AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಮೂಲಸೌಕರ್ಯ ಆಗ್ರಹಿಸಿ ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ವಿಧಾನಸಭಾ ಚುನಾವಣೆಗೆ ಕೆಲವೆ ದಿನಗಳು ಬಾಕಿ ಇರುವಾಗಲೇ ಬಹಿಷ್ಕಾರದ ಕೂಗು ಆರಂಭವಾಗಿದೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ನಂದಿಗಾವೆ, ದಂಡುಬೆಟ್ಟಹಾರ ಗ್ರಾಮದ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಬ್ಯಾನರ್ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು: ಮೂಲಸೌಕರ್ಯ ಆಗ್ರಹಿಸಿ ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ,  ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಚಿಕ್ಕಮಗಳೂರು ಚುನಾವಣಾ ಬಹಿಷ್ಕಾರ
ಕಿರಣ್ ಹನುಮಂತ್​ ಮಾದಾರ್
|

Updated on:Mar 21, 2023 | 12:27 PM

Share

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಗೆ(Karnataka Assembly Election) ಕೆಲವೇ ದಿನಗಳು ಬಾಕಿ ಇರುವಾಗಲೆ ಚುನಾವಣೆ ಬಹಿಷ್ಕಾರದ ಕೂಗು ಆರಂಭವಾಗಿದೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ನಂದಿಗಾವೆ, ದಂಡುಬೆಟ್ಟಹಾರದ ಗ್ರಾಮಸ್ಥರು ಚುನಾವಣಾ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ಕಳೆದ ಬಾರಿ ಸುರಿದ ಮಳೆಯಿಂದ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ಎಷ್ಟು ಬಾರಿ ಮನವಿ ಸಲ್ಲಿಸಿದರೂ ಜನಪ್ರತಿನಿಧಿಗಳು ಕಿವಿಗೊಟ್ಟಿಲ್ಲ.  ಈ ಹಿನ್ನಲೆ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಚುನಾವಣೆ ಬಹಿಷ್ಕರಿಸುವುದಾಗಿ  ಹೇಳಿದ್ದಾರೆ.

ಮತದಾರರ ಒಲೈಕೆಗೆ ಹೆಚ್ಚಾದ ಗಿಫ್ಟ್ ಪಾಲಿಟಿಕ್ಸ್, ಪೊಲೀಸ್ ಇಲಾಖೆಯಿಂದ ಹೈ ಅಲರ್ಟ್

ಚಿಕ್ಕಮಗಳೂರು:  ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಜಿಲ್ಲಾ ಪೊಲೀಸ್ ಇಲಾಖೆ  ಹೈ ಅಲರ್ಟ್ ಘೋಷಣೆ ಮಾಡಿದ್ದು, ಜಿಲ್ಲೆಯಲ್ಲಿ 18 ಚೆಕ್ ಪೋಸ್ಟ್ ನಿರ್ಮಾಣ ಮಾಡಿದೆ. ಸಾರ್ವಜನಿಕರು ಚುನಾವಣೆ ಅಕ್ರಮದ ಬಗ್ಗೆ ತಿಳಿಸಲು  ಕಂಪ್ಲೇಂಟ್ ಮಾನಿಟರಿಂಗ್ ಸೆಲ್ ತೆರೆಯಲಾಗಿದ್ದು, ಇದು  ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸಲಿದೆ.  8277991000 ಗೆ ಕರೆ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಲು ಪೊಲೀಸ್ ಇಲಾಖೆ ಮನವಿ ಮಾಡಿದೆ.

ಇದನ್ನೂ ಓದಿ: Double Bridge! ಚಿಕ್ಕಮಗಳೂರು: 30 ಮನೆಗಳಿರುವ ಕುಗ್ರಾಮಕ್ಕೆ ಎರಡು ಸೇತುವೆ ಭಾಗ್ಯ ಕಲ್ಪಿಸಿದ ಸರ್ಕಾರ, ಗ್ರಾಮಸ್ಥರು ಹೇಳೋದೇನು?

ಮತದಾರರನ್ನ ಸೆಳೆಯಲು ಸ್ಥಳೀಯ ಮುಖಂಡರು ಸೀರೆ, ಹಣ, ಕುಕ್ಕರ್ ಹಂಚಿಕೆ ಮಾಡಿದ್ದರು. ಗಿಫ್ಟ್ ಪಾಲಿಟಿಕ್ಸ್ ಹೆಚ್ಚಾದ ಹಿನ್ನೆಲೆ ಈ ಕ್ರಮಕ್ಕೆ ಮುಂದಾಗಿದ್ದು, ಜಿಲ್ಲೆಯ ಗಡಿ ಭಾಗ ಸೇರಿದಂತೆ ನಗರ ಸೂಕ್ಷ್ಮ ಪ್ರದೇಶದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ನಗರ ಪ್ರವೇಶಿಸುವ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಮಾಗಡಿ, ಕೊಟ್ಟಿಗೆಹಾರ, ಎಂಸಿ ಹಳ್ಳಿ, ತನಿಕೋಡು, ಕಮ್ಮರಡಿ ಸೇರಿದಂತೆ ಒಟ್ಟು 18 ಕಡೆ ಚೆಕ್​ಪೊಸ್ಟ್ ನಿರ್ಮಾಣ ಮಾಡಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Tue, 21 March 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?