗಿದೆ. ನನಗೆ ಈವರೆಗೂ ಈ ಕ್ರಷರ್ ವಿಚಾರ ಗಮನಕ್ಕೆ ಬಂದಿಲ್ಲ. ನಾನು ಮತ್ತೆ ಅಧಿಕಾರಕ್ಕೆ ಬಂದರೇ ಬಸವಣ್ಣನ ಮೇಲೆ ಆಣೆ ಇದನ್ನ ಆರಂಭಿಸಲು ಬಿಡೋಲ್ಲ. ಮತದಾನ ನಿಮ್ಮ ಹಕ್ಕು ದಯವಿಟ್ಟು ಮತದಾನ ಮಾಡಿ ಎಂದು ಮನವಿ ಮಾಡಿದರು.

ಈ ವೇಳೆ ಗ್ರಾಮಸ್ಥರು ಜಿಲ್ಲಾಧಿಕಾರಿ ಆದೇಶ ಬರುವವರೆಗೂ ಮತದಾನ ಮಾಡಲ್ಲ ಎಂದಿದ್ದಾರೆ. ತಕ್ಷಣವೇ ಪರಮೇಶ್ವರ್​​ ಜಿಲ್ಲಾಧಿಕಾರಿ ಡಿಸಿ ವೈ.ಎಸ್.ಪಾಟೀಲ್​ ಅವರಿಗೆ ಕರೆ ಮಾಡಿ ಕ್ರಷರ್ ಮಂಜೂರಾತಿ ರದ್ದು ಮಾಡುವಂತೆ ಸೂಚಿಸಿದರು.

ಇದನ್ನೂ ಓದಿ: ತುಮಕೂರು: ದೇವಸ್ಥಾನದ ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

ಕ್ರಷರ್ ತೆರೆಯಲು 13 ಗ್ರಾಮಗಳ ನಿವಾಸಿಗಳಿಂದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಪ್ರಯೋಜನವಾಗಿರಲಿಲ್ಲ. ಹಾಗಾಗಿ ಅಧಿಕಾರಿಗಳ ನಡೆಗೆ ಬೇಸತ್ತು ಗ್ರಾಮಸ್ಥರು ಈ ಬಾರಿ ನಾವು ಮತದಾನ ಮಾಡುವುದಿಲ್ಲ ಎಂದು ಗ್ರಾಮಗಳಲ್ಲಿ ಬ್ಯಾನರ್​ ಅಳವಡಿಸಿದ್ದಾರೆ. ತುಮಕೂರು ತಾಲೂಕಿನ ವ್ಯಾಪ್ತಿಯ ಬೆಳಧರ ಗ್ರಾಮ ಪಂಚಾಯಿತಿ ಚಿನಿವಾರನಹಳ್ಳಿ, ಜಕ್ಕೆನಹಳ್ಳಿ, ಅನ್ನದಾನಿಪಾಳ್ಯ, ಸೀಗೇಹಳ್ಳ, ಗೌಡನಕಟ್ಟೆ, ಮಲ್ಲಯ್ಯನಪಾಳ್ಯ, ಚನ್ನಮುದ್ದನಹಳ್ಳಿ, ಮಸಣಿಪಾಳ್ಯ, ಹಿರೇಕೊಡತಕಲ್ಲು, ಅಹೋಬಲ ಅಗ್ರಹಾರ, ಮುದ್ದರಾಮಯ್ಯನಪಾಳ್ಯ ಸೇರಿ 13 ಹಳ್ಳಿಗಳ 5,000ಕ್ಕೂ ಹೆಚ್ಚು ನಿವಾಸಿಗಳಿಂದ ಮತದಾನ ಬಹಿಷ್ಕಾರ ಬಗ್ಗೆ ಬ್ಯಾನರ್‌ ಅಳವಡಿಕೆ ಮಾಡಲಾಗಿತ್ತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:42 am, Tue, 11 April 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?