AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ ಯಡಿಯೂರಪ್ಪನವರ ಲಕ್ಕಿ ಕಾರಿನಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಬಿವೈ ವಿಜಯೇಂದ್ರ

ಶಿಕಾರಪುರ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಬಿವೈ ವಿಜಯೇಂದ್ರ ಅವರು ಇಂದು (ಏ.19) ರಂದು ನಾಮಪತ್ರ ಸಲ್ಲಿಸಲು ಬಿಎಸ್​ ಯಡಿಯೂರಪ್ಪ ಅವರ ಹಳೆಯ ಲಕ್ಕಿ ಅಂಬಾಸಿಡರ್​ ಕಾರಿನಲ್ಲಿ ಹೋಗಿದ್ದು ವಿಶೇಷವಾಗಿತ್ತು.

ಬಿಎಸ್​ ಯಡಿಯೂರಪ್ಪನವರ ಲಕ್ಕಿ ಕಾರಿನಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಬಿವೈ ವಿಜಯೇಂದ್ರ
ಬಿಎಸ್​ ಯಡಿಯೂರಪ್ಪ ಅವರೊಂದಿಗೆ ಲಕ್ಕಿ ಅಂಬಾಸಿಡರ್ ಕಾರಿನಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಬಿವೈ ವಿಜಯೇಂದ್ರ
ವಿವೇಕ ಬಿರಾದಾರ
|

Updated on:Apr 19, 2023 | 3:30 PM

Share

ಶಿವಮೊಗ್ಗ: ಶಿಕಾರಪುರ ವಿಧಾನಸಭಾ ಕ್ಷೇತ್ರ (Shikaripur Assembly Constituency) ಅಭ್ಯರ್ಥಿ ಬಿವೈ ವಿಜಯೇಂದ್ರ (BY Vijayendra) ಅವರು ಇಂದು (ಏ.19) ರಂದು ನಾಮಪತ್ರ ಸಲ್ಲಿಸಲು ಬಿಎಸ್​ ಯಡಿಯೂರಪ್ಪ (BS Yediyurappa) ಅವರೊಂದಿಗೆ ಲಕ್ಕಿ ಅಂಬಾಸಿಡರ್​ ಕಾರಿನಲ್ಲಿ ಹೋಗಿದ್ದು ವಿಶೇಷವಾಗಿತ್ತು. ಬಿವೈ ವಿಜಯೇಂದ್ರ ಅವರು ಈ ಅಂಬಾಸಿಡರ್ (Ambassador) ಕಾರಿನಲ್ಲಿ ಹೋಗಲು ಕಾರಣವೂ ಇದೆ. ಬಿಎಸ್​ ಯಡಿಯೂರಪ್ಪ ಅವರು ಮೊದಲ ಬಾರಿಗೆ ಶಾಸಕರಾಗಿದ್ದಾಗ ಇದೇ ಅಂಬಾಸಿಡರ್ ಕಾರನ್ನು ಬಳಸಿದ್ದರು. ಈ ಕಾರಿನಲ್ಲಿಯೇ ರಾಜ್ಯವನ್ನು ಸುತ್ತುತ್ತಿದ್ದರು. ಅಲ್ಲದೇ ಬಿಎಸ್​ ಯಡಿಯೂರಪ್ಪ ಅವರು ನಾಮಪತ್ರ ಸಲ್ಲಿಸಲು ಹೋಗುವಾಗ ಕೂಡ ಇದೇ ​ಕಾರನ್ನು ಬಳಸುತ್ತಿದ್ದರು. ಈ ಕಾರು ಬಿಎಸ್​ ಯಡಿಯೂರಪ್ಪ ಅವರಗೆ ಲಕ್ಕಿ ಕಾರ್ ಆಗಿದೆ. ಈ ಹಿನ್ನೆಲೆ ಪುತ್ರನ ನಾಮಪತ್ರಿಕೆ ಸಲ್ಲಿಕೆಗೆ ಹೋಗುವಾಗಲೂ ಲಕ್ಕಿ ಕಾರನ್ನೇ ಬಳಸಿದ್ದಾರೆ.

ಇನ್ನು ಬಿಎಸ್​ ಯಡಿಯೂರಪ್ಪ ಅವರು ಈ ಬಾರಿ ಚುನಾಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದು, ತಮ್ಮ ಕ್ಷೇತ್ರವನ್ನು ಶಿಕಾರಿಪುರವನ್ನು ಪತ್ರ, ಬಿವೈ ವಿಜಯೇಂದ್ರ ಅವರಿಗೆ ಬಟ್ಟುಕೊಟ್ಟಿದ್ದಾರೆ. ಈ ಹಿನ್ನೆಲೆ ಈ ಬಾರಿ ಬಿವೈ ವಿಜಯೇಂದ್ರ ಅವರು ಶಿಕಾರಿಪುರದಿಂದ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಕೆಗೆ ತೆರಳುವಾಗ ತಂದೆಯವರ ಲಕ್ಕಿ ಕಾರನ್ನೇ ಬಳಸಿದ್ದು, ವಿಶೇಷವಾಗಿತ್ತು.

ಇದನ್ನೂ ಓದಿ: ಲಿಂಗಾಯತರನ್ನು ಹಿಡಿಟ್ಟುಕೊಳ್ಳಲು ರಣತಂತ್ರ, ಯಡಿಯೂರಪ್ಪರನ್ನ ಮುಂದೆ ಬಿಟ್ಟ ಬಿಜೆಪಿ

ಬಿವೈ ವಿಜಯೇಂದ್ರ ಅವರು ನಾಮಪತ್ರ ಸಲ್ಲಿಕೆಗೆ ಹೋಗುವ ಮುಂಚೆ ತಂದೆ ಬಿಎಸ್​ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಬಳಿಕ ಲಕ್ಕಿ ಕಾರಿನಲ್ಲಿ ತಂದೆ ಮತ್ತು ಸಹೋದರನೊಂದಿಗೆ ಒಟ್ಟಿಗೆ ಹೋಗಿ ಬಿವೈ ವಿಜಯೇಂದ್ರ ನಾಮಪತ್ರ ಸಲ್ಲಿಸಿದ್ದಾರೆ.

ಬಿಎಸ್​ ಯಡಿಯೂರಪ್ಪ ಅವರ ಗುರುತು CKR45 ಕಾರು

ಈ ಬಗ್ಗೆ ಪುತ್ರ ಬಿವೈ ವಿಜಯೇಂದ್ರ ಮಾತನಾಡಿ, ಬಿಎಸ್​ ಯಡಿಯೂರಪ್ಪ ಅವರ ರಾಜಕಾರಣ ಪ್ರಾರಂಭವಾಗಿದ್ದು ಅಂಬಾಸಿಡರ್​ (CKR 45) ಕಾರಿನಲ್ಲಿ. ಈ ಕಾರಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿದ್ದಾರೆ. ಈ ಕಾರನ್ನು ನೋಡಿದರೇ ರಾಜ್ಯದ ಕಾರ್ಯಕರ್ತರಿಗೆ ರೋಮಾಂಚನವಾಗುತ್ತದೆ. ಬಿಜೆಪಿಯ ಗುರುತು ಕಮಲವಾಗಿದ್ದರೇ, ಬಿಎಸ್​ ಯಡಿಯೂರಪ್ಪ ಅವರ ಗುರುತು CKR45 ಕಾರು ಎಂದು ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Wed, 19 April 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ