AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavaraj Bommai: ಪಿಎಫ್‌ಐ, ಎಸ್‌ಡಿಪಿಐ ಕಪಿಮುಷ್ಟಿಯಲ್ಲಿ ಕಾಂಗ್ರೆಸ್; ಸಿಎಂ ಬೊಮ್ಮಾಯಿ

ಕಾಂಗ್ರೆಸ್‌ ಪಕ್ಷವು ಪಿಎಫ್‌ಐ, ಎಸ್‌ಡಿಪಿಐ ಕಪಿಮುಷ್ಟಿಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು.

Basavaraj Bommai: ಪಿಎಫ್‌ಐ, ಎಸ್‌ಡಿಪಿಐ ಕಪಿಮುಷ್ಟಿಯಲ್ಲಿ ಕಾಂಗ್ರೆಸ್; ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಗಣಪತಿ ಶರ್ಮಾ
|

Updated on: May 06, 2023 | 6:09 PM

Share

ಹಾವೇರಿ: ಕಾಂಗ್ರೆಸ್‌ ಪಕ್ಷವು ಪಿಎಫ್‌ಐ, ಎಸ್‌ಡಿಪಿಐ ಕಪಿಮುಷ್ಟಿಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಗಂಭೀರ ಆರೋಪ ಮಾಡಿದರು. ಹಾವೇರಿ (Haveri) ಹೊರವಲಯದಲ್ಲಿ ನಡೆದ ಬಿಜೆಪಿ ನವ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಪಿಎಫ್‌ಐ, ಎಸ್‌ಡಿಪಿಐ ಒತ್ತಾಯಕ್ಕೆ ಮಣಿದು ಬಜರಂಗದಳ ನಿಷೇಧದ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪ್ರಸ್ತಾಪಿಸಿದೆ. ಬಜರಂಗದಳ ನಿಷೇಧಿಸಲು ಯಾರಿಗಾದರೂ ತಾಕತ್ತು ಇದೆಯೇ ಎಂದು ಪ್ರಶ್ನಿಸಿದರು. ಪ್ರಧಾನಿ ನರೇಂದ್ರ ಮೋದಿ ಹಾವೇರಿ ಜಿಲ್ಲೆಗೆ ಬಂದಿದ್ದಾರೆ. ಇಂದು ಬಿಜೆಪಿಯ ವಿಜಯದ ದಿನ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್​ನವರು ಸುಳ್ಳು ಗ್ಯಾರಂಟಿ ನೀಡುವುದರ ಜತೆಗೆ, ಸುಳ್ಳು ಆರೋಪ ಮಾಡುತ್ತಿದ್ದಾರೆ. ಕೊವಿಡ್ ಸಾಂಕ್ರಾಮಿಕದ ವಿರುದ್ಧ ಯಶಸ್ವಿಯಾಗಿ ಹೋರಾಡಿದ್ದೇವೆ ಎಂದು ಹೇಳಿದರು.

ನಿಷೇಧಿತ ಪಿಎಫ್​ಐ ಜೊತೆ ಗುರುತಿಸಿಕೊಂಡಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಂಘಟನೆಯೊಂದಿಗೆ ಕಾಂಗ್ರೆಸ್​ ಒಳ ಒಪ್ಪಂದ​ ಮಾಡಿಕೊಂಡಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿಸಿತ್ತು. ಕೇರಳ ಕಾಂಗ್ರೆಸ್ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರ ವಿಡಿಯೋವನ್ನು ಬಿಜೆಪಿ ರಾಜ್ಯ ಘಟಕ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಕಾಂಗ್ರೆಸ್ ಮತ್ತು ಎಸ್​ಡಿಪಿಐ ಎರಡೂ ಕೈ ಜೋಡಿಸಿವೆ ಎಂದು ಆರೋಪಿಸಿತ್ತು. ಇದೀಗ ಮುಖ್ಯಮಂತ್ರಿ ಕೂಡ ಅಂಥದ್ದೇ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಪಿಎಫ್‌ಐ, ಎಸ್‌ಡಿಪಿಐ ಮೆಚ್ಚಿಸಲು ಬಜರಂಗದಳ ನಿಷೇಧಿಸಲು ಹೊರಟ ಕಾಂಗ್ರೆಸ್; ಉಡುಪಿಯಲ್ಲಿ ಅನಿಲ್ ಆ್ಯಂಟನಿ

ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಕಾಂಗ್ರೆಸ್​ನ ತುಷ್ಟೀಕರಣದಿಂದ ಕರ್ನಾಟಕದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ಲಿಂಗಾಯತ, ಹಿಂದುಳಿದ ವರ್ಗದ ಜನರು ಸಿಟ್ಟಿನಲ್ಲಿ ಇದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್​ಗೆ ತಕ್ಕ ಪಾಠ ಕಲಿಸಲು ಕಾಯುತ್ತಿದ್ದಾರೆ ಎಂದು ಹೇಳಿದರು. ಹಿಮಾಚಲ ಪ್ರದೇಶದಲ್ಲಿ ಸುಳ್ಳು ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದರು. ಆದರೆ ಸರ್ಕಾರ ರಚಿಸಿದ ಮೇಲೆ ಯಾವುದೇ ಘೋಷಣೆ ಈಡೇರಿಸಿಲ್ಲ. ಕಾಂಗ್ರೆಸ್​ನ ಸುಳ್ಳು ಗ್ಯಾರಂಟಿಗಳ ಇತಿಹಾಸವನ್ನು ಒಮ್ಮೆ ನೋಡಿ ಎಂದು ಮೋದಿ ಕಿಡಿಕಾರಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ