AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆ ಹತ್ತಾದರೂ ಮತಗಟ್ಟೆಯತ್ತ ಸುಳಿಯದ ಮತದಾರರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ

ಮೈಸೂರು ಜಿಲ್ಲೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದು ಚುನಾವಣಾ ಅಧಿಕಾರಿಗಳು ಮನವೊಲಿಸಲು ಮುಂದಾಗಿದ್ದಾರೆ.

ಗಂಟೆ ಹತ್ತಾದರೂ ಮತಗಟ್ಟೆಯತ್ತ ಸುಳಿಯದ ಮತದಾರರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ
ಮತಗಟ್ಟೆ
ಆಯೇಷಾ ಬಾನು
|

Updated on: May 10, 2023 | 10:11 AM

Share

ಮೈಸೂರು: ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ(Karnataka Assembly Elections 2023). ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತ ಚಲಾಯಿಸುವ ಮೂಲಕ ಇಡೀ ರಾಜ್ಯ ಹಬ್ಬದ ಸಂಭ್ರಮದಲ್ಲಿ ಮುಳುಗಿದೆ. ಆದ್ರೆ ಚಾಮುಂಡೇಶ್ವರಿ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಗ್ರಾಮಸ್ಥರು ಮತ ಹಾಕುವುದಿಲ್ಲ ಎಂದು ಮತದಾನ ಬಹಿಷ್ಕರಿಸಿದ್ದಾರೆ. ಮೈಸೂರು ಜಿಲ್ಲೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಏಳಿಗೆಹುಂಡಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದು ಚುನಾವಣಾ ಅಧಿಕಾರಿಗಳು ಮನವೊಲಿಸಲು ಮುಂದಾಗಿದ್ದಾರೆ.

ಇಂದು ಮತದಾನ ಹಿನ್ನೆಲೆ ಚುನಾವಣೆ ಅಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡು ಬೆಳಗ್ಗೆ 7 ಗಂಟೆಯಿಂದಲೂ ಕಾಯುತ್ತಿದ್ದಾರೆ. ಆದ್ರೆ ಇದುವರೆಗೂ ಒಬ್ಬ ಮತದಾರನೂ ಮತಗಟ್ಟೆಗೆ ಭೇಟಿ ನೀಡಿಲ್ಲ. ಅದರಲ್ಲೂ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಸಹ ಮತಗಟ್ಟೆಯತ್ತ ತಲೆ ಹಾಕಿಲ್ಲ. ಇಡೀ ಗ್ರಾಮವೇ ಮತದಾನ ಬಹಿಷ್ಕರಿಸಿದೆ.

ಇದನ್ನೂ ಓದಿ: ದ್ವೀಪ ಗ್ರಾಮದ ರೈತರಿಗೀಗ ಭೂಮಿ ಕಳೆದುಕೊಳ್ಳುವ ಆತಂಕ; ಸಾಗರದ ಶರಾವತಿ ಹಿನ್ನೀರಿನ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ನಾವ್ಯಾಕೆ ವೋಟ್ ಹಾಕಬೇಕು. ತಮ್ಮ 5 ವರ್ಷ ಅವಧಿಯಲ್ಲಿ ಒಂದು ರೋಡ್ ಸಹ ಮಾಡಿಸಿಲ್ಲ. ಗ್ರಾಮಕ್ಕೆ ಭೇಟಿ ಕೊಟ್ಟಿಲ್ಲ ಎಂದ ಮೇಲೆ ವೋಟ್ ಯಾಕೆ ಮಾಡಬೇಕು. ಯುಜಿಡಿ ಮಾಡಿಸಿಲ್ಲ, ಒಂದು ರಸ್ತೆ ಮಾಡಿಕೊಟ್ಟಿಲ್ಲ ಹಾಗಾಗಿ ನಾವು ಯಾರಿಗೂ ವೋಟ್ ಮಾಡಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಈ ನಡುವೆ ಗ್ರಾಮಸ್ಥರ ಮನವೊಲಿಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದು ಗ್ರಾಮಸ್ಥರು ಮಾತ್ರ ಯಾವುದಕ್ಕೂ ಒಪ್ಪುತ್ತಿಲ್ಲ. ನಮ್ಮದು ಕೊನೆಯ ಗ್ರಾಮ ಎಂದು ಯಾರು ತಿರುಗಿಯೂ ನೋಡಲ್ಲ. ಈ ಹಿನ್ನೆಲೆ ನಾವೆಲ್ಲ ವೋಟ್ ಮಾಡಬಾರದು ಎಂದು ಡಿಸೈಡ್ ಮಾಡಿದ್ದೇವೆ ಎಂದು ಅಧಿಕಾರಿಗಳಿಗೆಯೇ ತಿಳಿ ಹೇಳಿ ಕಳಿಸಿದ್ದಾರೆ. ಇತ್ತ ಮತದಾರರು ಬಾರದೆ ಚುನಾವಣೆ ಅಧಿಕಾರಿಗಳು ಸುಮ್ಮನೆ ಕುಳಿತಿರುವ ದೃಶ್ಯಗಳು ಕಂಡು ಬಂದಿವೆ.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್