AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆ ಹತ್ತಾದರೂ ಮತಗಟ್ಟೆಯತ್ತ ಸುಳಿಯದ ಮತದಾರರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ

ಮೈಸೂರು ಜಿಲ್ಲೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದು ಚುನಾವಣಾ ಅಧಿಕಾರಿಗಳು ಮನವೊಲಿಸಲು ಮುಂದಾಗಿದ್ದಾರೆ.

ಗಂಟೆ ಹತ್ತಾದರೂ ಮತಗಟ್ಟೆಯತ್ತ ಸುಳಿಯದ ಮತದಾರರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ
ಮತಗಟ್ಟೆ
ಆಯೇಷಾ ಬಾನು
|

Updated on: May 10, 2023 | 10:11 AM

Share

ಮೈಸೂರು: ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ(Karnataka Assembly Elections 2023). ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತ ಚಲಾಯಿಸುವ ಮೂಲಕ ಇಡೀ ರಾಜ್ಯ ಹಬ್ಬದ ಸಂಭ್ರಮದಲ್ಲಿ ಮುಳುಗಿದೆ. ಆದ್ರೆ ಚಾಮುಂಡೇಶ್ವರಿ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಗ್ರಾಮಸ್ಥರು ಮತ ಹಾಕುವುದಿಲ್ಲ ಎಂದು ಮತದಾನ ಬಹಿಷ್ಕರಿಸಿದ್ದಾರೆ. ಮೈಸೂರು ಜಿಲ್ಲೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದು ಚುನಾವಣಾ ಅಧಿಕಾರಿಗಳು ಮನವೊಲಿಸಲು ಮುಂದಾಗಿದ್ದಾರೆ.

ಇಂದು ಮತದಾನ ಹಿನ್ನೆಲೆ ಚುನಾವಣೆ ಅಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡು ಬೆಳಗ್ಗೆ 7 ಗಂಟೆಯಿಂದಲೂ ಕಾಯುತ್ತಿದ್ದಾರೆ. ಆದ್ರೆ ಇದುವರೆಗೂ ಒಬ್ಬ ಮತದಾರನೂ ಮತಗಟ್ಟೆಗೆ ಭೇಟಿ ನೀಡಿಲ್ಲ. ಅದರಲ್ಲೂ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಸಹ ಮತಗಟ್ಟೆಯತ್ತ ತಲೆ ಹಾಕಿಲ್ಲ. ಇಡೀ ಗ್ರಾಮವೇ ಮತದಾನ ಬಹಿಷ್ಕರಿಸಿದೆ.

ಇದನ್ನೂ ಓದಿ: ದ್ವೀಪ ಗ್ರಾಮದ ರೈತರಿಗೀಗ ಭೂಮಿ ಕಳೆದುಕೊಳ್ಳುವ ಆತಂಕ; ಸಾಗರದ ಶರಾವತಿ ಹಿನ್ನೀರಿನ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ನಾವ್ಯಾಕೆ ವೋಟ್ ಹಾಕಬೇಕು. ತಮ್ಮ 5 ವರ್ಷ ಅವಧಿಯಲ್ಲಿ ಒಂದು ರೋಡ್ ಸಹ ಮಾಡಿಸಿಲ್ಲ. ಗ್ರಾಮಕ್ಕೆ ಭೇಟಿ ಕೊಟ್ಟಿಲ್ಲ ಎಂದ ಮೇಲೆ ವೋಟ್ ಯಾಕೆ ಮಾಡಬೇಕು. ಯುಜಿಡಿ ಮಾಡಿಸಿಲ್ಲ, ಒಂದು ರಸ್ತೆ ಮಾಡಿಕೊಟ್ಟಿಲ್ಲ ಹಾಗಾಗಿ ನಾವು ಯಾರಿಗೂ ವೋಟ್ ಮಾಡಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಈ ನಡುವೆ ಗ್ರಾಮಸ್ಥರ ಮನವೊಲಿಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದು ಗ್ರಾಮಸ್ಥರು ಮಾತ್ರ ಯಾವುದಕ್ಕೂ ಒಪ್ಪುತ್ತಿಲ್ಲ. ನಮ್ಮದು ಕೊನೆಯ ಗ್ರಾಮ ಎಂದು ಯಾರು ತಿರುಗಿಯೂ ನೋಡಲ್ಲ. ಈ ಹಿನ್ನೆಲೆ ನಾವೆಲ್ಲ ವೋಟ್ ಮಾಡಬಾರದು ಎಂದು ಡಿಸೈಡ್ ಮಾಡಿದ್ದೇವೆ ಎಂದು ಅಧಿಕಾರಿಗಳಿಗೆಯೇ ತಿಳಿ ಹೇಳಿ ಕಳಿಸಿದ್ದಾರೆ. ಇತ್ತ ಮತದಾರರು ಬಾರದೆ ಚುನಾವಣೆ ಅಧಿಕಾರಿಗಳು ಸುಮ್ಮನೆ ಕುಳಿತಿರುವ ದೃಶ್ಯಗಳು ಕಂಡು ಬಂದಿವೆ.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ