AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗಲು ಸಿದ್ಧರಿಲ್ಲ, ಬಿಎಸ್​​ವೈ ಬೆಂಬಲಿಗ ಶಾಸಕರು ಹೈಕಮಾಂಡ್​ಗೆ ಪತ್ರ: ರಮೇಶ್ ಬಾಬು ಬಾಂಬ್

ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ಚುನಾವಣೆಗೆ ಹೋಗಲು ಬಿಎಸ್​ವೈ ಬೆಂಬಗಲಿಗ ಶಾಸಕರು ಹೈಕಮಾಂಡ್​ಗೆ ಪತ್ರ ಬರೆದಿದ್ದಾರೆ ಎಂದು ರಮೇಶ್​ ಬಾಬು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜ್ಯಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗಲು ಸಿದ್ಧರಿಲ್ಲ, ಬಿಎಸ್​​ವೈ ಬೆಂಬಲಿಗ ಶಾಸಕರು ಹೈಕಮಾಂಡ್​ಗೆ ಪತ್ರ: ರಮೇಶ್ ಬಾಬು ಬಾಂಬ್
ಕೆಪಿಸಿಸಿ ವಕ್ತಾರ ರಮೇಶ್​ ಬಾಬು
TV9 Web
| Edited By: |

Updated on: Jan 24, 2023 | 4:16 PM

Share

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಕರ್ನಾಟಕಕ್ಕೆ ಭೇಟಿ ನೀಡಿ ಅಲೆ ಎಬ್ಬಿಸಲು ಶುರು ಮಾಡಿದ್ದಾರೆ. ಇದರ ಮಧ್ಯೆ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗಲು ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಿಎಸ್ ಯಡಿಯೂರಪ್ಪ ಬೆಂಬಲಿಗ ಶಾಸಕರು ಹೈಕಮಾಂಡ್​ಗೆ ಪತ್ರ ಬರೆದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್​ ಬಾಬು ಹೊಸ ಬಾಂಬ್​ ಸಿಡಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸೋಲಿಸಲು ಅಖಾಡಕ್ಕಿಳಿದ ಸಂಘಟನಾ ಚತುರ, ಕೋಲಾರದಲ್ಲಿ ಬಿಜೆಪಿ ಗೆಲುವಿಗೆ ಸಂತೋಷ್ ‘ಸೂತ್ರ’

ಬೆಂಗಳೂರಿನಲ್ಲಿ ಇಂದು (ಜನವರಿ 24) ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ವಕ್ತಾರ ರಮೇಶ್​ ಬಾಬು, ಸಿಎಂ ನೇತೃತ್ವದಲ್ಲಿ ಚುನಾವಣೆಗೆ ಹೋಗಲು ಬಿಜೆಪಿ ಶಾಸಕರು ಸಿದ್ಧರಿಲ್ಲ. ಯಡಿಯೂರಪ್ಪ ಬೆಂಬಲಿಗ ಶಾಸಕರು ಹೈಕಮಾಂಡ್​ಗೆ ಪತ್ರ ಬರೆದಿದ್ದಾರೆ. 40-50 ಶಾಸಕರು ಪತ್ರಕ್ಕೆ ಸಹಿ ಹಾಕಿದ್ದಾರೆ. BSY, ಬೊಮ್ಮಾಯಿ ನಾನೊಂದು ತೀರ ನೀನೊಂದು ತೀರ ಅಂತಾಗಿದೆ ಎಂದು ಹೇಳಿದರು.

ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎಂದಿದ್ದ ಅಮಿತ್ ಶಾ

ಹೌದು…ಮುಂದಿನ ಚುನಾವಣೆಯನ್ನು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಕರ್ನಾಟಕ ಪ್ರವಾಸದ ವೇಳೆ ಕಳೆದ ಆರೇಳು ತಿಂಗಳ ಹಿದೆಯೇ ಕಾರ್ಯಕಮ್ರವೊಂದರಲ್ಲಿ ಬಹಿರಂಗವಾಗಿ ಹೇಳಿದ್ದರು. ಅಮಿತ್‌ ಶಾ ನೀಡಿದ ಹೇಳಿಕೆಗೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಯಾಕೆಂದರೆ ಚುನಾವಣೆ ಹಾಗೂ ಪ್ರಮುಖ ನಿರ್ಧಾರಗಳ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ತೆಗೆದುಕೊಳ್ಳಬಹುದು ಅಂದುಕೊಂಡಿದ್ದ ರಾಜ್ಯ ಬಿಜೆಪಿಯಲ್ಲಿ ಇದು ತಲ್ಲಣ ಸೃಷ್ಟಿಸಿತ್ತು.

ಅಲ್ಲದೇ ಬಿಎಸ್‌ ಯಡಿಯೂರಪ್ಪ ಹಾಗೂ ಇನ್ನಿತರ ನಾಯಕರನ್ನು ಬಿಜೆಪಿ ಹೈಕಮಾಂಡ್‌ ಬದಿಗೆ ನೂಕಲು ಪ್ರಯತ್ನಿಸುತ್ತಿದ್ಯಾ? ಅನ್ನುವ ಬಗ್ಗೆಯೂ ಚರ್ಚೆ ಶುರುವಾಗಿತ್ತು. ಇನ್ನು ಇತ್ತ ಬಿಜೆಪಿಯ ನಾಯಕರುಗಳು ಕೂಡ ತಕಾರರು ವ್ಯಕ್ತಪಡಿಸಿದ್ದರು, ಇನ್ನು ಕೆಲವರು ಇದನ್ನು ಒಪ್ಪಿಕೊಂಡಿದ್ದರು. ಇದೀಗ ಕೆಪಿಸಿಸಿ ವಕ್ತಾರ ರಮೇಶ್ ಬಾಬು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದು, ಸಂಚಲನ ಮೂಡಿಸಿದೆ.

ಹಾಗಾದ್ರೆ, ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಬಿಎಸ್​ವೈ ಬೆಂಬಲಿಗ ಶಾಸಕರು ಹೈಕಮಾಂಡ್​ಗೆ ಪತ್ರ ಬರೆದಿದ್ದು ನಿಜ ನಾ? ಎನ್ನುವ ಬಗ್ಗೆ ಸ್ವತಃ ಬಿಜೆಪಿ ನಾಯರುಗಳೇ ಸ್ಪಷ್ಟಪಡಿಸಿಬೇಕಿದೆ.

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!