AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ತಪ್ಪಿದ ಕಾಂಗ್ರೆಸ್ ಟಿಕೆಟ್, ರಘು ಆಚಾರ್ ಜೆಡಿಎಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಎಂಎಲ್​ಸಿ ರಘು ಆಚಾರ್ ಅವರು ಏಪ್ರಿಲ್ 14ರಂದು ಜೆಡಿಎಸ್ ಪಕ್ಷ ಸೇರಲಿದ್ದಾರೆ. ಜೆಡಿಎಸ್ ಎಂಎಲ್​ಸಿ ಟಿಎ ಶರವಣ ಅವರನ್ನು ಭೇಟಿಯಾದ ನಂತರ ರಘು ಆಚಾರ್ ಈ ಬಗ್ಗೆ ಘೋಷಿಸಿದ್ದಾರೆ.

ಚಿತ್ರದುರ್ಗ: ತಪ್ಪಿದ ಕಾಂಗ್ರೆಸ್ ಟಿಕೆಟ್, ರಘು ಆಚಾರ್ ಜೆಡಿಎಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್
ಕಾಂಗ್ರೆಸ್ ಮಾಜಿ ಎಂಎಲ್​ಸಿ ರಘು ಆಚಾರ್
Rakesh Nayak Manchi
|

Updated on:Apr 07, 2023 | 4:39 PM

Share

ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್ ಬಿಡುಗಡೆ ಮಾಡಿದ ಮೊದಲ ಹಂತದ ಪಟ್ಟಿಯಲ್ಲೂ ಟಿಕೆಟ್ ಘೋಷಿಸಿಲ್ಲ, ಎರಡನೇ ಹಂತದ ಪಟ್ಟಿಯಲ್ಲೂ ತಮ್ಮ ಹೆಸರು ಕಾಣಿಸಿಲ್ಲ ಎಂದು ಅಸಮಾಧಾನಗೊಂಡಿರುವ ಮಾಜಿ ಎಂಎಲ್​ಸಿ ರಘು ಆಚಾರ್ (Raghu Achar), ಜೆಡಿಎಸ್ ಸೇರ್ಪಡೆಗೊಂಡು ಕಾಂಗ್ರೆಸ್ ವಿರುದ್ಧ ತೊಡೆತಟ್ಟಲು ಸಜ್ಜಾಗುತ್ತಿದ್ದಾರೆ. ಇಂದು ಜೆಡಿಎಸ್ ಎಂಎಲ್​ಸಿ ಟಿಎ ಶರವಣ ಅವರನ್ನು ಭೇಟಿಯಾದ ನಂತರ ಚಿತ್ರದುರ್ಗದಲ್ಲಿ ಹೇಳಿಕೆ ನೀಡಿದ ರಘು ಆಚಾರ್, ಏಪ್ರಿಲ್ 14ರ ಮಧ್ಯಾಹ್ನ 12.07ಕ್ಕೆ ಜೆಡಿಎಸ್ (JDS Karnataka)​ ಸೇರ್ಪಡೆಯಾಗುತ್ತೇನೆ. ಕಾಂಗ್ರೆಸ್​ ಟಿಕೆಟ್​ ಕೈತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್​ ಸೇರ್ಪಡೆಯಾಗುತ್ತಿದ್ದೇನೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಪಕ್ಷದ ಕಚೇರಿ ಜೆ ಪಿ ಭವನದಲ್ಲಿ ಸೇರ್ಪಡೆಯಾಗಲಿದ್ದೇನೆ ಎಂದರು.

ಚಿತ್ರದುರ್ಗ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಜೆಡಿಎಸ್​ ಗೆಲ್ಲಿಸಲು ಶ್ರಮಿಸುತ್ತೇನೆ. ಜಿಲ್ಲೆಯ ಆರಕ್ಕೆ ಆರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೋಲಲಿದೆ. ಸ್ವಾಭಿಮಾನಕ್ಕೆ ಚ್ಯುತಿ ತಂದವರಿಗೆ ಚುನಾವಣೆಯಲ್ಲಿ ಉತ್ತರ ನೀಡುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ರಘು ಆಚಾರ್ ಕಿಡಿಕಾರಿದರು. ಜೆಡಿಎಸ್ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ವರಿಷ್ಠರು ನನಗೆ ಟಿಕೆಟ್​ ನೀಡುವ ಬಗ್ಗೆ ತೀರ್ಮಾನಿಸುತ್ತಾರೆ. ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸೂಚಿಸಿದರೂ ನಾನು ಸಿದ್ಧನಾಗಿರುವೆ. ಇಲ್ಲವಾದರೆ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುತ್ತೇನೆ. ಜೆಡಿಎಸ್​ ಸೇರ್ಪಡೆ ಬಗ್ಗೆ ಈಗಷ್ಟೇ ಚರ್ಚೆಯಾಗಿದೆ, ಟಿಕೆಟ್​ಗೆ ಸಮಯಬೇಕು. ಏಪ್ರಿಲ್ 17ರಂದು ಚಿತ್ರದುರ್ಗ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದರು.

ಇದನ್ನೂ ಓದಿ: ವಿಜಯೇಂದ್ರ ಗೆಲ್ಲಿಸಲು ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್​-ಬಿಜೆಪಿ ಮ್ಯಾಚ್ ಫಿಕ್ಸಿಂಗ್; ಸಿದ್ದರಾಮಯ್ಯ ಮನೆಯಲ್ಲಿ ಕಾರ್ಯಕರ್ತರ ಗಲಾಟೆ

ಮಾಜಿ ಎಂಎಲ್​ಸಿ ರಘು ಆಚಾರ್ ನಾಯಕತ್ವದ ವಿರುದ್ಧ ಆಕ್ರೋಶ ವ್ಯಕ್ತವಾದ ನಡುವೆ ಬಿಡುಗಡೆಯಾದ ಕಾಂಗ್ರೆಸ್ 2ನೇ ಪಟ್ಟಿಯಲ್ಲಿ ಚಿತ್ರದುರ್ಗದಿಂದ ಕೆ.ಸಿ.ವಿರೇಂದ್ರ ಪಪ್ಪಿಗೆ ಕೈ ಟಿಕೆಟ್ ಘೋಷಣೆಯಾಗಿದೆ. ಇದರಿಂದ ಅಸಮಾಧಾನಗೊಂಡ ರಘು ಆಚಾರ್, ಸಿದ್ದರಾಮಯ್ಯ ಅವರೇ ನನಗೆ ಸ್ಪರ್ಧಿಸುವಂತೆ ಹೇಳಿದ್ದರು. ಎಂಎಲ್​ಸಿ ಬೇಡ, ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಎಂದು ಕೈ ನಾಯಕರು ಹೇಳಿದ್ದರು. ಈಗ ಅರ್ಧ ದಾರಿಯಲ್ಲೇ ಕತ್ತು ಕೊಯ್ದಿದ್ದಾರೆ ಎಂದು ಈ ಹಿಂದೆ ಆಕ್ರೋಶ ಹೊರಹಾಕಿದ್ದರು.

ಜಾತಿ, ಮತ ಬಲ ಇಲ್ಲವೆಂಬ ಸಣ್ಣ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಈ ಜಿಲ್ಲೆಯ ಜನ ಇದಕ್ಕೆ ಉತ್ತರ ನೀಡುತ್ತಾರೆ. ನನಗೊಬ್ಬನಿಗೆ ಅಲ್ಲ, ಮಡಿವಾಳ ಸಮುದಾಯದ, ತರೀಕೆರೆ ಕ್ಷೇತ್ರದ ಆಕಾಂಕ್ಷಿ ಆಗಿದ್ದ ಗೋಪಿಕೃಷ್ಣ ಅವರಿಗೂ ಅನ್ಯಾಯ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. 197 ಸಣ್ಣ ಸಮುದಾಯಗಳಿಗೆ ಕಾಂಗ್ರೆಸ್ ಒಂದು ಸ್ಥಾನ ನೀಡಿಲ್ಲ. ಆ ಸಮುದಾಯಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೆ ಗೌರವ ಇದೆಯೋ, ಇಲ್ಲವೊ ಗೊತ್ತಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ರಘು ಆಚಾರ್ ಅಸಮಧಾನ ಹೊರಹಾಕಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Fri, 7 April 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ