AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣದಲ್ಲಿ ಸಿದ್ದು ವಿರುದ್ದ ತೊಡೆ ತಟ್ಟಲು ಸಿದ್ದ ಎಂದ ಬಿ ವೈ ವಿಜಯೇಂದ್ರ: ರಾಜಕೀಯ ಒಳಸುಳಿಯೇನು?

Varuna: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ಬಾರಿ ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ರಾಜ್ಯ ರಾಜಕಾರಣದ ಕೇಂದ್ರ ಬಿಂದುವಾಗುವ ಎಲ್ಲಾ ಲಕ್ಷಣಗಳು ಜೋರಾಗಿವೆ. ಇದಕ್ಕೆ ಕಾರಣ ಸಿದ್ದರಾಮಯ್ಯ ಹಾಗೂ ಬಿ ವೈ ವಿಜಯೇಂದ್ರ.

ವರುಣದಲ್ಲಿ ಸಿದ್ದು ವಿರುದ್ದ ತೊಡೆ ತಟ್ಟಲು ಸಿದ್ದ ಎಂದ ಬಿ ವೈ ವಿಜಯೇಂದ್ರ: ರಾಜಕೀಯ ಒಳಸುಳಿಯೇನು?
ವರುಣದಲ್ಲಿ ಸಿದ್ದು ವಿರುದ್ದ ತೊಡೆ ತಟ್ಟಲು ಸಿದ್ದ ಎಂದ ಬಿ ವೈ ವಿಜಯೇಂದ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Dec 12, 2022 | 10:02 AM

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಆರಂಭವಾಗಿದೆ. ಈ ಬಾರಿ ಮೈಸೂರು ಜಿಲ್ಲೆಯ ವರುಣ (Varuna) ಕ್ಷೇತ್ರ ರಾಜ್ಯ ರಾಜಕಾರಣದ ಕೇಂದ್ರ ಬಿಂದುವಾಗುವ ಎಲ್ಲಾ ಲಕ್ಷಣಗಳು ಜೋರಾಗಿವೆ. ಇದಕ್ಕೆ ಕಾರಣ ಸಿದ್ದರಾಮಯ್ಯ (Siddaramaiah) ಹಾಗೂ ಬಿ ವೈ ವಿಜಯೇಂದ್ರ (BY Vijayendra). ಹೇಗೆ ಅಂತೀರಾ? ಹಾಗಿದ್ರೆ ಈ ಸ್ಟೋರಿ ಓದಿ.

ಒಂದು ಟಗರು. ಮತ್ತೊಂದು ಕಡೆ ಮರಿ ರಾಜಾಹುಲಿ ಅಬ್ಬರ. ಇದು ಸದ್ಯ ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಹೊಸ ಚುನಾವಣಾ ಬೆಳವಣಿಗೆ. ಹೌದು ಸುರಕ್ಷಿತ ಕ್ಷೇತ್ರದ ಹುಡುಕಾಟ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ, ಬಾದಾಮಿ ಎಲ್ಲಾ ಸುತ್ತಾಡಿ‌ ಕೊನೆಗೆ ತಮ್ಮ ಹಳೆಯ ಕ್ಷೇತ್ರ ವರುಣವೇ ಬೆಸ್ಟ್ ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ.

ಎರಡು ದಿನದ ಹಿಂದೆ ವರುಣ ಕ್ಷೇತ್ರದಲ್ಲಿ ರೌಂಡ್ ಮುಗಿಸಿದ್ದ ಸಿದ್ದು ಸಖತ್ ಖುಷಿಯಾಗಿದ್ರು. ಮಗ ಶಾಸಕನಾಗಿ ಮಾಡಿರುವ ಕೆಲಸಗಳು ಹಾಗೂ ಜನರ ಬೆಂಬಲ ನೋಡಿ ಮುಂದಿನ ಚುನಾವಣೆ ಬಹುತೇಕ ವರುಣದಲ್ಲೇ ಎದುರಿಸುವ ಅಂತಿಮ ನಿರ್ಧಾರಕ್ಕೆ ಬಂದಿದ್ರು.

ಇತ್ತ ವಿಪಕ್ಷ ನಾಯಕ ಸಿದ್ದರಾಮಯ್ಯ ವರುಣದಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತವಾಗುತ್ತಿದ್ದ ಬೆನ್ನಲ್ಲೇ ಇವತ್ತು ಬಿಎಸ್ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಭಾನುವಾರ ಮೈಸೂರಿಗೆ ಆಗಮಿಸಿದ್ದರು. ವೀರಶೈವ ಲಿಂಗಾಯತ ಮಹಾಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಜಯೇಂದ್ರ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವರುಣದಲ್ಲಿ ತೊಡೆ ತಟ್ಟುವ ಬಗ್ಗೆ ಸುಳಿವು ನೀಡಿದ್ರು.

ಇದನ್ನೂ ಓದಿ:

ಸಾಮೂಹಿಕವಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಚಾಮರಾಜಪೇಟೆ ಮುಖಂಡರು, JDS ಗೆಲ್ಲುವ ಮೊದಲ ಕ್ಷೇತ್ರ ಎಂದ ಎಚ್​ಡಿಕೆ

ನಿನ್ನೆ ಮೈಸೂರಿಗೆ ಆಗಮಿಸಿದ ವಿಜಯೇಂದ್ರ ಗನ್ ಹೌಸ್‌ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ರು. ಇದೇ ವೇಳೆ ಮಾತನಾಡಿದ ಬಿ ವೈ ವಿಜಯೇಂದ್ರ ಹೈಕಮಾಂಡ್ ಸೂಚಿಸಿದ್ರೆ ಯಾವುದೇ ಸವಾಲು ಸ್ವೀಕರಿಸಲು ತಾನು ಸಿದ್ದ ಎಂದು ಪರೋಕ್ಷವಾಗಿ ತಾನು ಸಿದ್ದು ವಿರುದ್ದ ತೊಡೆ ತಟ್ಟಲು ಸಿದ್ದ ಅನ್ನೋದನ್ನು ಘೋಷಿಸಿದ್ರು.

ಅಷ್ಟಕ್ಕೆ ಸುಮ್ಮನಾಗದ ಬಿವೈ ವಿಜಯೇಂದ್ರ ಸುತ್ತೂರು ಶಾಖ ಮಠದಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಳೆ ಮೈಸೂರು ಅಂದರೆ ನನಗೆ ಪಂಚಪ್ರಾಣ. ವರುಣ ಕ್ಷೇತ್ರವೇ ನನಗೆ ರಾಜಕೀಯವಾಗಿ ರಾಜ್ಯದಲ್ಲಿ ಗುರುತಿಸುವಂತೆ ಮಾಡಿದ್ದು. ಕೊನೆಯವರೆಗೂ ನಾನು ಇದನ್ನ ಮರೆಯುವುದಿಲ್ಲ ಅಂತ ಘೋಷಿಸಿದ್ರು.

ಕಳೆದ ಚುನಾವಣೆಯಲ್ಲಿ ವರುಣ‌ ಕ್ಷೇತ್ರದಿಂದ ಅಖಾಡಕ್ಕಿಳಿಯಲು ಬಿ ವೈ ವಿಜಯೇಂದ್ರ ಸಾಕಷ್ಟು ಉತ್ಸುಕರಾಗಿದ್ರು. ಆದ್ರೆ ಅಂತಿಮ‌ ಹಂತದಲ್ಲಿ ಹೈಕಮಾಂಡ್ ವಿಜಯೇಂದ್ರ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿರಲಿಲ್ಲ. ಇದರಿಂದ ಸಾಕಷ್ಟು ಗಲಾಟೆ ಗದ್ದಲ ಗೊಂದಲಗಳಾಗಿತ್ತು. ಇದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿತ್ತು.

ಇದನ್ನೂ ಓದಿ: KGF ತಮಿಳು ಕಾರ್ಮಿಕರ ಮೇಲೆ ಕಣ್ಣಿಟ್ಟ ಹೆಚ್‌ಡಿಕೆ, ಪ್ರಾದೇಶಿಕ ಜೆಡಿಎಸ್​ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರ ಸರ್ಕಾರ ಅದಕ್ಕೆ ನೀರೆರೆಯುತ್ತಾ!?

ಇದೀಗ ಮತ್ತೆ ಬಿ ವೈ ವಿಜಯೇಂದ್ರ ಮತ್ತೊಮ್ಮೆ ವರುಣ ಕ್ಷೇತ್ರದಿಂದ ರಾಜಕೀಯ ಚುನಾವಣಾ ಅಖಾಡಕ್ಕೆ ಧುಮುಕುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಮೂಲಕ ವಿಜಯೇಂದ್ರ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಚೆಕ್ ನೀಡಲು ಮುಂದಾಗಿದ್ದಾರೆ. ಒಂದು ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವರುಣ ಕ್ಷೇತ್ರವನ್ನೇ ಫೈನಲ್ ಮಾಡಿ, ಮತ್ತೊಂದು ಕಡೆಯಿಂದ ಬಿ ವೈ ವಿಜಯೇಂದ್ರ ಕಣಕ್ಕಿಳಿದರೆ ವರುಣ ಕ್ಷೇತ್ರ ಜಿದ್ದಾಜಿದ್ದಿನ ಅಖಾಡವಾಗಿ ಮುಂದಿನ ಚುನಾವಣೆಯಲ್ಲಿ ರಾಜ್ಯದ ಗಮನ ಸೆಳೆಯೋದು ಖಂಡಿತ (ವರದಿ: ರಾಮ್, ಟಿವಿ 9, ಮೈಸೂರು)

ಕರ್ನಾಟಕ ಅಸೆಂಬ್ಲಿ ಚುನಾವಣೆ 2023 ಕುರಿತಾದ ವರದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ