AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಶಾಸಕ

ನೂತನ ಶಾಸಕರು ಅಥವಾ ಸಚಿವರು ದೇವರು ಹೆಸರು, ಸಂವಿಧಾನ ಹಾಗೂ ರೈತರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸುವುದು ಸಾಮಾನ್ಯ. ದೇವರು ಅಥವಾ ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀರಿಸಬೇಕು. ಆದ್ರೆ, ಇಲ್ಲೋರ್ವ ಶಾಸಕ ಡಿಕೆ ಶಿವಕುಮಾರ್ ಅವರ ಹೆಸರಿನ ಮೇಲೆ ಪ್ರಮಾಣವಚನ ಸ್ವೀರಿಸಿ ಎಲ್ಲರ ಗಮನಸೆಳೆದಿದ್ದಾರೆ.

ಡಿಕೆ ಶಿವಕುಮಾರ್​ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಶಾಸಕ
ಶಾಸಕ ಬಸವರಾಜ್ ಶಿವಗಂಗಾ, ಡಿ.ಕೆ. ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on: May 22, 2023 | 1:32 PM

Share

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದ್ದು,. ಮೊದಲ ಎರಡು ದಿನ 224 ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಪ್ರಕ್ರಿಯೆ ನಡೆಯಲಿದೆ. ಅದರಂತೆ ಇಂದು(ಮೇ 22) ಮೊದಲ ದಿನದ ಅಧಿವೇಶದಲ್ಲಿ ನೂತನ ಶಾಸಕರು ದೇವರು, ಸಂವಿಧಾನ ಹಾಗೂ ರೈತರ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿದರು. ಇನ್ನು ಇದೇ ವೇಳೆ ಶಾಸಕರೊಬ್ಬರು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಗಮನಸೆಳೆದಿದ್ದಾರೆ. ಹೌದು… ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣವಚನ ಸ್ವೀಕರಿಸಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು. ಇದು ಎಲ್ಲರ ಹುಬ್ಬೇರುವಂತೆ ಮಾಡಿತು.

ಇದನ್ನೂ ಓದಿ: Karnataka Assembly Session Live: ನೂತನ ಶಾಸಕರಿಂದ ಪ್ರಮಾಣವಚನ ಸ್ವೀಕಾರ

ಇನ್ನು ಬಸವರಾಜ್ ಶಿವಗಂಗಾ ಅವರ ಪ್ರಮಾಣವಚನಕ್ಕೆ ಸದನದಲ್ಲಿ ಆಕ್ಷೇಪ ವ್ಯಕ್ತವಾಯಿತು. ಕೂಡಲೇ ಮಧ್ಯೆ ಪ್ರವೇಶಿಸಿದ ಹಂಗಾಮಿ ಸ್ಪೀಕರ್​ ಆರ್​.ವಿ.ದೇಶಪಾಂಡೆ ಗೊಂದಲ ಬಗೆಹರಿಸಿದರು, ಅಲ್ಲದೇ ವ್ಯಕ್ತಿ ಹೆಸರಿನ ಮೇಲೆ ಪ್ರಮಾಣ ಮಾಡಿಸದಂತೆ ವಿಧಾನಸಭೆ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಸಂವಿಧಾನದ ಪ್ರಕಾರ ಪ್ರಮಾಣವಚನ ಸ್ವೀಕರಿಸಲು ಸ್ಪೀಕರ್​ ದೇಶಪಾಂಡೆ ಅವರು ನೂತನ ಶಾಸಕರಿಗೆ ಖಡಕ್ ಸೂಚನೆ ನೀಡಿದರು. ದೇವರು, ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ಅದು ಬಿಟ್ಟು ಬೇರೆ ಯಾವ ಹೆಸರಿನಲ್ಲೂ ಪ್ರಮಾಣವಚನ ಸ್ವೀಕರಿಸಬೇಡಿ ಎಂದು ಸಲಹೆ ನೀಡಿದರು.

ಮೊದಲಿಗೆ ವರುಣಾ ಕ್ಷೇತ್ರದ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರೆ, ಎರಡನೇಯವರಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನಕಪುರ ಕ್ಷೇತ್ರದ ಶಾಸಕರಾಗಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್​ ಜಾರಕಿಹೊಳಿ, ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ, ಬಿಟಿಎಂ ಲೇಔಟ್​ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ, ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್​ ಸಂವಿಧಾನದ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಸವನಬಾಗೇವಾಡಿ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲ್ ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇನ್ನು ಬಿಜೆಪಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮತದಾರರು ಹಾಗೂ ತಮ್ಮ ಮನೆ ದೇವರಾದ ಸತ್ಯಸಾರಮಣಿ ಮತ್ತು ಸತ್ಯಪದನಾದಿ ಅಮ್ಮ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?