AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸಿದ್ದರಾಮಯ್ಯ ಪ್ರಚಾರದ ನಂತರ ಜಾತಿಗಳ ಮುಖಂಡರ ನಡುವೆ ಜಗಳ, ಬೂದಿ ಮುಚ್ಚಿದ ಕೆಂಡದಂತಾದ ದಾಸನಪುರ ಗ್ರಾಮ

ದಾಸನೂರಲ್ಲೂ ನೂರಕ್ಕೆ ನೂರು ಬಸವ ಪುತ್ಥಳಿ ಮಾಡಿಸುತ್ತೇವೆ ಎಂದು ಸಿದ್ದರಾಮಯ್ಯ ಅವರು ಭರವಸೆ ನೀಡಿ ತೆರಳಿದ್ದಾರೆ. ಅಷ್ಟರಲ್ಲೇ ಇದೇ ವಿಚಾರಕ್ಕೆ ಜಾತಿಗಳ ಪ್ರಮುಖರ ನಡುವೆ ಜಗಳ ನಡೆದಿದೆ.

ಮೈಸೂರು: ಸಿದ್ದರಾಮಯ್ಯ ಪ್ರಚಾರದ ನಂತರ ಜಾತಿಗಳ ಮುಖಂಡರ ನಡುವೆ ಜಗಳ, ಬೂದಿ ಮುಚ್ಚಿದ ಕೆಂಡದಂತಾದ ದಾಸನಪುರ ಗ್ರಾಮ
ದಾಸನಪುರ ಗ್ರಾಮದಲ್ಲಿ ಜಗಳ
Rakesh Nayak Manchi
|

Updated on:Apr 22, 2023 | 10:00 PM

Share

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಪ್ರಚಾರ ಆರಂಭಿಸಿದ್ದು, ಇಂದು ಮೈಸೂರು ನಂಜನಗೂಡು ತಾಲೂಕಿನ ದಾಸನಪುರದಲ್ಲೂ ಅಬ್ಬರದ ಪ್ರಚಾರ ನಡೆಸಿದರು. ಇದೇ ವೇಳೆ ಬಸವ ಬಳಗದ ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ (Siddaramaiah) ಅವರು, ಬಸವ ಪುತ್ಥಳಿ ಮಾಡಿಸುತ್ತೇವೆ ಎಂದು ಭರವಸೆ ನೀಡಿ ತೆರಳಿದರು. ಅಷ್ಟರಲ್ಲೇ ಈ ವಿಚಾರವಾಗಿ ಜಾತಿಯ ಎರಡು ಗುಂಪಿನ ನಡುವೆ ವಾಗ್ವಾದ ಆರಂಭವಾಗಿದೆ. ಪರಸ್ಪರ ಕೂಗಾಟ, ತಳ್ಳಾಟ ನಡೆಸಿ ಗಲಾಟೆ ಮಾಡಿಕೊಂಡ ಜನರು ಕಡೆಗೆ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸಪಟ್ಟಿದ್ದು, ಸದ್ಯ ಗ್ರಾಮ ಬೂದಿ ಮುಚ್ಚಿದ ಕೆಂಡದಂತಾಗಿದೆ.

ಚುನಾವಣಾ ಪ್ರಚಾರಕ್ಕೆಂದು ನಂಜನಗೂಡು ತಾಲೂಕಿನ ದಾಸನಪುರ ಗ್ರಾಮಕ್ಕೆ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಬಸವ ಪುತ್ಥಳಿ ಸ್ಥಾಪಿಸುವಂತೆ ಬಸವ ಬಳಗದವರು ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ, ನಾನು ಬಸವನ ಅನುಯಾಯಿ. ಸರ್ಕಾರಿ ಅಧಿಕಾರಿಗಳು ಬಸವಣ್ಣ ಅವರನ್ನು ಅನುಸರಿಸಲಿ ಎಂದು ಕಚೇರಿಯಲ್ಲಿ ಬಸವಣ್ಣನ‌ ಪೋಟೋ ಕಡ್ಡಾಯ ಮಾಡಿಸಿದ್ದೆ. ದಾಸನೂರಲ್ಲೂ ನೂರಕ್ಕೆ ನೂರು ಬಸವ ಪುತ್ಥಳಿ ಮಾಡಿಸುತ್ತೇವೆ, ಬಸವ ಬಳಗ ಹುಡುಗರು ಕೂಡ ಈ ಬಗ್ಗೆ ಅನೇಕ ಬಾರಿ ಮನವಿ ಮಾಡಿದ್ದಾರೆ. ನಾನು ಗೆದ್ದ ಬಳಿಕ ಅದನ್ನು ಮಾಡಿಸುತ್ತೇನೆ ಎಂದು ಭರವಸೆ ಕೊಟ್ಟು ತೆರಳಿದರು.

ಇದನ್ನೂ ಓದಿ: ವೀರಶೈವ ಲಿಂಗಾಯತರ ಬಗ್ಗೆ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ

ಸಿದ್ದರಾಮಯ್ಯ ಭರವಸೆ ನೀಡಿ ಗ್ರಾಮದಿಂದ ತೆರಳುತ್ತಿದ್ದಂತೆ ಇದೇ ವಿಚಾರಕ್ಕೆ ಎರಡು ಗುಂಪು ಗಲಾಟೆ ಆರಂಭಿಸಿದ್ದಾರೆ. ಪರಸ್ಪರ ಕೂಗಾಟ, ತಳ್ಳಾಟ ನಡೆಸಿ ಗಲಾಟೆ ನಡೆಸಿದ ಜನರು ಕಡೆಗೆ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಹಾಗೋ ಹೀಗೋ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದಿದ್ದರೂ ಸದ್ಯ ಗ್ರಾಮವು ಬೂದಿ ಮುಚ್ಚಿದ ಕೆಂಡದಂತಿದೆ.

ಮೈಸೂರು ಜಿಲ್ಲೆಯಲ್ಲಿ ಸಿದ್ದರಾಮಯ್ಯ ಭರ್ಜರಿ ಪ್ರಚಾರ

ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಮಾಸ್ ಲೀಡರ್ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಕಾರೇಮೋಳೆ ಗ್ರಾಮದಲ್ಲಿ ಪ್ರಚಾರ ನಡೆಸಿದ ನಂತರ ನಂಜನಗೂಡು ತಾಲೂಕು, ಸ್ವ ಕ್ಷೇತ್ರ ವರುಣಾ ಕ್ಷೇತ್ರದಲ್ಲೂ ಪ್ರಚಾರ ನಡೆಸಿದರು. ತೆರೆದ ವಾಹನ ಹತ್ತದೆ ಕಾರಿನಲ್ಲೇ ನಿಂತು ಭಾಷಣ ಮಾಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Sat, 22 April 23

Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ