AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadagatta: ರಾಜಕೀಯ ದ್ವೇಷ ಹಿನ್ನೆಲೆ ಗುಂಪು ಘರ್ಷಣೆ: ಪಕ್ಷೇತರ ಹಾಗೂ ಬಿಜೆಪಿ ಅಭ್ಯರ್ಥಿ ಬೆಂಬಲಿಗರ ಮಧ್ಯೆ ಗಲಾಟೆ

ಪಕ್ಷೇತರ ಅಭ್ಯರ್ಥಿ ಗೂಳಿಹಟ್ಟಿ ಶೇಖರ್ ಬೆಂಬಲಿಗ ಗಿರೀಶ್ ಹಾಗೂ ಬಿಜೆಪಿ ಅಭ್ಯರ್ಥಿ ಲಿಂಗಮೂರ್ತಿ ಬೆಂಬಲಿಗ ಓಂಕಾರಪ್ಪ ಮಧ್ಯೆ ಘರ್ಷಣೆ ಉಂಟಾಗಿದ್ದು, ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆಂದು ಓಂಕಾರಪ್ಪ ಹಾಗೂ ಮತ್ತಿತರರ ವಿರುದ್ಧ ಗಿರೀಶ್ ಆರೋಪ ಮಾಡಿದ್ದಾರೆ.

Yadagatta: ರಾಜಕೀಯ ದ್ವೇಷ ಹಿನ್ನೆಲೆ ಗುಂಪು ಘರ್ಷಣೆ: ಪಕ್ಷೇತರ ಹಾಗೂ ಬಿಜೆಪಿ ಅಭ್ಯರ್ಥಿ ಬೆಂಬಲಿಗರ ಮಧ್ಯೆ ಗಲಾಟೆ
ಗುಂಪು ಘರ್ಷಣೆ
ಗಂಗಾಧರ​ ಬ. ಸಾಬೋಜಿ
|

Updated on:Apr 22, 2023 | 7:45 PM

Share

ಮುಖ್ಯಾಂಶಗಳು

  • ಯಾದಗಟ್ಟ ಗ್ರಾಮದಲ್ಲಿ ರಾಜಕೀಯ ದ್ವೇಷದಿಂದ ಗುಂಪು ಘರ್ಷಣೆ
  • ಬಿಜೆಪಿ ಅಭ್ಯರ್ಥಿ ಲಿಂಗಮೂರ್ತಿ ಬೆಂಬಲಿಗ ಓಂಕಾರಪ್ಪ ಮಧ್ಯೆ ಘರ್ಷಣೆ
  • ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆಂದು ಗಿರೀಶ್‌ ಆರೋಪ

ಚಿತ್ರದುರ್ಗ‌: ಜಿಲ್ಲೆಯ ಹೊಸದುರ್ಗ ತಾಲೂಕಿನ ಯಾದಗಟ್ಟ ಗ್ರಾಮದಲ್ಲಿ ರಾಜಕೀಯ ದ್ವೇಷದಿಂದ (political rivalry) ಗುಂಪು ಘರ್ಷಣೆ (Clash) ಉಂಟಾಗಿರುವಂತಹ ಘಟನೆ ನಡೆದಿದೆ. ಪಕ್ಷೇತರ ಅಭ್ಯರ್ಥಿ ಗೂಳಿಹಟ್ಟಿ ಶೇಖರ್ ಬೆಂಬಲಿಗ ಗಿರೀಶ್ ಹಾಗೂ ಬಿಜೆಪಿ ಅಭ್ಯರ್ಥಿ ಲಿಂಗಮೂರ್ತಿ ಬೆಂಬಲಿಗ ಓಂಕಾರಪ್ಪ ಮಧ್ಯೆ ಘರ್ಷಣೆ ಉಂಟಾಗಿದ್ದು, ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆಂದು ಓಂಕಾರಪ್ಪ ಹಾಗೂ ಮತ್ತಿತರರ ವಿರುದ್ಧ ಗಿರೀಶ್ ಆರೋಪ ಮಾಡಿದ್ದಾರೆ. ಸದ್ಯ ಗಿರೀಶ್​ ತಂದೆ ಮರುಳಪ್ಪಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಕ್ಷೇತರ ಅಭ್ಯರ್ಥಿ ಗೂಳಿಹಟ್ಟಿ ಪರ ಪ್ರಚಾರ ಮಾಡಿದ್ದಕ್ಕೆ ಗಲಾಟೆ ಮಾಡಲಾಗಿದೆ ಎನ್ನಲಾಗಿದೆ. ಶ್ರೀರಾಂಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಸೈಲೆಂಟ್ ಸುನೀಲ್​ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬೆಂಬಲಿಗರಿಂದ ಇತ್ತೀಚೆಗೆ ಗಲಾಟೆ ಮಾಡಲಾಗಿತ್ತು. ಭಾಸ್ಕರ್ ರಾವ್​ಗೆ ಟಿಕೆಟ್ ನೀಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಚಾಮರಾಜಪೇಟೆ ಕ್ಷೇತ್ರಕ್ಕೆ ಅನ್ಯಾಯ ಆಗಿದೆ ಅಂತ ಗಲಾಟೆ ಮಾಡಿದ್ದರು.

ಮನಸ್ಸೋ ಇಚ್ಛೆ ಥಳಿಸಿದ ಮಹಿಳೆ

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಅದರಂತೆ ಗ್ರಾಮದ ಮುಖಂಡನೊಬ್ಬ ಹಣ ಕೊಡುವುದಾಗಿ ನಂಬಿಸಿ ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಎಂಬುವವರ ರೋಡ್ ಶೋಗೆ ಕರೆದೊಯ್ದು ಹಣ ಕೊಟ್ಟಿಲ್ಲ. ಇದೇ ಕಾರಣಕ್ಕೆ ಗ್ರಾಮದ ಮಹಿಳೆಯೊಬ್ಬರು ಆತನನ್ನ ಅಟ್ಟಾಡಿಸಿ ಹೊಡೆದಿರುವ ಘಟನೆ ತರೀಕೆರೆ ತಾಲೂಕಿನ ಪಿರಮೇನಹಳ್ಳಿಯಲ್ಲಿ ನಡೆದಿದೆ.

ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ದೂರು

ನಿನ್ನೆ(ಏ.20) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಎಂಬುವವರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ರೋಡ್ ಶೋ ಮಾಡಿದ್ದು, ಗ್ರಾಮದ ಜನರಿಗೆ ಹಣ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿ ಬಳಿಕ ಹಣ ನೀಡಿಲ್ಲ.​ ಇದಕ್ಕೆ ಕೋಪಗೊಂಡ ಗ್ರಾಮಸ್ಥರು ಮುಖಂಡ ಮಂಜು ಮೇಲೆ ಹಲ್ಲೆ ಪರಸ್ಪರ ಬಡಿದಾಡಿಕೊಂಡು ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ವರುಣ ಕ್ಷೇತ್ರದಲ್ಲೇ ನನ್ನನ್ನು ಕಟ್ಟಿಹಾಕಲು ಬಿಜೆಪಿ ಪ್ರಯತ್ನಿಸುತ್ತಿದೆ: ಸಿದ್ದರಾಮಯ್ಯ

ಜಿ ಪರಮೇಶ್ವರ್​ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್​ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿ‌ಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ. ಕಲ್ಲು ತೂರಾಟ ವೇಳೆ ಮಹಿಳಾ ಪೊಲೀಸ್​ ಸಿಬ್ಬಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಾಮಪತ್ರ ಸಲ್ಲಿಕೆ ಬಳಿಕ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಕಚೇರಿ ಮೇಲೆ ಯಾರು ಕಲ್ಲು ಎಸೆದರು ಅಂತಾ ನನಗೆ ಗೊತ್ತಿಲ್ಲ. ನಾನು ನಾಮಪತ್ರ ಸಲ್ಲಿಸಲು ಒಳಗೆ ಹೋದಾಗ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರ ಬಳಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:44 pm, Sat, 22 April 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ