AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Byndoor Election 2023 Winner: ಬರಿಗಾಲ ಸಂತ ಬಿಜೆಪಿ ಗುರುರಾಜ್​​ ಗಂಟಿಹೊಳೆಗೆ ಭರ್ಜರಿ ವಿಜಯ

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ (Byndoor Assembly Constituency) ಈ ಬಾರಿ ಮೂರು ಪಕ್ಷಗಳ ನಡುವೆ ಬಾರಿ ಪೈಪೋಟಿ ನಡೆದಿದ್ದು. ಮತ್ತೆ ಕಮಲ ಜಯವಾಗಿದೆ.

Byndoor Election 2023 Winner: ಬರಿಗಾಲ ಸಂತ ಬಿಜೆಪಿ ಗುರುರಾಜ್​​ ಗಂಟಿಹೊಳೆಗೆ ಭರ್ಜರಿ ವಿಜಯ
ಗುರುರಾಜ್​​ ಗಂಟಿಹೊಳೆ
ಅಕ್ಷಯ್​ ಪಲ್ಲಮಜಲು​​
|

Updated on: May 13, 2023 | 5:48 PM

Share

ಬೈಂದೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇಂದು ಪ್ರಕಟವಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ (Byndoor Assembly Constituency) ಈ ಬಾರಿ ಮೂರು ಪಕ್ಷಗಳ ನಡುವೆ ಬಾರಿ ಪೈಪೋಟಿ ನಡೆದಿದ್ದು. ಮತ್ತೆ ಕಮಲ ಜಯವಾಗಿದೆ. ಕಳೆದ ಚುನಾವಣೆಯಲ್ಲಿ ಬೈಂದೂರಿನಲ್ಲಿ ಬಿ ಸುಕುಮಾರ್ ಶೆಟ್ಟಿ ಭಾರೀ ಬಹುಮತದಿಂದ ಗೆಲ್ಲುವು ಸಾಧಿಸಿದ್ದರು. ಆದರೆ ಬಿ ಸುಕುಮಾರ್ ಶೆಟ್ಟಿ ಅವರಿಗೆ ಈ ಬಾರಿ ಬಿಜೆಪಿ ಟಿಕೇಟ್ ನೀಡಿಲ್ಲ. ಬಿ ಸುಕುಮಾರ್ ಶೆಟ್ಟಿ ಅವರು ಸಂಘಟನೆ ಮೂಲಕ ಅನೇಕ ಕೆಲಸ ಮಾಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಬೈಂದೂರಿನಲ್ಲಿ ಜನಾಭಿಪ್ರಾಯ ವಿರುದ್ಧವಾಗಿದ್ದು, ಹೊಸ ಮುಖಕ್ಕೆ ಮಣೆ ಹಾಕಿದ್ದರು, ಈ ಬಾರಿ ಗುರುರಾಜ್​​ ಗಂಟಿಹೊಳೆ ಗೆಲುವು ಸಾಧಿಸಿದ್ದಾರೆ, ಇವರು ಬರಿಗಾಲ ಸಂತ ಎಂದು ಪ್ರಸಿದ್ಧಿ, ಸಂಘಟನೆಯ ಮೂಲಕ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ ಎಂದು ಹೇಳಲಾಗಿತ್ತು. ಈ ಬಾರಿ ಗುರುರಾಜ್​​ ಗಂಟಿಹೊಳೆ ಅವರಿಗೆ ಬಿಜೆಪಿ ಟಿಕೇಟ್​​ ನೀಡಿದ್ದು, ಚುನಾವಣಾ ಪ್ರಚಾರದ ಸಮಯದಲ್ಲಿ ಗುರುರಾಜ್​​ ಗಂಟಿಹೊಳೆ ಭಾರೀ ಟ್ರೆಂಡ್​​ ಆಗುತ್ತಿದ್ದರು. ಬೈಂದೂರಿನಲ್ಲಿ ಬಿಜೆಪಿ ಮೇಲೆ ಒಲವು ಇದ್ದು, ಬಿಜೆಪಿ ಈ ಬಾರಿಯೂ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಹೆಚ್ಚು ಕೆಲಸ ಮಾಡಿದವರು, ಉಡುಪಿ ಜಿಲ್ಲೆ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ಮತ್ತೆ 3 ವರ್ಷ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಬಾರಿ ಕಾಂಗ್ರೆಸ್​​ ಕೂಡ ಪ್ರಬಲ ಪೈಪೋಟಿಯನ್ನು ನೀಡಿದ್ದಾರೆ. ಈ ಬಾರಿಯೂ ಬಿಜೆಪಿ ಗೆಲವು ಸಾಧಿಸಿದೆ.

ಇನ್ನೂ ಕಾಂಗ್ರೆಸ್​​​ ಕೆ. ಗೋಪಾಲ ಪೂಜಾರಿ ಕೂಡ ಪ್ರಬಲ ಪೈಪೋಟಿ ನೀಡಿದ್ದು, ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದಾರೆ. ಅವರು ರಾಜಕೀಯವಾಗಿ ಭಾರೀ ಅನುಭವ ಇರುವ ವ್ಯಕ್ತಿ ಹಾಗೂ 1994ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಕಾಂಗ್ರೆಸ್​​ ಭದ್ರಕೋಟೆಯಲ್ಲಿ ಗೆಲುವು ತಂದುಕೊಟ್ಟವರು, ಕೆ. ಗೋಪಾಲ ಪೂಜಾರಿ ನಂತರ ಅಲ್ಲಿಂದ 1998ರಲ್ಲಿ ಲೋಕಸಭೆಗೂ ಕೂಡ ಸ್ಪರ್ಧಿಸಿದ್ದಾರೆ, ಈ ಬಾರಿ ಅವರು ಕಾಂಗ್ರೆಸ್​​ನಿಂದ ಸ್ವರ್ಧಿಸಿದ್ದು, ಸೋತಿದ್ದಾರೆ. ಈ ಬಾರಿ ಮತಪ್ರಭು ಬಿಜೆಪಿಗೆ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: Sakleshpur Election 2023 Winner: ಸಕಲೇಶಪುರದಲ್ಲಿ ಜೆಡಿಎಸ್, ಕಾಂಗ್ರೆಸ್​ಗೆ ಸೋಲಿನ ಆಘಾತ ಕೊಟ್ಟ ಬಿಜೆಪಿಯ ಸಿಮೆಂಟ್ ಮಂಜು

ಇನ್ನೂ ಜೆಡಿಎಸ್​​ನಿಂದ ಮುಸ್ಲಿಂ ಸಮುದಾಯದ ವ್ಯಕ್ತಿ ಮನ್ಸೂರು ಇಬ್ರಾಹಿಂ ಸ್ಪರ್ಧಿಸಿದ್ದು ಅವರು ಕಡಿಮೆ ಮತಗಳಿಂದ ಸೋತಿದ್ದಾರೆ. ಒಟ್ಟಾರೆ ಈ ಬಾರಿ ಬೈಂದೂರು ಕ್ಷೇತ್ರ ಬಿಜೆಪಿ ತೆಕ್ಕೆಗೆ ಬಂದಿದೆ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ