AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಳ್ಳಾಟ ನೂಕಾಟದಿಂದ ಕೋಪಗೊಂಡ ಸಿದ್ದರಾಮಯ್ಯ, ಕಾರ್ಯಕರ್ತನಿಗೆ ಕಪಾಳಮೋಕ್ಷ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್​ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.

ರಮೇಶ್ ಬಿ. ಜವಳಗೇರಾ
|

Updated on:Mar 24, 2023 | 2:35 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕಾಂಗ್ರೆಸ್​ ಕಾರ್ಯಕರ್ತನಿಗೆ(Congress Worker) ಕಪಾಳಮೋಕ್ಷ ಮಾಡಿರುವ ಪ್ರಸಂಗ ನಡೆದಿದೆ. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಾರಿಯೂ ಸಹ ಶಾಸಕ ರಾಮಪ್ಪ ಅವರಿಗೆ ಟಿಕೆಟ್​ ನೀಡಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತರು ಇಂದು (ಮಾರ್ಚ್ 24) ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆಗ್ರಹಿಸಿದರು. ಈ ವೇಳೆ ತಳ್ಳಾಟ ನೂಕಾಟದಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಕಾರ್ಯಕರ್ತನ ಕೆನ್ನೆಗೆ ಬಾರಿಸಿದ್ದಾರೆ. ಇದೀಗ ಈ ವಿಡಿಯೋ ಫುಲ್​ ವೈರಲ್ ಆಗಿದೆ.

ಇದನ್ನೂ ಓದಿ: ಕ್ಷೇತ್ರ ಗೊಂದಲ ನಡುವೆ ಸಿದ್ದರಾಮಯ್ಯ ಮತ್ತೊಂದು ಮೆಗಾ ಪ್ಲ್ಯಾನ್, ಆಪ್ತರ ಮೂಲಕ ಹೈಕಮಾಂಡ್​ಗೆ ಸಂದೇಶ

​ಕಾರ್ಯಕರ್ತನಿಗೆ ಸಿದ್ದರಾಮಯ್ಯ ಕಪಾಳಮೋಕ್ಷ ಮಾಡಿದ್ಯಾಕೆ?

ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಶಾಸಕ ರಾಮಪ್ಪ ಮತ್ತೆ ಅದೇ ಕ್ಷೇತ್ರದಿಂದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇದರಿಂದ ಅವರ ಬೆಂಬಲಿಗರು ಇಂದು ಬೆಂಗಳೂರಿನ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ತಮ್ಮ ನಾಯಕನಿಗೆ ಟಿಕೆಟ್​ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ವೇಳೆ ರಾಮಪ್ಪ ಬೆಂಬಲಿಗರನ್ನು ಸಮಾಧಾನಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ, ಟಿಕೆಟ್ ಆಮೇಲೆ ನೋಡೋಣ, ಸರ್ವೆ ರಿಪೋರ್ಟ್ ಬರಲಿ ಎಂದಿದ್ದಾರೆ.

ಆದರೂ ಸುಮ್ಮನಾಗದ ಶಾಸಕ ರಾಮಪ್ಪ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ಜು ಸುತ್ತುವರೆದರು. ಈ ವೇಳೆ ತಳ್ಳಾಟ ಹಾಗೂ ನೂಕಾಟ ಉಂಟಾಗಿದೆ. ತಮ್ಮ ನಾಯಕನಿಗೇ ಕಾಂಗ್ರೆಸ್​ ಟಿಕೆಟ್​ ನೀಡಬೇಕೆಂದು ಪಟ್ಟು ಹಿಡಿದರು. ಇದರಿಂದ ಭಾರೀ ತಳ್ಳಾಟ ಹಾಗೂ ನೂಕಾಟ ಉಂಟಾಗಿದ್ದು, ಈ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ಕಾರ್ಯಕರ್ತನೋರ್ವನ ಕಾಪಾಳಕ್ಕೆ ಹೊಡೆದಿದ್ದಾರೆ.

Published On - 12:37 pm, Fri, 24 March 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!