AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ತಪ್ಪಿದ ಕಾಂಗ್ರೆಸ್ ಟಿಕೆಟ್, ರಘು ಆಚಾರ್ ಜೆಡಿಎಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಎಂಎಲ್​ಸಿ ರಘು ಆಚಾರ್ ಅವರು ಏಪ್ರಿಲ್ 14ರಂದು ಜೆಡಿಎಸ್ ಪಕ್ಷ ಸೇರಲಿದ್ದಾರೆ. ಜೆಡಿಎಸ್ ಎಂಎಲ್​ಸಿ ಟಿಎ ಶರವಣ ಅವರನ್ನು ಭೇಟಿಯಾದ ನಂತರ ರಘು ಆಚಾರ್ ಈ ಬಗ್ಗೆ ಘೋಷಿಸಿದ್ದಾರೆ.

ಚಿತ್ರದುರ್ಗ: ತಪ್ಪಿದ ಕಾಂಗ್ರೆಸ್ ಟಿಕೆಟ್, ರಘು ಆಚಾರ್ ಜೆಡಿಎಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್
ಕಾಂಗ್ರೆಸ್ ಮಾಜಿ ಎಂಎಲ್​ಸಿ ರಘು ಆಚಾರ್
Rakesh Nayak Manchi
Rakesh Nayak Manchi|

Updated on:Apr 07, 2023 | 4:39 PM

Share

ಮುಖ್ಯಾಂಶಗಳು

  • ಕಾಂಗ್ರೆಸ್ ಟಿಕೆಟ್ ತಪ್ಪಿದ ಹಿನ್ನೆಲೆ ಏಪ್ರಿಲ್ 14ರಂದು ಜೆಡಿಎಸ್ ಸೇರಲಿರುವ ರಘು ಆಚಾರ್
  • ಸ್ವಾಭಿಮಾನಕ್ಕೆ ಚ್ಯುತಿ ತಂದವರಿಗೆ ಚುನಾವಣೆಯಲ್ಲಿ ಉತ್ತರ ನೀಡುತ್ತೇನೆ: ರಘು ಆಚಾರ್
  • ಏಪ್ರಿಲ್ 17ರಂದು ಚಿತ್ರದುರ್ಗ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ: ರಘು ಆಚಾರ್

ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್ ಬಿಡುಗಡೆ ಮಾಡಿದ ಮೊದಲ ಹಂತದ ಪಟ್ಟಿಯಲ್ಲೂ ಟಿಕೆಟ್ ಘೋಷಿಸಿಲ್ಲ, ಎರಡನೇ ಹಂತದ ಪಟ್ಟಿಯಲ್ಲೂ ತಮ್ಮ ಹೆಸರು ಕಾಣಿಸಿಲ್ಲ ಎಂದು ಅಸಮಾಧಾನಗೊಂಡಿರುವ ಮಾಜಿ ಎಂಎಲ್​ಸಿ ರಘು ಆಚಾರ್ (Raghu Achar), ಜೆಡಿಎಸ್ ಸೇರ್ಪಡೆಗೊಂಡು ಕಾಂಗ್ರೆಸ್ ವಿರುದ್ಧ ತೊಡೆತಟ್ಟಲು ಸಜ್ಜಾಗುತ್ತಿದ್ದಾರೆ. ಇಂದು ಜೆಡಿಎಸ್ ಎಂಎಲ್​ಸಿ ಟಿಎ ಶರವಣ ಅವರನ್ನು ಭೇಟಿಯಾದ ನಂತರ ಚಿತ್ರದುರ್ಗದಲ್ಲಿ ಹೇಳಿಕೆ ನೀಡಿದ ರಘು ಆಚಾರ್, ಏಪ್ರಿಲ್ 14ರ ಮಧ್ಯಾಹ್ನ 12.07ಕ್ಕೆ ಜೆಡಿಎಸ್ (JDS Karnataka)​ ಸೇರ್ಪಡೆಯಾಗುತ್ತೇನೆ. ಕಾಂಗ್ರೆಸ್​ ಟಿಕೆಟ್​ ಕೈತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್​ ಸೇರ್ಪಡೆಯಾಗುತ್ತಿದ್ದೇನೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಪಕ್ಷದ ಕಚೇರಿ ಜೆ ಪಿ ಭವನದಲ್ಲಿ ಸೇರ್ಪಡೆಯಾಗಲಿದ್ದೇನೆ ಎಂದರು.

ಚಿತ್ರದುರ್ಗ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಜೆಡಿಎಸ್​ ಗೆಲ್ಲಿಸಲು ಶ್ರಮಿಸುತ್ತೇನೆ. ಜಿಲ್ಲೆಯ ಆರಕ್ಕೆ ಆರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೋಲಲಿದೆ. ಸ್ವಾಭಿಮಾನಕ್ಕೆ ಚ್ಯುತಿ ತಂದವರಿಗೆ ಚುನಾವಣೆಯಲ್ಲಿ ಉತ್ತರ ನೀಡುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ರಘು ಆಚಾರ್ ಕಿಡಿಕಾರಿದರು. ಜೆಡಿಎಸ್ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ವರಿಷ್ಠರು ನನಗೆ ಟಿಕೆಟ್​ ನೀಡುವ ಬಗ್ಗೆ ತೀರ್ಮಾನಿಸುತ್ತಾರೆ. ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸೂಚಿಸಿದರೂ ನಾನು ಸಿದ್ಧನಾಗಿರುವೆ. ಇಲ್ಲವಾದರೆ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುತ್ತೇನೆ. ಜೆಡಿಎಸ್​ ಸೇರ್ಪಡೆ ಬಗ್ಗೆ ಈಗಷ್ಟೇ ಚರ್ಚೆಯಾಗಿದೆ, ಟಿಕೆಟ್​ಗೆ ಸಮಯಬೇಕು. ಏಪ್ರಿಲ್ 17ರಂದು ಚಿತ್ರದುರ್ಗ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದರು.

ಇದನ್ನೂ ಓದಿ: ವಿಜಯೇಂದ್ರ ಗೆಲ್ಲಿಸಲು ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್​-ಬಿಜೆಪಿ ಮ್ಯಾಚ್ ಫಿಕ್ಸಿಂಗ್; ಸಿದ್ದರಾಮಯ್ಯ ಮನೆಯಲ್ಲಿ ಕಾರ್ಯಕರ್ತರ ಗಲಾಟೆ

ಮಾಜಿ ಎಂಎಲ್​ಸಿ ರಘು ಆಚಾರ್ ನಾಯಕತ್ವದ ವಿರುದ್ಧ ಆಕ್ರೋಶ ವ್ಯಕ್ತವಾದ ನಡುವೆ ಬಿಡುಗಡೆಯಾದ ಕಾಂಗ್ರೆಸ್ 2ನೇ ಪಟ್ಟಿಯಲ್ಲಿ ಚಿತ್ರದುರ್ಗದಿಂದ ಕೆ.ಸಿ.ವಿರೇಂದ್ರ ಪಪ್ಪಿಗೆ ಕೈ ಟಿಕೆಟ್ ಘೋಷಣೆಯಾಗಿದೆ. ಇದರಿಂದ ಅಸಮಾಧಾನಗೊಂಡ ರಘು ಆಚಾರ್, ಸಿದ್ದರಾಮಯ್ಯ ಅವರೇ ನನಗೆ ಸ್ಪರ್ಧಿಸುವಂತೆ ಹೇಳಿದ್ದರು. ಎಂಎಲ್​ಸಿ ಬೇಡ, ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಎಂದು ಕೈ ನಾಯಕರು ಹೇಳಿದ್ದರು. ಈಗ ಅರ್ಧ ದಾರಿಯಲ್ಲೇ ಕತ್ತು ಕೊಯ್ದಿದ್ದಾರೆ ಎಂದು ಈ ಹಿಂದೆ ಆಕ್ರೋಶ ಹೊರಹಾಕಿದ್ದರು.

ಜಾತಿ, ಮತ ಬಲ ಇಲ್ಲವೆಂಬ ಸಣ್ಣ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಈ ಜಿಲ್ಲೆಯ ಜನ ಇದಕ್ಕೆ ಉತ್ತರ ನೀಡುತ್ತಾರೆ. ನನಗೊಬ್ಬನಿಗೆ ಅಲ್ಲ, ಮಡಿವಾಳ ಸಮುದಾಯದ, ತರೀಕೆರೆ ಕ್ಷೇತ್ರದ ಆಕಾಂಕ್ಷಿ ಆಗಿದ್ದ ಗೋಪಿಕೃಷ್ಣ ಅವರಿಗೂ ಅನ್ಯಾಯ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. 197 ಸಣ್ಣ ಸಮುದಾಯಗಳಿಗೆ ಕಾಂಗ್ರೆಸ್ ಒಂದು ಸ್ಥಾನ ನೀಡಿಲ್ಲ. ಆ ಸಮುದಾಯಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೆ ಗೌರವ ಇದೆಯೋ, ಇಲ್ಲವೊ ಗೊತ್ತಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ರಘು ಆಚಾರ್ ಅಸಮಧಾನ ಹೊರಹಾಕಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Fri, 7 April 23

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ